Tel: 7676775624 | Mail: info@yellowandred.in

Language: EN KAN

    Follow us :


ಬೀದಿ ಕಾಮಣ್ಣರ ಮೇಲೆ ಹದ್ದಿನ ಕಣ್ಣಿಡಲು ಸಜ್ಜಾಗಿದೆ ಓಬವ್ವ ಪಡೆ

Posted date: 06 Feb, 2020

Powered by:     Yellow and Red

ಬೀದಿ ಕಾಮಣ್ಣರ ಮೇಲೆ ಹದ್ದಿನ ಕಣ್ಣಿಡಲು ಸಜ್ಜಾಗಿದೆ ಓಬವ್ವ ಪಡೆ

ರಾಮನಗರ: ಬೀದಿಬದಿ, ಶಾಲಾಕಾಲೇಜು ಮತ್ತಿತರೆಡೆ ನಿಂತು ಹುಡುಗಿಯರನ್ನು ಚುಡಾಯಿಸುವ ಬೀದಿ ಕಾಮಣ್ಣ ರನ್ನು ಎಡೆಮುರಿ ಕಟ್ಟಲು ಜಿಲ್ಲೆಯಲ್ಲಿ ಸಜ್ಜಾಗಿದೆ *ಓಬವ್ವ ಪಡೆ* ಎಂಬ ಮಹಿಳಾ ಪೋಲಿಸ್ ಪಡೆ.


ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸುವ ಜೊತೆಗೆ ಅವರಿಗೆ ಸೂಕ್ತ ರಕ್ಷಣೆ ಒದಗಿಸುವ ಸಲುವಾಗಿ ಜಿಲ್ಲೆಯ ಪೋಲೀಸರು *,ಓಬವ್ವ ಪಡೆ* ರಚಿಸಿಕೊಂಡಿದ್ದು, ಈಗಾಗಲೇ ಈ ತಂಡ ಸದ್ದಿಲ್ಲದೆ ಕಾರ್ಯಾಚರಣೆಗೆ ಇಳಿದಿದೆ. ಈಗಾಗಲೇ ಒಂದಿಬ್ಬರು ಪುಂಡರನ್ನು ವಶಕ್ಕೆ ಪಡೆದು ತಕ್ಕ ಪಾಠವನ್ನು ಕಲಿಸಿದೆ.


ಒಬ್ಬರು ಮಹಿಳಾ ಸಬ್ ಇನ್ಸ್‌ಪೆಕ್ಟರ್ ತಂಡದ ಸಾರಥ್ಯ ವಹಿಸಿದ್ದು ಹತ್ತು ಮಹಿಳಾ ಕಾನ್ ಸ್ಟೇಬಲ್ ಗಳು ಇವರ ಜೊತೆಗಿರುತ್ತಾರೆ. ಇವರಿಗೆಂದೇ ಪ್ರತ್ಯೇಕ ಸೌಲಭ್ಯ ಒದಗಿಸುವ ಪ್ರಕ್ರಿಯೆಯೂ ಹಂತಹಂತವಾಗಿ ನಡೆದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಇಂತಹ ಅನೇಕ ತಂಡಗಳು ರಚನೆ ಆಗಿದ್ದು ಕಾರ್ಯಾಚರಣೆ ನಡೆಸುತ್ತಿವೆ.


ರಾಮನಗರ ಜಿಲ್ಲೆಯಲ್ಲೂ ಇಂತಹ ತಂಡವೊಂದು ಬೇಕು ಎನ್ನುವ ಕೂಗು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಪೋಲಿಸ್ ವರುಷ್ಠಾಧಿಕಾರಿ ಡಾ ಅನೂಪ್ ಎ ಶೆಟ್ಟಿ ಯವರು ಮಹಿಳಾ ಅಧಿಕಾರಿ ನೇತೃತ್ವದಲ್ಲಿ ತಂಡವನ್ನು ರಚನೆ ಮಾಡಿದ್ದಾರೆ.


*ಅರಿವಿನ ಯತ್ನ*

ಮೊದಲಿಗೆ ಈ ತಂಡವು ಶಾಲಾ ಕಾಲೇಜುಗಳಿಗೆ ತೆರಳಿ ಮಹಿಳೆಯರ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಲಿದೆ. ವಿದ್ಯಾರ್ಥಿನಿಯರಿಗೆ ಸ್ವ ರಕ್ಷಣೆಯ ಪಾಠವನ್ನು ಹೇಳಿಕೊಡಲಿದೆ.

ಓಬವ್ವ ಪಡೆಯಲ್ಲಿರುವ ಬಹುತೇಕ ಬಹುತೇಕ *ಸಿಬ್ಬಂದಿಗಳು ಮಫ್ತಿಯಲ್ಲಿಯೇ ಇರುತ್ತಾರೆ.* ಪ್ರತಿ ದಿನ ಗಸ್ತು ತಿರುಗುವ ಈ ಸಿಬ್ಬಂದಿಗಳು ಬಸ್ ಮತ್ತು ರೈಲು ನಿಲ್ದಾಣ, ಪ್ರಮುಖ ವೃತ್ತಗಳು, ಕಾಲೇಜುಗಳ ಆವರಣಗಳಲ್ಲಿ ವಿದ್ಯಾರ್ಥಿನಿಯರಿಗೆ, ರಸ್ತೆಯಲ್ಲಿ ಓಡಾಡುವ ಮಹಿಳೆಯರನ್ನು ಚುಡಾಯಿಸುವವರಿಗೆ, ಅವರೊಟ್ಟಿಗೆ ಅಸಭ್ಯವಾಗಿ ವರ್ತಿಸುವ ಪುಂಡರ ಮೇಲೆ ಹದ್ದಿನ ಕಣ್ಣಿಡಲಿದೆ. ದುರ್ವರ್ತನೆ ತೋರುವವರನ್ನು ವಶಕ್ಕೆ ಪಡೆದು ಪೋಲಿಸ್ ಭಾಷೆಯಲ್ಲಿ ತಕ್ಕ ಪಾಠ ಕಲಿಸಲಿದೆ.


*ಪ್ರೇಮಿಗಳ ಮೇಲೂ ಕಣ್ಣು*

ಕೇವಲ ಪುಂಡರ ಮೇಲಷ್ಟೇ ಓಬವ್ವ ಪಡೆ ಗಮನ ಕೇಂದ್ರೀಕರಿಸಿಲ್ಲ. ಪ್ರೇಮದ ಹೆಸರಿನಲ್ಲಿ ಯುವತಿಯರನ್ನು ಕಾಡುವ, ದೌರ್ಜನ್ಯ ನಡೆಸುವವರ ಮೇಲೂ ಚಾಟಿ ಬೀಸಲು ಸಜ್ಜಾಗಿದೆ. *ಅಪರಾತ್ರಿಯಲ್ಲಿ ಪ್ರೇಮಿಯ ಜೊತೆ ಪ್ರಯಾಣಿಸುವ ಯುವತಿಯರನ್ನೂ ವಿಚಾರಣೆ ಮಾಡಲಿದೆ.* ಅಂತಹವರು ಸಿಕ್ಕಿಬಿದ್ದಲ್ಲಿ *ಪೋಷಕರಿಗೆ ವಿಷಯ ತಿಳಿಸಿ* ಆಕೆಯನ್ನು ರಕ್ಷಿಸುವ ಜೊತೆಗೆ *ಯುವಕರನ್ನು ಶಿಕ್ಷಿಸುವ* ಕೆಲಸವನ್ನೂ ಈ ತಂಡ ಮಾಡಲಿದೆ.


*ಮಹಿಳೆಯರ ರಕ್ಷಣೆಗಾಗಿ ಮಹಿಳಾ ಪೋಲಿಸ್ ತಂಡವೊಂದನ್ನು ರಚಿಸಿದ್ದು ತರಬೇತಿ ನೀಡಬೇಕಿದೆ. ಬಳಿಕ ಪೂರ್ಣ ಪ್ರಮಾಣದಲ್ಲಿ ಈ ತಂಡ ಕಾರ್ಯಾಚರಣೆ ನಡೆಸಲಿದೆ.

ಡಾ ಅನೂಪ್ ಎ ಶೆಟ್ಟಿ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑