ಖಾಲಿ ನಿವೇಶನಗಳೆಲ್ಲವೂ ಕಸಮಯ, ಜವಾಬ್ದಾರಿ ಇಲ್ಲದ ನಾಗರೀಕರು, ವಿಲೇವಾರಿ ಮಾಡದ ನಗರಸಭೆ
ಚನ್ನಪಟ್ಟಣ: ನಗರಸಭೆ ವ್ಯಾಪ್ತಿಯ ಹಲವಾರು ಖಾಲಿ ನಿವೇಶನಗಳು ಕಸದ ತೊಟ್ಟಿಯಾಗಿ ಮಾರ್ಪಾಟಾಗಿದ್ದು ಆಯಾಯ ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರು ಮತ್ತು ಅಕ್ಕಪಕ್ಕದ ನಿವಾಸಿಗಳು ದುರ್ವಾಸನೆ ಸಹಿಸಲು ಸಾಧ್ಯವಾಗದೆ ಇತ್ತ ಯಾರನ್ನೂ ದೂರಬೇಕು ಎಂದು ತಿಳಿಯದೆ ಮೌನವಾಗಿ ಶಾಪ ಹಾಕುತ್ತಾ ಕಾಲ ದೂಡುತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿ, ನಗರಸಭೆ ಹೊರವಲಯದ ರಸ್ತೆ ಬದಿಗಳು ಮತ್ತು ಕೆರೆಯ ಏರಿಗಳಲ್ಲದೆ ನಗರದಾದ್ಯಂತ ಖಾಲಿ ನಿವೇಶನಗಳಲ್ಲಿ ಯಥೇಚ್ಛವಾಗಿ ಕಸ ಹರಡಿದ್ದು ಹಸಿ ಕಸವು ಗಬ್ಬು ನಾರುತ್ತಿದ್ದರೆ ನಿಷೇಧಿತ (ಘೋಷಣೆ ಮಾತ್ರ) ಪ್ಲಾಸ್ಟಿಕ್ ಗಳು ಗಾಳಿಗೆ ತೂರಿ ಆಕಾಶದಲ್ಲಿ ಗಾಳಿಪಟದಂತೆ ಹಾರಾಡಿ ವಾಸದ ಮನೆಗಳ ಮುಂದೆ ರಾಶಿಯಾಗುತ್ತಿವೆ ಎಂದು ಸ್ಥಳೀಯ ನಿವಾಸಿಗಳ ರೋಧನವಾಗಿದೆ.
ಕಸ ತಂದು ಸುರಿಯುವವರು ಸಹ ಸ್ಥಳೀಯ ನಿವಾಸಿಗಳು ಹಾಗೂ ಸ್ಥಳೀಯ ವಾಣಿಜ್ಯೋದಮ ಮಳಿಗೆಯ ಮಾಲೀಕರೇ ಆಗಿದ್ದು ತಮ್ಮಲ್ಲಿರುವ ಕಸ ನಮ್ಮ ಮನೆ ಅಥವಾ ಅಂಗಡಿ ಮುಂದೆ ಬೇಡ, ಬೇರೆ ಯಾರ ಮನೆಯ ಮುಂದೆಯಾದರೂ ಇರಲಿ ಎಂಬ ಧೋರಣೆಯಿಂದ ಜ್ಞಾನವಿದ್ದು ಮಾಡುವ ಘೋರ ಅಪರಾಧ ಎಂಬುದು ಸಾವ್ರತ್ರಿಕ ಸತ್ಯವಾಗಿದೆ.
ನಗರಸಭೆಯ ಅಧಿಕಾರಿಗಳು ಖಾಲಿ ನಿವೇಶನದಾರರಿಗೆ ನೋಟೀಸ್ ನೀಡಿ ಗಿಡಗಂಟಿ ಬೆಳೆದು ನಿಂತಿರುವ ಹಾಗೂ ಕಸ ಹಾಕಲು ಅನುವು ಮಾಡಿಕೊಡಲು ಕಾರಣವಾಗಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು, ಹಾಗೂ ನಗರದಲ್ಲಿ ಎಲ್ಲೇ ಕಸ ಕಂಡರೂ ಅಂದಂದೇ ಕಸ ವಿಲೇವಾರಿ ಮಾಡಬೇಕು ಎಂದು ಸ್ಥಳೀಯ ನಿವಾಸಿಗಳಾದ ಶಶಿ ಗೌಡ, ಪುಷ್ಪಾ ಗುಲೇಚಾ, ಕಾಂತಾ ಕಿಟ್ಟಿ, ಸುರೇಶ್, ವೆಂಕಟಸ್ವಾಮಿ, ನಿರ್ಮಲ ರವರು ಆಗ್ರಹಿಸಿದ್ದಾರೆ.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು