ನವ ಬೆಂಗಳೂರು ಬೇಡ, ರಾಮನಗರ ವೇ ಇರಲಿ ಹೋರಾಟಗಾರರ ಆಗ್ರಹ
ಚನ್ನಪಟ್ಟಣ: ನಮಗೆ ನವ ಬೆಂಗಳೂರು ಬೇಡಾ, ಈಗಿರುವ ರಾಮನಗರ ವೇ ಇರಲಿ ಎಂದು ನವಕರ್ನಾಟಕ ಯುವಶಕ್ತಿ, ಕರ್ನಾಟಕ ರಾಜ್ಯ ರೈತ ಸಂಘ ದ ಪದಾಧಿಕಾರಿಗಳು ಹಾಗೂ ಪ್ರಗತಿಪರ ಚಿಂತಕರು ಸಭೆ ಸೇರಿ ಚರ್ಚಿಸಿ ತೀರ್ಮಾನಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂಗವಾಗಿದ್ದ ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲ್ಲೂಕುಗಳನ್ನು ಒಟ್ಟಾಗಿ ಸೇರಿಸಿ ರಾಮನಗರ ಜಿಲ್ಲೆಯನ್ನು ದಶಕದ ಹಿಂದೆ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ಘೋಷಣೆ ಮಾಡಿ ಅಧಿಕೃತಗೊಳಿಸಿದ್ದರು. ಈ ನೆಲದ ಮಣ್ಣಿನಲ್ಲಿ ಹುಟ್ಟು ಹೋರಾಟವೇ ಅಡಗಿದೆ. ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ವಿಶ್ವವೇ ಬೆರಗುಗಣ್ಣಿನಿಂದ ನೋಡುವಂತಹ ಕಲ್ಲುಗಳು, ಗೊಂಬೆಗಳು, ರೇಷ್ಮೆ, ದೇವಾಲಯಗಳು ಹಾಗೂ ಕೆಂಗಲ್ ಹನುಮಂತಯ್ಯ ನವರು ಕಟ್ಟಿಸಿದ ವಿಧಾನ ಸೌಧ, ಆರ್ಥಿಕ ತಜ್ಞ ವೆಂಕಟಗಿರಿಗೌಡ, ಪೂಜ್ಯ ಕರಿಯಪ್ಪ ನವರಂತಹವರು ಹುಟ್ಟಿದ, ಪುರಾಣದಲ್ಲಿ ಉಲ್ಲೇಖವಾಗಿರುವಂತೆ ಶ್ರೀ ರಾಮ ಓಡಾಡಿದ ಎಂಬ ಈ ನೆಲವನ್ನು ಯಾವ ಕಾರಣಕ್ಕೂ ನವ ಬೆಂಗಳೂರು ಜಿಲ್ಲೆ ಮಾಡಬಾರದು ಎಂದು ಬಯಲುಸೀಮೆ ಪತ್ರಿಕೆಯ ಸಂಪಾದಕ ಸು ತ ರಾಮೇಗೌಡ ಆಗ್ರಹಿಸಿದರು.
ಸಾಹಿತಿ ರಾಮಕೃಷ್ಣೇಗೌಡ ಮಾತನಾಡಿ, ನಮ್ಮ ರಾಮನಗರ ಕ್ಕೆ ಸಾಂಸ್ಕೃತಿಕವಾಗಿ, ರಾಜಕೀಯವಾಗಿ, ಪುರಾತನ ಹಾಗೂ ಇತಿಹಾಸದಿಂದಲೂ ಉತ್ತಮ ಹೆಸರು ಪಡೆದಿದ್ದು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಬಲಿಕೊಡುವುದು ಬೇಡ ಎಂದರು.
ಹೋರಾಟಗಾರ ಕೆ ನ ಲಿಂಗೇಗೌಡ ಮಾತನಾಡಿ ಈಗಿರುವ ಬೃಹತ್ ಬೆಂಗಳೂರಿನಲ್ಲಿ ಕಸದ ರಾಶಿ ಹೆಚ್ಚಾಗಿದ್ದು ಅದನ್ನು ಈಗಿರುವ ರಾಮನಗರ ಜಿಲ್ಲೆಯನ್ನು ನವ ಬೆಂಗಳೂರು ಎಂದು ಬದಲಾಯಿಸಿ ಅಲ್ಲಿನ ಗಬ್ಬು ನಾರುವ ಕಸವನ್ನು ತಂದು ಸುರಿಯಲು ಮಾಡುತ್ತಿದ್ದು, ನಮ್ಮ ಗ್ರಾಮೀಣರ ಬದುಕನ್ನು ಕಿತ್ತುಕೊಳ್ಳುತ್ತಾರೆ. ಆದ್ದರಿಂದ ಎಲ್ಲಾ ಸಂಘಸಂಸ್ಥೆಗಳು, ವಿದ್ಯಾರ್ಥಿಗಳು ಸೇರಿ ಇದನ್ನು ತಪ್ಪಿಸಬೇಕೆಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಎಂ ರಾಮು ಮಾತನಾಡಿ ಹುಟ್ಟು ಹೋರಾಟದ ನಾಡಾದ ನಮ್ಮ ಜಿಲ್ಲೆಯನ್ನು ಬೇರೆ ಹೆಸರಿನಿಂದ ಕರೆದು ಕೈಗಾರಿಕೆಗಳನ್ನು ತಂದು ನಮ್ಮ ವ್ಯವಸಾಯದ ಭೂಮಿಯನ್ನು ಕಿತ್ತುಕೊಂಡು ನಮ್ಮನ್ನು ಕಾರ್ಖಾನೆಯ ವಾಚ್ ಮನ್ ಗಳಾಗಿ ಮಾಡಿಕೊಳ್ಳುತ್ತಾರೆ, ಮುಂದಿನ ನಮ್ಮ ಪೀಳಿಗೆಗೆ ನಮ್ಮ ನೆಲದ ಸೊಗಡನ್ನು ಮರೆಮಾಚಲು, ತಮ್ಮ ಖಜಾನೆಯನ್ನು ತುಂಬಿಸಿಕೊಳ್ಳಲು ರಾಜಕಾರಣಿಗಳು ಮಾಡಿರುವ ಸಂಚು ಇದು ಎಂದು ಆತಂಕ ವ್ಯಕ್ತಪಡಿಸಿದರು.
ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಸಿ ಕೆ ರಾಮೇಗೌಡ ಮತ್ತು ಪ್ರೊಫೆಸರ್ ಮಲ್ಲಯ್ಯ ನವರು ಮಾತನಾಡಿ ನಮ್ಮ ರಾಮನಗರ ಜಿಲ್ಲೆ ಇದೇ ಹೆಸರಿನಲ್ಲೇ ಇರಲಿ, ಇದೇ ಜಿಲ್ಲೆಯನ್ನು ಬೆಂಗಳೂರಿನಲ್ಲಿರುವಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿ, ಕೃಷಿ ಮತ್ತು ಇಲ್ಲಿನ ಸೊಗಡನ್ನು ಹಾಗೆಯೇ ಉಳಿಸಬೇಕೆಂದು ಆಗ್ರಹಿಸಿದರು.
ನಂತರ ಕೆನಲಿಗೌಡರು ಕೆಲ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು