Tel: 7676775624 | Mail: info@yellowandred.in

Language: EN KAN

    Follow us :


ಅಂಗನವಾಡಿ ಮತ್ತು ಪ್ರಾಥಮಿಕ ಶಾಲಾ ಮಕ್ಕಳಿಗೆ ಚಾಣು ಗ್ರೂಪ್ ನಿಂದ ಬ್ಯಾಗು ಮತ್ತು ಪುಸ್ತಕ ವಿತರಣೆ

Posted date: 03 Feb, 2020

Powered by:     Yellow and Red

ಅಂಗನವಾಡಿ ಮತ್ತು ಪ್ರಾಥಮಿಕ ಶಾಲಾ ಮಕ್ಕಳಿಗೆ ಚಾಣು ಗ್ರೂಪ್ ನಿಂದ ಬ್ಯಾಗು ಮತ್ತು ಪುಸ್ತಕ ವಿತರಣೆ

ಚನ್ನಪಟ್ಟಣ: ಬೆಂಗಳೂರಿನ ಹೊಸಕೋಟೆ ರವಿ ರವರ ಚಾಣು ಗ್ರೂಪ್ (ಸಿಕೆಆರ್) ವತಿಯಿಂದ ಚನ್ನಂಕೇಗೌಡನದೊಡ್ಡಿ/ಗೋವಿಂದೇಗೌಡನದೊಡ್ಡಿ, ಹುಚ್ಚಯ್ಯನದೊಡ್ಡಿ ಗ್ರಾಮಗಳ ಅಂಗನವಾಡಿ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಒಟ್ಟು ೧೦೫ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗು, ನೋಟ್ ಪುಸ್ತಕಗಳು, ಸ್ಲೇಟು, ಪೆನ್ನು ಗಳನ್ನು ಹಾಗೂ ಶಿಕ್ಷಕರು ಮತ್ತು ಐದರಿಂದ ಏಳನೇ ತರಗತಿಯ ಮಕ್ಕಳಿಗೆ ಅರ್ಥಸಹಿತ ಭಗವದ್ಗೀತೆಯ ಪುಟ್ಟ ಪುಸ್ತಕವನ್ನು ವಿತರಿಸಲಾಯಿತು.


ಶಾಲಾ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದ ಜಾನಪದ ಕಲಾವಿದೆ ಲಕ್ಷ್ಮಿ‌ ಗೋ ರಾ ಶ್ರೀನಿವಾಸ ರವರು ಮಕ್ಕಳು ಶ್ರದ್ಧೆಯಿಂದ ಓದಬೇಕು, ಓದಿದ್ದನ್ನು ಮನನ ಮಾಡಿಕೊಂಡು ಸಾಧನೆಯತ್ತ ಮುನ್ನುಗ್ಗಬೇಕು.


ಅರ್ಥವಾಗದ್ದನ್ನು ಪದೇಪದೇ ಶಿಕ್ಷಕರ ಬಳಿ ಪ್ರಶ್ನಿಸಿ‌ ತಿಳಿದುಕೊಳ್ಳಬೇಕು, ಈ ಪ್ರಶ್ನಿಸುವ ಮನೋಭಾವ ನಿಮ್ಮ ಮುಂದಿನ ಜೀವನಗಳಲ್ಲಿ ಬಹಳ ಪ್ರಯೋಜನಕಾರಿಯಾಗಬಲ್ಲದು ಎಂದರು.


ಮಕ್ಕಳಲ್ಲಿ ಅದರಲ್ಲೂ ಹೆಣ್ಣು ಮಕ್ಕಳು ತಮ್ಮ ಮಾನ ಮತ್ತು ಪ್ರಾಣ ಕಾಪಾಡಿಕೊಳ್ಳಲು ಕರಾಟೆ ಶಿಕ್ಷಣ ಅತ್ಯವಶ್ಯಕವಾಗಿದೆ. ನಾನು ಕರಾಟೆ ಶಿಕ್ಷಕಿಯಾಗಿದ್ದು ತಾವು ಮತ್ತು ತಮ್ಮ ಶಿಕ್ಷಕರು ಒಪ್ಪಿದರೆ ಕೆಲಕಾಲ ತಮ್ಮೆಲ್ಲರಿಗೂ‌ ಉಚಿತವಾಗಿ ಕರಾಟೆ ಕಲಿಸಿಕೊಡುವುದಾಗಿ ತಿಳಿಸಿದರು.


ಕರ್ನಾಟಕ ಜಾನಪದ ಪರಿಷತ್ತಿನ ತಾಲ್ಲೂಕು ಅಧ್ಯಕ್ಷರಾದ ಗೋ ರಾ ಶ್ರೀನಿವಾಸ ಮಾತನಾಡಿ ಹಳ್ಳಿಯ ವಾತಾವರಣ ನಗರದಲ್ಲಿ ಸಿಗುವುದಿಲ್ಲ, ನಗರದಲ್ಲಿ ಓದಿದ ಮಕ್ಕಳು ಕೇವಲ ಪುಸ್ತಕದ ಪಾಠಗಳನ್ನು ಮಾತ್ರ ಕಲಿಯುತ್ತಾರೆ, ಆದರೆ ಹಳ್ಳಿಗಳಲ್ಲಿ ಓದುವ ಮಕ್ಕಳು ಪುಸ್ತಕದ ಜೊತೆಗೆ ಜೀವನದ ಪಾಠಗಳನ್ನು ಕಲಿಯಬಹುದು. ನೀವು ಶಾಲೆಯಲ್ಲಿ ಕಲಿತಷ್ಟೇ ಮನೆಯಲ್ಲಿಯೂ ಓದಿಕೊಂಡರೆ ಮುಂದಿನ ವಿದ್ಯಾಭ್ಯಾಸ ಸುಲಲಿತವಾಗುತ್ತದೆ ಎಂದು ತಿಳಿಸಿದರು.


ವಿತರಣಾ ಸಮಯದಲ್ಲಿ ಹೊನ್ನಿಗಾನಹಳ್ಳಿ ಸುಜೇಂದ್ರ, ಹುಚ್ಚಯ್ಯನದೊಡ್ಡಿ ಎಸ್ ಡಿ ಎಂ ಸಿ‌ ಅಧ್ಯಕ್ಷ ಕೃಷ್ಣ, ಶಿಕ್ಷಕಿಯರಾದ ಸುವರ್ಣ, ಜಯಲಕ್ಷ್ಮಮ್ಮ, ಮಜುಳಾ, ಅಂಗನವಾಡಿ ಶಿಕ್ಷಕಿಯರಾದ ಚಿಕ್ಕಚನ್ನಮ್ಮ, ಗೌರಮ್ಮ ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑