ಜೆಡಿಎಸ್ ಕುಸಿಯುತ್ತಿರುವ ಗುಡ್ಡ, ಬಿಜೆಪಿಯಿಂದ ಶಿಕ್ಷಕರ ಕ್ಷೇತ್ರಕ್ಕೆ, ಪುಟ್ಟಣ್ಣ
ಚನ್ನಪಟ್ಟಣ: ಜೆಡಿಎಸ್ ಕುಸಿಯುತ್ತಿರುವ ಗುಡ್ಡವಾಗಿದ್ದು ಜೆಡಿಎಸ್ ಪಕ್ಷದಿಂದ ಹೊರ ಹೋಗುತ್ತಿರುವವರಲ್ಲಿ ನಾನು ಮೊದಲಿಗನೂ ಅಲ್ಲಾ, ಕೊನೆಯವನು ಅಲ್ಲಾ, ಅತ್ತೆ ಕೊಟ್ಟ ಶಿಕ್ಷೆ ಸೊಸೆಗೆ, ಸೊಸೆ ಕೊಟ್ಟ ಶಿಕ್ಷೆ ಅತ್ತೆಗೆ ಮಾತ್ರ ಗೊತ್ತಿದೆ. ನಾನು ಈ ಬಾರಿ ಬಿಜೆಪಿ ಪಕ್ಷದಿಂದ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು ನನ್ನ ಶಿಕ್ಷಕ ಬಂಧುಗಳು ಆಶೀರ್ವದಿಸುವ ವಿಶ್ವಾಸವಿದೆ ಎಂದು ಮಾಜಿ ಉಪ ಸಭಾಪತಿ ಪುಟ್ಟಣ್ಣ ಹೇಳಿದರು.
ಅವರು ಇತಿಹಾಸ ಪ್ರಸಿದ್ಧ ಕೆಂಗಲ್ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ಹಲವಾರು ಶಾಲೆಗಳಲ್ಲಿ ಮತಯಾಚನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣನವರು ಚನ್ನಪಟ್ಟಣದಾದ್ಯಂತ ಮುಂಬರುವ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರವನ್ನು ತಾಲೂಕಿನಾದ್ಯಂತ ನಡೆಸಿದರು. ಮುಂಬರುವ ಚುನಾವಣೆಯಲ್ಲಿ ನಾನು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದರು ಬುಧವಾರ ಬೆಳಿಗ್ಗೆ ಶಾಲೆಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಶಿಕ್ಷಕರ ಜೊತೆ ಮತಯಾಚನೆ ನಡೆಸಿ ನನ್ನನ್ನು ನೀವು ಮೂರು ಬಾರಿ ಆಯ್ಕೆ ಮಾಡಿದ್ದೀರಿ ಈ ಬಾರಿ ನಾಲ್ಕನೆಯದಾಗಿ ನಿಮ್ಮ ಬಳಿ ಬಂದಿರುವೆ. ನಾನು ವಿಧಾನಪರಿಷತ್ ಸದಸ್ಯರಾದ ದಿನಗಳಿಂದಲೂ ಶಿಕ್ಷಕರ ಯಾವುದೇ ಸಮಸ್ಯೆ ಬಂದರೂ ಕ್ಷಣಾರ್ಧದಲ್ಲಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಪಟ್ಟು ಅವರ ಸಮಸ್ಯೆಯನ್ನು ಸಾಧ್ಯವಾದಷ್ಟು ಮಟ್ಟಿಗೆ ಬಗೆಹರಿಸಿದ್ದೇನೆ ಎಂದರು.
ನಾನು ವಿಧಾನಪರಿಷತ್ ಸದಸ್ಯರಾದ ಸಂದರ್ಭದಿಂದ ಇಲ್ಲಿಯವರೆಗೂ ಯಾವುದೇ ಅಧಿಕಾರಿ ಬಳಿ ಹಣಕ್ಕಾಗಿ ನಾನು ಕೈ ಚಾಚಿಲ್ಲ. ಯಾವ ಶಿಕ್ಷಕರಿಗೂ ಸುಳ್ಳು ಭರವಸೆ ನೀಡಿಲ್ಲ. ನನ್ನ ಕೈಲಾದಮಟ್ಟಿಗೆ ಶಿಕ್ಷಕರ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಆದ್ದರಿಂದಲೇ ಮೂರು ಬಾರಿ ಕೂಡ ನನ್ನನ್ನು ತಾವುಗಳು ಆಯ್ಕೆ ಮಾಡಿರುತ್ತೀರಿ ಮುಂಬರುವ ಚುನಾವಣೆಯಲ್ಲಿ ಕೂಡ ನನಗೆ ಅತಿ ಹೆಚ್ಚು ಮೊದಲ ಪ್ರಾಶಸ್ತ್ಯದ ಮತ ನೀಡುವ ಮೂಲಕ ನನ್ನನ್ನು ಆಯ್ಕೆ ಮಾಡಿ ಶಿಕ್ಷಕರ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ಕಲ್ಪಿಸಿಕೊಡಬೇಕೆಂದು ಶಿಕ್ಷಕ ಸಮುದಾಯದಲ್ಲಿ ಮನವಿ ಮಾಡಿದರು.
ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಕೆ ಪಿ ಕಾಂತರಾಜು, ಕುವೆಂಪು ವಿದ್ಯಾಲಯದ ಮಹೇಶ್ ಚಂದ್ರ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಶೇಖರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಮತ್ತು ಹಲವಾರು ಶಿಕ್ಷಕರು ಜೊತೆಯಲ್ಲಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು