ಮುಂದುವರೆದ ಆಹೋರಾತ್ರಿ ಧರಣಿ ಸತ್ಯಾಗ್ರಹ, ಸ್ಪಂದಿಸದ ಅಧಿಕಾರಿ ವರ್ಗ, ಪಿಡಿಓ ಪಿತೂರಿ ಆರೋಪ
ಚನ್ನಪಟ್ಟಣ: ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಮೈಲನಾಯಕನಹಳ್ಳಿ ಗ್ರಾಮ ಪಂಚಾಯತಿ ಗೆ ಸೇರಿದ ಮೈಲನಾಯಕನಹಳ್ಳಿ ಹೊಸಹಳ್ಳಿ ಗ್ರಾಮದ ರಮೇಶ್ ಎಂಬುವವರು ಬಾಲ್ ವೈಂಡಿಂಗ್ (ದಾರದ ಉಂಡೆ) ಕಾರ್ಖಾನೆ ನಡೆಸಲು ಪರವಾನಗಿ ಕೋರಿ ಆಗಸ್ಟ್ ೧೦ ರಂದು ಅರ್ಜಿ ಸಲ್ಲಿಸಿದ್ದು ಪರವಾನಗಿ ನೀಡದಿರುವುದಲ್ಲದೆ ದೂರುದಾರರ ವಿರುದ್ಧ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಾಜಣ್ಣ ಪೋಲೀಸರಿಗೆ ದೂರು ನೀಡಿದ್ದು ಪೋಲಿಸರು ಹಾಗೂ ಪಂಚಾಯತಿ ಕಾರ್ಯದರ್ಶಿಗಳು ಜಂಟಿಯಾಗಿ ಮಹಜರು ನಡೆಸಿದ್ದು ಹಾಲಿ ಥರ್ಮಾಕೋಲ್ ಉತ್ಪಾದನೆ ಮಾಡುತ್ತಿಲ್ಲ ಎಂದಿದ್ದರೂ ಸಹ ಪರವಾನಗಿ ನೀಡದೆ ಸತಾಯಿಸುತ್ತಿದ್ದುದರಿಂದ ಬೇಸತ್ತ ರಮೇಶ್ ಮತ್ತು ಕುಟುಂಬ ನಿನ್ನೆಯಿಂದ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತಿದ್ದು ಇಂದೂ ಸಹ ಮುಂದುವರೆದಿದೆ.
ಇದರ ನಡುವೆ ಪಿಡಿಓ ಶಿಬಾ ರವರು ತಹಶಿಲ್ದಾರ್ ರವರಿಗೂ ದೂರು ನೀಡಿದ್ದು ಇಂದು ಬೆಳಗಿನ ಜಾವ ೭:೩೦ ಗಂಟೆಗೆ ಗ್ರಾಮ ಸೇವಕ ನ ಮೂಲಕ ತಿಳುವಳಿಕೆ ನೋಟೀಸ್ ಜಾರಿ ಮಾಡಿರುವುದು ಅನುಮಾನಕ್ಕೆಡೆ ಮಾಡಿದೆ ಎಂದು ಧರಣಿ ನಿರತ ರಮೇಶ್ ಆಪಾದಿಸಿದ್ದಾರೆ.
ಈ ಹಿಂದೆ ಥರ್ಮಾಕೋಲ್ ಕಾರ್ಖಾನೆ ನಡೆಸಲು ಇದೇ ಗ್ರಾಮ ಪಂಚಾಯತಿ ಯು ದಿನಾಂಕ ೦೩/೦೬/೨೦೧೪ ರಂದು ಪರವಾನಗಿ ನೀಡಿದ್ದು ಸರ್ಕಾರ ಪ್ಲಾಸ್ಟಿಕ್ ನಿರ್ಬಂಧಿಸಿದ ನಂತರ ನಾವು ಥರ್ಮಾಕೋಲ್ ಘಟಕವನ್ನು ತೆರವುಗೊಳಿಸಿ ದಾರದ ಉಂಡೆ ಕಾರ್ಖಾನೆ ನಡೆಸಲು ಪರವಾನಗಿ ನೀಡುವಂತೆ ಅರ್ಜಿ ಸಲ್ಲಿಸಿದ ನಂತರ ಇಲ್ಲದ ಸಬೂಬು ಹೇಳಿ ನಿರಾಕರಿಸಿರುವುದಲ್ಲದೆ ದೂರು ನೀಡಿದ್ದಾರೆ, ಎಂದು ಮತ್ತೊಬ್ಬ ಧರಣಿ ನಿರತ ಮತ್ತೀಕೆರೆ ಅಶೋಕ್ ದೂರುತ್ತಾರೆ.
*ಎಂ ಕೆ ದೊಡ್ಡಿ ಪೋಲಿಸರು ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ ಯವರು ಜಂಟಿಯಾಗಿ ಮಹಜರು ಮಾಡಿದಾಗ ಥರ್ಮಾಕೋಲ್ ನ ಒಂದು ತುಂಡು ಸಹ ಸಿಕ್ಕಿಲ್ಲ, ಇದಕ್ಕೆ ನಾನೇ ಸಾಕ್ಷಿ, ನಾನು ಸಹ ಮಹಜರು ವೇಳೆ ಹಾಜರಿದ್ದೆ, ಉದ್ದೇಶಪೂರ್ವಕವಾಗಿ ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿರುವ ಅಧಿಕಾರಿಗಳ ತಲೆದಂಡವಾಗಬೇಕು, ನಮ್ಮ ಮಹಿಳಾ ಹೋರಾಟಗಾರರ ಬೆಂಬಲವು ಇದೆ.*
* ಸುಕನ್ಯ ಮಹಿಳಾ ಪರ ಹೋರಾಟಗಾರ್ತಿ*
*ಪಿಡಿಓ ರವರೇ ನೇರ ದೂರು ನೀಡಿದ್ದರಿಂದ ನಾನು ತಿಳುವಳಿಕೆ ನೋಟೀಸ್ ನೀಡಿದ್ದು ದಾಖಲೆ ಸಮೇತ ಉತ್ತರಿಸಲಿ, ಸಾಧ್ಯವಾದರೆ ಇಂದು ಎರಡು ಕಡೆ ಭೇಟಿ ನೀಡಿ ಪರಿಶೀಲಿಸಿ ಬಗೆಹರಿಸುತ್ತೇನೆ.*
*ಸುದರ್ಶನ್, ತಹಶಿಲ್ದಾರ್.*
*ನಿನ್ನೆ ಭೇಟಿ ನೀಡಿ ಬಗೆಹರಿಸಲು ಪ್ರಯತ್ನಿಸಿದೆ, ಅವರು ಈಗಲೇ ಪರಿಹರಿಸಿ ಎನ್ನುತ್ತಾರೆ, ಪರಿಶೀಲನೆ ಗೆ ಸಮಯ ಬೇಕಾಗುತ್ತದೆ, ದಾಖಲೆ ಮತ್ತು ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ.*
*ಶ್ರೀಚಂದ್ರ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು