ಜನ ಔಷಧಿ ಕೇಂದ್ರ ಉದ್ಘಾಟನೆ
ರಾಮನಗರ : ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ವತಿಯಿಂದ ಜಾರಿಗೆ ಜನ ಔಷಧಿ ಮಳಿಗೆಯಲ್ಲಿ ಎಲ್ಲಾ ತರಹ ಔಷಧಿಗಳು ದೊರೆಯುತ್ತವೆ. ಇದನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ರಮೇಶ್ ತಿಳಿಸಿದರು.
ರಾಮನಗರದ ಕೆಂಪೇಗೌಡ ವೃತ್ತದಲ್ಲಿ ಏರ್ಪಡಿಸಿದ್ದ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನ ಔಷಧಿ ಮಳಿಗೆಯಲ್ಲಿ ಎಲ್ಲಾ ತರಹ ಔಷಧಿಗಳು ಬಡವರಿಗೆ ಎಟಕುವ ಬೆಲೆಗಳಲ್ಲಿ ಔಷಧಿಗಳು ಲಭ್ಯವಿರುವಂತಾಗಿದೆ. ಹಾಗಾಗಿ ಔಷಧಿಗಳು ಸಿಗಲಿಲ್ಲ ಅಥವಾ ಔಷಧಿ ಕರತೆಯಿಂದಾಗಿ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂದು ತಿಳಿಸಿದರು.
ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ರಾಜಶೇಖರ್ ಮಾತನಾಡಿ ಉಚಿತ ಅಥವಾ ಮಾರು ಕಟ್ಟೆ ಬೆಲೆಗಿಂತ ಕಡಿಮೆ ದರದಲ್ಲಿ ವಸ್ತುಗಳು ದೊರೆತಾಗ, ಜನತೆ ಅದರ ಗುಣ ಮಟ್ಟದ ಬಗ್ಗೆ ಸಂಶಯ, ಭಯಪ ಡುವುದು ಸಹಜ. ಆದರೆ ಜನ ಔಷಧಿಯ ಗುಣಮಟ್ಟದ ಬಗ್ಗೆ ಯಾರಿಗೂ ಸಂಶಯಪಡಬಾರದು. ಜನ ಸಾಮಾನ್ಯರಿಗೂ ಒಳ್ಳೆಯ ರೀತಿಯ ವೈದ್ಯಕೀಯ ಸೇವೆ ಲಭಿಸ ಬೇಕೆಂಬ ಉದ್ದೇಶದಿಂದಲೇ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.
ಜನ ಔಷಧಿ ಕೇಂದ್ರದ ಮಾಲೀಕ ಕೆ.ಎಸ್. ಕೃಷ್ಣ ಮಾತನಾಡಿ ಈ ಜನ ಔಷಧಿ ಕೇಂದ್ರದಲ್ಲಿ ರೋಗಿಗಳಿಗೆ ಬಳಕೆಯಾಗುವ ಡಯಬಿಟಿಕ್, ರಕ್ತದ ಒತ್ತದ, ಕ್ಯಾನ್ಸರ್, ಗ್ಯಾಸ್ಟ್ರೋ, ವಿಟಮಿನ್ ಗಳು, ಆಂಟಿಬಯೋಟಿಕ್ಸ್, ಇತ್ತಾದಿಗಳಿಗಾಗಿ 600 ಕ್ಕೂ ಹೆಚ್ಚು ಔಷಧಿಗಳಿವೆ ಇವುಗಳನ್ನು ಈ ಕೇಂದ್ರಗಳಲ್ಲಿ ಸುಲಭವಾಗಿ ಸಿಗುತ್ತದೆ ಎಂದು ತಿಳಿಸಿದರು.
ಮುಖಂಡರಾದ ಚಿಕ್ಕವೀರೇಗೌಡ, ವಿ.ಎಚ್.ರಾಜು, ರಮೇಶ್, ದೊಡ್ಡಗಂಗವಾಡಿಗೋಪಾಲ್, ರಮೇಶ್, ನರಸಿಂಹ ಮುಂತಾದವರು ಉಪಸ್ಥಿತರಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು