Tel: 7676775624 | Mail: info@yellowandred.in

Language: EN KAN

    Follow us :


ಸರ್ಕಾರಿ ಶಾಲಾ ಆವರಣದಲ್ಲಿ ಅಕ್ರಮ ಮತಾಂತರಕ್ಕೆ ಪ್ರಚೋದನೆ ಮಿಷನರಿಗಳ ವಿರುದ್ಧ ಪ್ರಕರಣ ದಾಖಲು

Posted date: 15 Dec, 2019

Powered by:     Yellow and Red

ಸರ್ಕಾರಿ ಶಾಲಾ ಆವರಣದಲ್ಲಿ ಅಕ್ರಮ ಮತಾಂತರಕ್ಕೆ ಪ್ರಚೋದನೆ ಮಿಷನರಿಗಳ ವಿರುದ್ಧ ಪ್ರಕರಣ ದಾಖಲು

ರಾಮನಗರ:ಡಿ/೧೪/೨೦೧೯/ಶನಿವಾರ. ರಾಮನಗರ ತಾಲ್ಲೂಕಿನ ಕೈಲಾಂಚ ಹೋಬಳಿಯ ಅಣ್ಣಹಳ್ಳಿ ಗ್ರಾಮದಲ್ಲಿರುವ ಕೆಂಗಲ್ ಹನುಮಂತಯ್ಯ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಯಾರ ಪೂರ್ವಾನುಮತಿ ಇಲ್ಲದೆ ಪೆಂಡಾಲ್ ಹಾಕಿ ಸಾಮೂಹಿಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಕ್ರೈಸ್ತ ಧರ್ಮದ ಮಿಷನರಿಗಳ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.


ಇದೇ ೧೨ ರ ರಾತ್ರಿ ಸುಮಾರು ೦೮:೦೦ ಯಲ್ಲಿ ೨೦೦ ರಿಂದ ೨೫೦ ಮಂದಿ ಶಾಲಾ ಆವರಣದಲ್ಲಿ ಸೇರಿದ್ದರು. ಈ ಸಂದರ್ಭದಲ್ಲಿ ಕ್ರೈಸ್ತ ಮಿಷನರಿಯೊಂದಕ್ಕೆ ಸೇರಿದರು ಎನ್ನಲಾದ ಕೆಲವು ಮಂದಿ ಧರ್ಮ ಪ್ರಚಾರ ಕರಪತ್ರಗಳನ್ನು ಹಂಚಿ ಜನರನ್ನು ಓಲೈಕೆ ಮಾಡುವ ಯತ್ನದಲ್ಲಿದ್ದರು ಎಂದು ಅಣ್ಣಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.


ವಿಷಯ ತಿಳಿದು ಧಾವಿಸಿದ ಹಿಂದೂ ಜಾಗರಣಾ ವೇದಿಕೆಯ ಪದಾಧಿಕಾರಿಗಳು ಕಾರ್ಯಕ್ರಮ ಆಯೋಜಕರ ವಿರುದ್ಧ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲ ಸಮಯ ಮಾತಿನ ಚಕಮಕಿ ನಡೆದು ಗೊಂದಲದ ವಾತಾವರಣ ನಿರ್ಮಾಣವಾಗಿದ್ದು ನಂತರ ಕಾರ್ಯಕ್ರಮವನ್ನು ಮೊಟಕುಗೊಂಡಿದೆ.


ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಂಟು ಮಂದಿ ವಿರುದ್ದ ಪೋಲಿಸರಿಗೆ ಸ್ಥಳೀಯರು ಮತ್ತು ಸಂಘಟಕರು ದೂರು ನೀಡಿದ್ದಾರೆ. 

ಧರ್ಮವೊಂದರ ಪ್ರಚಾರ ಕಾರ್ಯಕ್ರಮ ಆಯೋಜನೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಇಸಿಓ ಗೋವಿಂದ ಸ್ವಾಮಿ ಹಾಗೂ ಸಿ ಆರ್ ಪಿ ಚಂದ್ರು ಅವರನ್ನು ಒಳಗೊಂಡ ತಂಡವು ಶಾಲೆಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ.


ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯಸ್ಥರು, ಎಸ್ ಡಿ ಎಂ ಸಿ ಸಮಿತಿಯಿಂದಾಗಲಿ ಅನುಮತಿ ಪಡೆದಿರಲಿಲ್ಲ. ಸಂಜೆ ಸಮಯದಲ್ಲಿ ಅತಿಕ್ರಮ ಪ್ರವೇಶ ಮಾಡಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಧಿಕಾರಿಗಳು ಇಲಾಖೆಯ ಉಪನಿರ್ದೇಶಕರಿಗೆ ನೀಡಿರುವ ವರದಿಯಲ್ಲಿ ತಿಳಿಸಿದ್ದಾರೆ.


ಹಿಂದೂ ಜಾಗರಣಾ ವೇದಿಕೆಯ ಹುಚ್ಚಮ್ಮನದೊಡ್ಡಿ ಯೋಗೇಶ್, ಕಡಚಿಕೊಪ್ಪ ಬಾಲಾಜಿ ಸಿಂಗ್, ಸಂಟೇನಹಳ್ಳಿ ಪ್ರಕಾಶ್ ಹಾಗೂ ಅಣ್ಣಹಳ್ಳಿ ಗ್ರಾಮದ ಮುಖಂಡರಾದ ಜಗದೀಶ್, ಬೊಮ್ಮೇಗೌಡ, ಪ್ರಕಾಶ್ ಎ.ಬಿ, ಎ.ಟಿ. ನಾಗೇಶ್, ಎ.ಪಿ ಮಹೇಶ್, ರಘು, ಲಕ್ಷ್ಮಣ್, ಮಧು ಹಾಗೂ ಸದರಿ ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರಾದ ನಾಗಣ್ಣ ನವರು ಉಪಸ್ಥಿರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑