ಡಾ. ರಾಜ್ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರದ ವತಿಯಿಂದ ಉಚಿತ ಕನ್ನಡಕ ವಿತರಣೆ
ರಾಮನಗರ: ಜಿಲ್ಲೆಯಲ್ಲಿ ಡಾ.ರಾಜ್ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರ ಅರಂಭವಾಗಿ ಒಂಬತ್ತು ವರ್ಷಗಳಲ್ಲಿ ನೇತ್ರ ತಪಾಸಣೆಯಂತಹ ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಒಳ್ಳೆಯ ಹೆಸರು ಗಳಿಸಿದೆ ಎಂದು ಬೆಂಗಳೂರು ಡಾ.ರಾಜ್ಕುಮಾರ್ ಟ್ರಸ್ಟಿನ ಟ್ರಸ್ಟಿ ಟಿ.ವಾಸನ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಿಡದಿಯ ನೇತ್ರ ಸಂಗ್ರಹಣಾ ಕೇಂದ್ರದ ವತಿಯಿಂದ ಗ್ರಾಮಾಂತರ ಭಾಗದಲ್ಲಿ ಸ್ವಯಂ ಪ್ರೆರಣೆಯಿಂದ ನೇತ್ರದಾನದ ಬಗ್ಗೆ ಅರಿವು ಮೂಡಿಸಿ ನಿಮ್ಮ ಕಣ್ಣುಗಳು ಜೀವಂತವಾಗಿದ್ದು, ಸತ್ತ ನಂತರ ಆ ಕಣ್ಣುಗಳು ಇನ್ನೊಬ್ಬರ ಬಾಳಿನಲ್ಲಿ ಬೆಳಕಾಗಲಿ ಎಂದು ಮನವರಿಕೆ ಮಾಡಿಕೊಡುವ ಮೂಲಕ ನಿಸ್ವಾರ್ಥದಿಂದ ಹುಟ್ಟಿಕೊಂಡ ಸಂಸ್ಥೆಗೆ ಚಿತ್ರನಟ ದೊಡ್ಡಣ್ಣ ರಾಯಬಾರಿಯಾಗಿ ಸೇವೆ ಸಲ್ಲಿಸಿದರು ಎಂದರು.
ಬಿಡದಿಯ ಡಾ.ರಾಜ್ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರವು 9 ವರ್ಷಗಳಲ್ಲಿ ಸುಮಾರು 815 ಕಣ್ಣುಗಳನ್ನು ಪಡೆದು ಅಂಧರ ಬಾಳಿಗೆ ಬೆಳಕಾಗಿದೆ. ಗ್ರಾಮಾಂತರ ಪ್ರದೇಸದಿಂದ ಶಸ್ತ್ರ ಚಿಕಿತ್ಸೆಗೆ ಒಳಗಾದವರನ್ನು ಕೊಂಡೂಯ್ಯಲು ಸ್ವರಾಜ್ಮಜ್ದಾ ವಾಹನವನ್ನು ಉಚಿತವಾಗಿ ಶಂಕರ ಕಣ್ಣಿನ ಆಸ್ಪತ್ರೆಗೆ ನೀಡಿದೆ. 2014-15 ರ ಸಾಲಿನಲ್ಲಿ ರಾಮನಗರ ಮತ್ತು ಚನ್ನಪಟ್ಟಣ ತಾಲ್ಲೂಕಿನ 1 ರಿಂದ 10 ನೇ ತರಗತಿಯ 70.437 ಮಕ್ಕಳಿಗೆ ನೇತ್ರ ತಪಾಸಣೆ ಮಾಡಿಸಲಾಗಿದೆ. 2014 ರ ಮಕ್ಕಳ ದಿನಾಚರಣೆ ಅಂಗವಾಗಿ ಒಂದೇ ದಿನದಲ್ಲಿ ಕನಕಪುರದ 7.203 ಶಾಲಾ ಮಕ್ಕಳಿಗೆ ಕಣ್ಣಿನ ಪರೀಕ್ಷೆ ಮತ್ತು ಕನ್ನಡಕ ವಿತರಣೆ ಮಾಡುವ ಮೂಲಕ 2016 ರ ಲಿಮ್ಕಾ ದಾಖಲೆ ಪುಸ್ತಕದಲ್ಲಿ ದಾಖಲಾಯಿತು ಎಂದು ಹೇಳಿದರು.
ಉಚಿತ ಕನ್ನಡಕ ವಿತರಣೆ: ಡಾ.ರಾಜ್ಕುಮಾರ್ ಟ್ರಸ್ಟ್, ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಇದೆ ತಿಂಗಳ 2 ರಂದು ಮಾಗಡಿಯಲ್ಲಿ ಮಾಗಡಿ ತಾಲ್ಲೂಕಿನ 25.392 ಮತ್ತು ಕನಕಪುರದ 30.768 ಶಾಲಾ ಮಕ್ಕಳು ಸೇರದಂತೆ ಒಟ್ಟು 56.178 ಶಾಲಾ ಮಕ್ಕಳಿಗೆ ನೇತ್ರ ತಪಾಸಣೆ ಕೈಗೊಂಡು ದೃಷ್ಟಿದೋಷವಿರುವ ಮಕ್ಕಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಇದೆ ಸಂದರ್ಭದಲ್ಲಿ ತಿಳಿಸಿದರು.
ಸುದ್ಧಿಗೋಷ್ಟಿಯಲ್ಲಿ ಶಂಕರ ಕಣ್ಣಿನ ಆಸ್ಪತ್ರೆಯ ಕಾರ್ಯನಿರ್ವಾಹಕ ಮುಖ್ಯಸ್ಥ ವಿಕ್ರಮ್ಚೌದರಿ, ಬಿಡದಿ ಕೆಮಿಸ್ಟ್ ಅಂಡ್ ಡ್ರಗಿಸ್ಟ್ ಫೌಂಡೇಶನ್ನ ಅಧ್ಯಕ್ಷ ಸರ್ವೇಶ್, ಡಾ.ರಾಜ್ಕುಮಾರ್ ಟ್ರಸ್ಟ್ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಪ್ರಕಾಶ್ ನಾಗವಾರ, ನಿರ್ಧೇಶಕ ರಾಜಶೇಖರ, ಶಿಕ್ಷಣ ಇಲಾಖೆಯ ಬಿಆರ್ಸಿಗಳಾದ ದೊಡ್ಡಮಾದಯ್ಯ, ವಿಶೇಷ ಸಂಪನ್ಮೂಲ ಶಿಕ್ಷಕರಾದ ಲಕ್ಷ್ಮೀನರಸಿಂಹಯ್ಯ, ಎಸ್.ಬಿ.ಗೌಡ ಮತ್ತಿತರರು ಹಾಜರಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು