Tel: 7676775624 | Mail: info@yellowandred.in

Language: EN KAN

    Follow us :


ಆರೋಗ್ಯಕ್ಕೆ  ನೈರ್ಮಲ್ಯ ಅಗತ್ಯ : ದೊಡ್ಡ ಆಲಹಳ್ಳಿ ಪುಟ್ಟಸ್ವಾಮಿಗೌಡ

Posted date: 02 Mar, 2018

Powered by:     Yellow and Red

ರಾಮನಗರ : ಗ್ರಾಮೀಣ ನಾಗರೀಕರ ಆರೋಗ್ಯ ಗ್ರಾಮದ ನೈರ್ಮಲ್ಯವನ್ನು ಅವಲಂಬಿಸಿದೆ ಎಂದು ಆರೋಗ್ಯ ಇಲಾಖೆಯ ದೊಡ್ಡ ಆಲಹಳ್ಳಿ ಪುಟ್ಟಸ್ವಾಮಿಗೌಡ ಅಭಿಪ್ರಾಯಪಟ್ಟರು. 
    ತಾಲ್ಲೂಕಿನ ಕೈಲಾಂಚ ಹೋಬಳಿ, ಬನ್ನಿಕುಪ್ಪೆ ಗ್ರಾಮದ ಕೆಂಗಲ್ ಆಂಜನೇಯ ಸ್ವಾಮಿ ಗ್ರಾಮಾಂತರ ವಿದ್ಯಾ ಸಂಸ್ಥೆ ಆವರಣದಲ್ಲಿ ಶಾಂತಿನಿಕೇತನ ಕಾಲೇಜ್ ಆಫ್ ಸೈನ್ಸ್ ಅಂಡ್ ಮ್ಯಾನೇಜ್‍ಮೆಂಟ್ ಸ್ಟಡೀಸ್ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಪೌಷ್ಠಿಕತೆ ಮತ್ತು ನೈರ್ಮಲ್ಯದ ಪಾತ್ರ ಕುರಿತು ಉಪನ್ಯಾಸ ಮಾಡಿದ ಅವರು ನಿರ್ಮಲ ಗ್ರಾಮ ಮಹಾತ್ಮ ಗಾಂಧಿಜೀ ಕಂಡ ಕನಸು ಅಂತಹ ಒಬ್ಬ ಮಹಾನ್ ವ್ಯಕ್ತಿ ಕಂಡ ಕನಸನ್ನು ಏಳು ದಶಕಗಳು ಕಳೆದರೂ ಸಾಕಾರ ಗೊಳಿಸದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು ಗ್ರಾಮ ನೈರ್ಮಲ್ಯ ಬರೇ ಜನಪ್ರತಿನಿಧಿಗಳ, ಅಧಿಕಾರಿಗಳ ಕೆಲಸ ಎಂಬ ಭಾವನೆ ಸಾಮಾನ್ಯ ನಾಗರೀಕರ ಮೆದುಳಿನಿಂದ ಹೂರ ಹೋಗಿ ಗ್ರಾಮದ ಸ್ವಚ್ಛತೆ ಎಲ್ಲ ನಾಗರೀಕರ ಕರ್ತವ್ಯ ಎಂಬ ಭಾವನೆ ಪ್ರತಿಯೊಬ್ಬ ನಾಗರೀಕರ ಮನದಲ್ಲಿ ಮೂಡಿದಾಗ ಮಾತ್ರ ಇಂತಹ ಸರ್ಕಾರದ ಜನಪರ ಯೋಜನೆಗಳು ಅನುಷ್ಠಾನಗೊಳ್ಳಲಿವೆ ಎಂದ ಅವರು ನಾಗರೀಕರು ಹಾಗೂ ಯುವ ಸಮುದಾಯ ಪ್ರಾಶ್ಚಿಮಾತ್ಯ ಆಹಾರ ಪದ್ಧತಿಯಿಂದ ದೂರವಿದ್ದು ಪಾರಂಪರಿಕ ಆಹಾರ ಪದ್ದತಿಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿ ನಿತ್ಯ ಹೆಚ್ಚು ಹೆಚ್ಚು ಹಸಿರು ಸೋಪ್ಪು ತರಕಾರಿಗಳ್ಳುಳ್ಳ ಸಮತೋಲನ ಆಹಾರ ಸೇವನೆಯಿಂದ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದರು. 
    ಗ್ರಾಮೀಣ ಭಾಗದಲ್ಲಿ ಶೌಚಾಲಯಗಳನ್ನು ಕಟ್ಟಿಸುವುದು ಮುಖ್ಯವಲ್ಲ ಅವುಗಳನ್ನು ನಿತ್ಯ ಬಳಸುವ ಅಭ್ಯಾಸವನ್ನು ರೂಢಿಸಿಕೊಳ್ಳುವ ಮೂಲಕ ಬಯಲು ಮಲವಿರ್ಸಜನೆಯಿಂದ ದೂರವಿದ್ದು ನಿರ್ಮಲ ಗ್ರಾಮಗಳನ್ನು ನಿರ್ಮಾಣ ಮಾಡುವುದು ಗ್ರಾಮೀಣ ಜನರ ಗುರುತರ ಜವಾಬ್ದಾರಿಯಾಗಿದೆ ಇದರಿಂದ ನಾಗರೀಕರು ಜಂತುಹುಳು, ಚರ್ಮರೋಗ, ಕಾಲರ, ಕಾಮಾಲೆ, ವಿಷಮಶೀತ ಜ್ವರ ಇನ್ನು ಮುಂತಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಮೂಲಕ ಗಳಿಸಿದ ಹಣವನ್ನು ಉಳಿಸಿಕೊಳ್ಳುವ ಮೂಲಕ  ಆರ್ಥಿಕವಾಗಿ ಸಬಲರಾಗಬಹುದಾಗಿದೆ ಎಂದು ತಿಳಿಸಿದರು. 
    ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಧ್ಯಾಪಕ ಸಂತೋಪ್‍ಕುಮಾರ್ ನಾಗರೀಕರು ತಮ್ಮ ಮನೆಗಳ ಮುಂದಿನ ಚರಂಡಿಯ ಸ್ವಚ್ಛತೆ ಗ್ರಾಮಪಂಚಾಯಿತಿಯ ಕೆಲಸ ಎಂಬ ನಕರಾತ್ಮಕ ಧೋರಣೆಯಿಂದ ಹೂರ ಬಂದು ತಮ್ಮ ತಮ್ಮ ಮನೆ ಮುಂದಿನ ಚರಂಡಿಗಳನ್ನು ತಾವೇ ಶುಚಿಗೊಳಿಸಿಕೊಳ್ಳುವ ಮೂಲಕ ನಿರ್ಮಲ ಗ್ರಾಮ ಯೋಜನೆಗೆ ಸರ್ಕಾರಕ್ಕೆ ಸಹಕಾರ ನೀಡಬೇಕಿದೆ ಎಂದರು. 
    ಸಂದರ್ಭದಲ್ಲಿ ಪ್ರಾಂಶುಪಾಲರಾದ ಎಸ್. ಮಾನಸ, ಎನ್.ಎಸ್.ಎಸ್ ಶಿಬಿರ ಅಧಿಕಾರಿ ಎಂ. ಮುನಿರಾಜು, ಶಿಬಿರಾರ್ಥಿಗಳು ಗ್ರಾಮಸ್ಥರು ಹಾಜರಿದ್ದರು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑