ಎಸಿಬಿ ಬಲೆಗೆ ಬಿದ್ದ ಪಿಡಿಓ ಮಂಜುಳಾ ವಿರುದ್ಧ ಮಾಕಳಿ ಗ್ರಾ.ಪಂ ಉಪಾಧ್ಯಕ್ಷೆ ವರಲಕ್ಷ್ಮಮ್ಮ ರಿಂದ ದೂರುಗಳ ಸುರಿಮಳೆ
ಚನ್ನಪಟ್ಟಣ:ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದ ಮುದಗೆರೆ ಪಿಡಿಓ ಮಂಜುಳಾರವರು ಈ ಹಿಂದೆ ಮಾಕಳಿಯಲ್ಲಿ ಪಿಡಿಓ ಆಗಿದ್ದ ಮೂರು ವರ್ಷಗಳಲ್ಲಿ ಅನೇಕ ರೀತಿಯ ಅಕ್ರಮ ಹಾಗೂ ಹಣ ದುರುಪಯೋಗ ಪಡಿಸಿಕೊಂಡಿದ್ದು ಇದರ ಬಗ್ಗೆ ದಾಖಲೆ ಸಮೇತ ಮೇಲಿನ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದರೂ ಸಹ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ಅಧಿಕಾರಿಗಳು ಪಿಡಿಓ ಪರ ನಿಂತಿರುವುದರಿಂದ ಸಂಬಂಧಿಸಿದ ಅವರ ಮೇಲಾಧಿಕಾರಿಗಳು ತನಿಖೆ ಕೈಗೊಂಡು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಮಾಕಳಿ ಗ್ರಾಮ ಪಂಚಾ ಯತಿ ಉಪಾಧ್ಯಕ್ಷೆ ವರಲಕ್ಷ್ಮಮ್ಮ ಎನ್.ಜಿ ಮತ್ತು ಅವರ ಪತಿ ಲೋಕೇಶ್ ಇಂದು ಆಗ್ರಹಿಸಿದರು.
ಅವರು ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದರು.
ಮಂಜುಳಾ ಬಂದ ಮೇಲೆ ಪ್ರತಿ ತಿಂಗಳಲ್ಲಿ ಏಳರಿಂದ ಹದಿನೈದು ದಿನಗಳು ಮಾತ್ರ ಕಛೇರಿಗೆ ಬರುತ್ತಿದ್ದರು. ಆದರೆ ಹಾಜರಾತಿ ಪುಸ್ತಕದಲ್ಲಿ ಸಂಪೂರ್ಣ ಹಾಜರಾತಿ ಹಾಕಿಕೊಂಡಿದ್ದಾರೆ. ನರೇಗಾ ಕಾಮಗಾರಿಗಳನ್ನು ಅವರಿಗೆ ಇಷ್ಟ ಬಂದವರಿಗೆ ಕೊಟ್ಟು ಬಿಲ್ ಮಾಡಿಕೊಂಡಿರುವುದಲ್ಲದೆ ಸರ್ಕಾರದಿಂದ ಅನುಷ್ಟಾನಗೊಂಡಿರುವ ವಿವಿಧ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿ ಸುವಲ್ಲಿ ವಿಫಲರಾಗಿದ್ದರು.
ಗ್ರಾಮ ಪಂಚಾಯತಿ ಸದಸ್ಯರಿಗೆ ನೀಡಬೇಕಾಗಿದ್ದ ಗೌರವಧನವನ್ನು ನೀಡದೆ ಅದನ್ನು ದುರುಪಯೋಗ ಮಾಡಿ ಕೊಂಡಿದ್ದಾರೆ.
೨೦೧೫-೧೬ ನೇ ಸಾಲಿನ ಕಂದಾಯ ವಸೂಲಿ ಹಣ ವನ್ನು ಅಂದಂದೇ ಜಮಾ ಮಾಡದೆ ತಿಂಗಳ ನಂತರ ಸ್ವಲ್ಪ ಸ್ವಲ್ಪವೇ ಜಮಾ ಮಾಡಿದ್ದಾರೆ, ಉಪಕರಗಳನ್ನು ಮಾತ್ರ ಜಮೆ ಮಾಡಿರುವುದಿಲ್ಲ. ಸಾಮಾಜಿಕ ಲೆಕ್ಕ ಪರಿಶೋಧನಾ ವರದಿಯು ಕಛೇರಿಯಲ್ಲಿ ಲಭ್ಯವಾಗದಂತೆ ನೋಡಿಕೊಂಡಿದ್ದಾರೆ. ನರೇಗಾ ಕೂಲಿದಾರರಿಗೂ ಸಕಾಲದಲ್ಲಿ ಹಣ ನೀಡಿಲ್ಲ, ಕೆಲ ಕಾಮಗಾರಿಗಳನ್ನು ಅಂದಿನ ಶಾಸಕರ ಅಣತಿಯಂತೆ ಮಾಡಿದ್ದಾರೆ.
ವಸತಿ ಫಲಾನುಭವಿಗಳಿಗೆ ಹಣ ಬಿಡುಗಡೆ, ಗ್ರಾಮ ಸಭೆ, ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ, ವಾಷಿ೯ಕ ಸಭೆ, ಅಜೆಂಡಾ, ಕರಪತ್ರ ಸಿಡಿಗಳನ್ನು ಮಾಡಲಾಗಿದ್ದು, ಇದರಲ್ಲಿ ಯಾವುದನ್ನೂ ಸಹ ಸರಿಯಾದ ಕ್ರಮದಲ್ಲಿ ಮಾಡಿರುವುದಿಲ್ಲ. ೧೩ ಮತ್ತು ೧೪ ಹಣಕಾಸು ಯೋಜನೆ, ವರ್ಗವಾರು ಮತ್ತು ಅಂಗವಿಕಲರಿಗೆ ಮೀಸಲಾತಿ ನೀಡಿಲ್ಲ, ನಡಾವಳಿ ನಿಯಮಗಳನ್ನು ದಾಖಲಿಸಿಲ್ಲ, ಹೀಗೆ ಅನೇಕ ರೀತಿಯ ಅದ್ವಾನ್ಹ ಮಾಡಿದ್ದು, ಮುಖ್ಯಮಂತ್ರಿ ಗಳವರೆಗೆ ಎಲ್ಲರಿಗೂ ದೂರು ನೀಡಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಪಿಡಿಓ ಪರ ನಿಂತಿದ್ದಾರೆ. ಈಗಲೂ ಕ್ರಮ ಕೈಗೊಳ್ಳದಿ ದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಲೋಕೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜನವಾದಿ ಮಹಿಳಾ ಸಂಘ ಟನೆಯ ಪ್ರಮೀಳಾ, ಸಿದ್ದೇ ಗೌಡ, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು