Tel: 7676775624 | Mail: info@yellowandred.in

Language: EN KAN

    Follow us :


ಖ್ಯಾತ ಕುಂಚ ಕಲಾವಿದ ನಾರಾಯಣ ಭಂಡಾರಿ ರವರ ಕಲಾಕೃತಿ ಮಳಿಗೆ

Posted date: 13 Feb, 2020

Powered by:     Yellow and Red

ಖ್ಯಾತ ಕುಂಚ ಕಲಾವಿದ ನಾರಾಯಣ ಭಂಡಾರಿ ರವರ ಕಲಾಕೃತಿ ಮಳಿಗೆ

ಖ್ಯಾತ ಕುಂಚ ಕಲಾವಿದ ನಾರಾಯಣ ಭಂಡಾರಿ ರವರು ರಾಮನಗರದ ಕೆಂಪೇಗೌಡ ವೃತ್ತದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಎಂಟರ್ ಪ್ರೈಸಸ್ ಎಂಟರ್ ಪ್ರೈಸಸ್ ಮಳಿಗೆಯನ್ನು ತೆರೆದಿದ್ದಾರೆ. ಈ ಮಳಿಗೆಯಲ್ಲಿ ಅವರು ರಚಿಸಿರುವ ವಿವಿಧ ಕಲಾಕೃತಿಗಳು ಸಿಗಲಿವೆ. ಜೊತೆಗೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ವಸ್ತುಗಳು ದೊರೆಯಲಿವೆ.
ಬುಧವಾರ ಶ್ರೀ ದುರ್ಗಾ ಪರಮೇಶ್ವರಿ ಎಂಟರ್ ಪ್ರೈಸಸ್ ಮಳಿಗೆಯನ್ನು ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಖ್ಯಾತ ಕುಂಚ ಕಲಾವಿದರಾದ ನಾರಾಯಣ ಭಂಡಾರಿ ಅವರನ್ನು ಗೌರವಿಸಲಾಯಿತು. ದಾರಿದೀಪ ವೃದ್ಧಾಶ್ರಮದ ಸಂಸ್ಥಾಪಕಿ ಕವಿತಾರಾವ್, ಉದಯೋನ್ಮುಖ ಕಲಾವಿದೆ ಚಿತ್ರಾರಾವ್, ಅಮೃತ ವಿಕಲಚೇತನ ಚಾರಿಟಬಲ್ ಟ್ರಸ್ಟಿ ಕಾರ್ಯದರ್ಶಿ ಟಿ.ರಮೇಶ್, ಸಾಹಿತ್ಯ, ಸಂಶೋಧನಾ ವಿದ್ಯಾರ್ಥಿ ಎಸ್. ರುದ್ರೇಶ್ವರ, ಶ್ರೀ ದುರ್ಗ ಪರಮೇಶ್ವರಿ ಎಂಟರ್ ಪ್ರೈಸಸ್ ನ ಎನ್. ರಶ್ಮಿ, ಜಯಕುಮಾರ್ ಇದ್ದರು.
ನಾರಾಯಣ ಭಂಡಾರಿ ರವರ ಕಿರು ಪರಿಚಯ : ಭಾರತೀಯ ಸಂಸ್ಕೃತಿ ವಿದ್ಯಾಪೀಠ ಪ್ರೌಢಶಾಲೆಯಲ್ಲಿ 38 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.  ಜಲವರ್ಣ ಚಿತ್ರದ ಜೊತೆಗೆ ಪಕ್ಷಿಗಳ ವರ್ಣ ಚಿತ್ರಗಳನ್ನು ರಚಿಸಿದ್ದಾರೆ. ಮೈಕ್ರೋ ಆರ್ಟ್ ನಲ್ಲಿ ಅಕ್ಕಿಕಾಳು, ಬೇಳೆ, ಸಾಸಿವೆ, ಗಸಗಸೆಗಳಲ್ಲಿ ಸೂಕ್ಷ್ಮ ಚಿತ್ರಗಳನ್ನು ರಚಿಸಿದ್ದಾರೆ. ಪಕ್ಷಿ ಸಂಕುಲಕ್ಕೆ ಸೇರಿರುವ 800 ಪಕ್ಷಿಗಳ ಚಿತ್ರವನ್ನು ಜಲವರ್ಣದಲ್ಲಿ ರಚಿಸುವ ಜತೆಗೆ ಅವುಗಳ ಬಗೆಗಿನ ಮಾಹಿತಿಯನ್ನು ಬರೆದಿದ್ದಾರೆ.
ರಾಜ್ಯದ ಹಲೆವೆಡೆ ಪಕ್ಷಿಗಳ ಪ್ರದರ್ಶವನ್ನು ಏರ್ಪಡಿಸಿದ್ದಾರೆ. ಎಲ್ಲಾ ಕಡೆಯೂ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಮನುಷ್ಯನ ದುರಾಸೆಯಿಂದ ಪರಿಸರದಲ್ಲಿ ಮಾಂಸದ ಮುದ್ದೆಯಾಗಿ ಬೀಳುತ್ತಿರುವ ಪಕ್ಷಿಗಳಿಗೆ ರಕ್ಷಣೆ ಒದಗಿಸಬೇಕು ಎಂದು ಮಾತನಾಡುವವರು ಬಹುತೇಕ ಮಂದಿ ಇದ್ದಾರೆ. ಆದರೆ ಕಾಳಜಿಯನ್ನು ತೋರಿ ರಚನಾತ್ಮಕ ಕೆಲಸದಲ್ಲಿ ತೊಡಗಿಸಿಕೊಳ್ಳುವವರು ಕೆಲವು ಮಂದಿ ಮಾತ್ರ. ಅವರಲ್ಲಿ ನಾರಾಯಣ ಭಂಡಾರಿ ಅವರೂ ಒಬ್ಬರು.
ನಾರಾಯಣ ಭಂಡಾರಿ ಅವರ ಯಶಸ್ಸಿನ ಜೀವನಕ್ಕೆ ಪತ್ನಿ ಮಮತಾಮಣಿ ಅವರ ಪರಿಶ್ರಮವು ಸೇರಿಕೊಂಡಿದೆ. ಮೂಲತಃ ಮಂಗಳೂರಿನ ಕಟೀಲು ಗ್ರಾಮದ ಅವರು ರಾಮನಗರದಲ್ಲಿ ನೆಲೆಸಿರುವುದು ಹೆಮ್ಮೆ ಎನಿಸುತ್ತದೆ. ವಿನಾಶದ ಅಂಚಿನಲ್ಲಿರುವ ಹಕ್ಕಿಗಳನ್ನು ಕುಂಚದಲ್ಲಿ, ಪುನರ್ ಸೃಷ್ಟಿಸುವ ಕೆಲಸವನ್ನು ಭಂಡಾರಿ ಅವರು ಶ್ರದ್ಧೆಯಿಂದಲೇ ಬೆಳೆಸಿಕೊಂಡಿದ್ದಾರೆ. ಕೇವಲ ಚಿತ್ರ ರಚಿಸುವುದಷ್ಟೇ  ಇವರ ಗುರಿಯಲ್ಲ. ಆ ಪಕ್ಷಿಯ ಸೂಕ್ಷ್ಮಾತಿಸೂಕ್ಷ್ಮ ವಿವರಗಳನ್ನು ದಾಖಲಿಸಿದ್ದಾರೆ. ಹಕ್ಕಿಯ ಜೀವನ ಕ್ರಮ, ಚಲನವಲನ, ಆಹಾರ ವಿಧಾನ ಮುಂತಾದ ಮಾಹಿತಿಯನ್ನೆಲ್ಲ ಅತ್ಯಂತ ವೈಜ್ಞಾನಿಕವಾಗಿ ಕಲೆ ಹಾಕಿ, ಪ್ರದರ್ಶನದ ವೇಳೆ ತಿಳಿಸುತ್ತಾರೆ. ರಾಮನಗರಕ್ಕೆ ಸಾಂಸ್ಕೃತಿಕ ಚೌಕಟ್ಟನ್ನು ತಂದುಕೊಟ್ಟವರಲ್ಲಿ ನಾರಾಯಣ ಭಂಡಾರಿ ಒಬ್ಬರು.
ಈಗಾಗಲೇ ಕಾಲಗರ್ಭದಲ್ಲಿ ನಾಶವಾಗಿರುವ ಹಕ್ಕಿಗಳು, ದೇಶವಿದೇಶಗಳ ಚಿತ್ರವಿಚಿತ್ರ ಪಕ್ಷಿಗಳು, ಅತಿದೊಡ್ಡ, ಅತಿಚಿಕ್ಕ ಹಕ್ಕಿ ಪ್ರಭೇದಗಳು, ಸಸ್ಯಾಹಾರಿ, ಮಾಂಸಾಹಾರಿ, ಮೋಹಕವಾಗಿ ಹಾರುವ, ಗತ್ತಿನಿಂದ ನಡೆದಾಡುವ ಪಕ್ಷಿಗಳನ್ನು ಕುಂಚದ ಮೂಲಕ ಚಿತ್ರಿಸಿದ್ದಾರೆ. ಹಲವು ಹಕ್ಕಿಗಳ ಕೊಕ್ಕು, ಕಾಲು, ಗರಿ ಇತ್ಯಾದಿ ಅಂಗಗಳನ್ನು ಪ್ರತ್ಯೇಕವಾಗಿ ಚಿತ್ರಿಸಿ ಅವುಗಳ ವೈಶಿಷ್ಟ್ಯವನ್ನು ದಾಖಲಿಸುವ ಅಪರೂಪದ ಪ್ರಯತ್ನ ಮಾಡಿದ್ದಾರೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑