ಎಲ್ಲೆಡೆ ವಿಜೃಂಭಣೆಯಿಂದ ಜರುಗಿದ ರಾಸುಗಳ ಹಬ್ಬ ಸಂಕ್ರಾಂತಿ
ಚನ್ನಪಟ್ಟಣ: ಸಂಕ್ರಾಂತಿ ಹಬ್ಬ ಎಂದರೆ ರೈತನಿಗೆ ಸಡಗರವೋ ಸಡಗರ, ವರ್ಷಕ್ಕೊಮ್ಮೆ ಬರುವ ಈ ಸುಗ್ಗಿ ಹಬ್ಬದಲ್ಲಿ ರೈತ ಮತ್ತು ರೈತ ಕುಟುಂಬವಲ್ಲದೆ ತಾನು ಸಾಕಿರುವ ಜಾನುವಾರುಗಳು, ಅದರಲ್ಲೂ ದಿನನಿತ್ಯ ದುಡಿಯುವ ಎತ್ತುಗಳು ಮತ್ತು ಜೋಡಿ ಹಸುಗಳಿಗೆ ಇಂದು ಸಂಪೂರ್ಣ ವಿರಾಮವಿದ್ದು, ಸಂತೃಪ್ತ ಆಹಾರಗಳನ್ನು ತಿನ್ನಿಸಿ, ಮೈತೊಳೆದು, ಶೃಂಗರಿಸಿ ತಾತ್ಕಾಲಿಕವಾಗಿ ನಿರ್ಮಿಸಿದ ಸಂಕ್ರಮಣ ನ ಮೂರ್ತಿಯನ್ನು ಪೂಜಿಸಿ ಕಿಚ್ಚು ಹಾಯಿಸುವುದೇ ಸಂಕ್ರಾಂತಿ ಹಬ್ಬ.
ರಾಸುಗಳ ಜೊತೆಗೆ ಹೊಲಗದ್ದೆಗಳಲ್ಲಿ ಬೆಳೆದ ಬೆಳೆಯ ರಾಶಿಗೆ, ಜಾನುವಾರು ಗಳಿಗೆಂದೇ ಶೇಖರಿಸಿಟ್ಟ ಹುಲ್ಲು ಮೆದೆಗಳಿಗೂ ಸಹ ವಿಶೇಷ ಪೂಜೆ ಸಲ್ಲಿಸುತ್ತಾರೆ. ಕಣ ದಲ್ಲಿ ನೆಟ್ಟ ಮೇಟಿ ಗೆ ಹಸುವಿನ ಸಗಣಿ ಯನ್ನು ಅದರ ಮೇಲಿಟ್ಟು, ಸೆಗಣಿಗೆ ಅಣ್ಣೆ ಹೂವು, ಹುಚ್ಚೆಳ್ಳು ಹೂವುಗಳಿಂದ ಶೃಂಗರಿಸಿ ವಿಶೇಷ ಪೂಜೆ ನೆರವೇರಿಸಿದರು.
ನಗರವೂ ಸೇರಿದಂತೆ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿಯೂ ಇಂದು ಕಣ, ರಾಶಿ ಪೂಜೆಯ ಜೊತೆಗೆ ರಾಸುಗಳಿಗೆ ಕಿಚ್ಚು ಹಾಯಿಸಿದರು. ಪ್ರತಿ ಹಳ್ಳಿಗಳಲ್ಲೂ ಸಂಜೆ ಆರು ಗಂಟೆಯ ಅಂದರೆ ಗೋಧೂಳಿ ಸಮಯದಲ್ಲಿ ಸಣ್ಣದಾಗಿ ಹಚ್ಚಿದ ಬೆಂಕಿಯಲ್ಲಿ ರಾಸುಗಳನ್ನು ಹಾರಿಸುವ ಮೂಲಕ ಸಂಕ್ರಾಂತಿ ಹಬ್ಬವನ್ನು ಸಡಗರದೊಂದಿಗೆ ಆಚರಿಸಿದರು.
ಈ ಹಬ್ಬದ ಸಂದರ್ಭದಲ್ಲಿ ಪುಟ್ಟ ಮಕ್ಕಳು ಸೇರಿದಂತೆ ಅನೇಕ ಹೆಣ್ಣು ಮಕ್ಕಳು ದೇಸೀಯ ರೀತಿಯಲ್ಲಿ ಶೃಂಗರಿಸಿಕೊಂಡು ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡು ಎಂಬ ಆಶಯದೊಂದಿಗೆ ಅಕ್ಕಪಕ್ಕದ ಮನೆಗಳಿಗೆ, ಸ್ನೇಹಿತೆಯರ ಮನೆ ಮನೆಗೆ ಸಡಗರದೊಂದಿಗೆ ತೆರಳಿ ಎಳ್ಳುಬೆಲ್ಲ ಬೀರಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು