ಸರಳ ಸಜ್ಜನ, ಹೃದಯವಂತ ವೇದಮೂರ್ತಿ ಗೆ ಶುಭಾಶಯಗಳ ಸುರಿಮಳೆ
ಚನ್ನಪಟ್ಟಣ:ಫೆ/೨೨/೨೦/ಶನಿವಾರ.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಿರಿಯ ಫಾರ್ಮಾಸಿಸ್ಟ್ ಆಗಿ ಪ್ರಾಮಾಣಿಕ ಹಾಗೂ ಕಾಳಜಿಯಿಂದ ಕರ್ತವ್ಯ ನಿರ್ವಹಿಸುತ್ತಿರುವ ವೇದಮೂರ್ತಿ ಯವರಿಗೆ ತಾಲ್ಲೂಕಿನ ಅನೇಕ ಸಂಘಸಂಸ್ಥೆಗಳ ಪದಾಧಿಕಾರಿಗಳು ತಮ್ಮದೇ ರೀತಿಯಲ್ಲಿ ಜನುಮದಿನ ಆಚರಿಸುವ ಮೂಲಕ ಶುಭಾಶಯಗಳನ್ನು ಹೇಳಿದ್ದಾರೆ.
ಮುಂಜಾನೆ ಕೂಗುವ ಕೋಳಿ ಸ್ಥಳೀಯರನ್ನು ಮಾತ್ರ ಎಚ್ಚರಿಸಿದರೇ ವೇದಮೂರ್ತಿ ಯವರು ತಮ್ಮ ಮೊಬೈಲ್ ಮೂಲಕ ನಗರದ ಅನೇಕ ಗೆಳೆಯರನ್ನಲ್ಲದೇ, ಗ್ರಾಮೀಣ ಭಾಗದ ತಮ್ಮ ಬಂಧು ಮಿತ್ರರನ್ನು ಬೆಳಗಿನ ಜಾವ ನಾಲ್ಕು ಗಂಟೆಯಿಂದಲೇ ಎಬ್ಬಿಸಿ ನಡೆಯುವಂತೆ (ವಾಕಿಂಗ್) ಎಚ್ಚರಿಸಿ ಪ್ರೇರೇಪಿಸುತ್ತಾರೆ. ಇವರ ಕರೆಗೆ ಓಗೊಟ್ಟ ಅಧಿಕಾರಿಗಳು, ಸಿಬ್ಬಂದಿಗಳು, ಸಮಾಜಸೇವಕರು, ರಾಜಕಾರಣಿಗಳು ಹಾಗೂ ಸನ್ಮಿತ್ರರು ನನ್ನ ಆರೋಗ್ಯದ ಗುಟ್ಟು ವೇದಮೂರ್ತಿ ಯವರಿಂದ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.
ಕೇವಲ ಸನ್ಮಿತ್ರರಿಗೆ ಮಾತ್ರ ನಡಿಗೆಯ ಮಹತ್ವ ತಿಳಿಸದೇ ಆಸ್ಪತ್ರೆಗೆ ಬರುವ ರೋಗಿಗಳಿಗೂ ಸಹ ತಮ್ಮ ಬಿಡುವಿನ ವೇಳೆಯಲ್ಲಿ ನಡಿಗೆಯಿಂದ ಮತ್ತು ನೀರು ಸೇವನೆಯಿಂದ ಆಗುವ ಆಗುವ ಉಪಯೋಗಗಳನ್ನು ತಪ್ಪದೇ ತಿಳಿಸಿಕೊಡುತ್ತಾರೆ. ಅವರಿಗೆ ಸಂಬಂಧಿಸಿದ ಔಷಧ ದಾಸ್ತಾನನ್ನು ಕ್ರಮಬದ್ಧವಾಗಿ ಜೋಡಿಸಿ, ಸ್ವಚ್ಚತೆ ಕಾಪಾಡಿಕೊಂಡಿದ್ದು ಆಸ್ಪತ್ರೆಯ ಸ್ವಚ್ಚತೆಗೂ ಗಮನ ನೀಡಿ ರೋಗಿಗಳ ಹಾಗೂ ಸಿಬ್ಬಂದಿಗಳ ಮೆಚ್ಚುಗೆಗೆ ಕಾರಣವಾಗಿದ್ದಾರೆ.
ನನ್ನ ಜನುಮದಿನವನ್ನು ಹದಿನೈದಕ್ಕೂ ಹೆಚ್ಚು ಸಂಘಸಂಸ್ಥೆಗಳು ಬೇರೆಬೇರೆಯಾಗಿ ಆಚರಿಸಿದ್ದು ಮುಜುಗರದೊಂದಿಗೆ ಸಂತೋಷವೂ ಆಗಿದೆ. ತಾಲ್ಲೂಕಿನ ಇಷ್ಟೊಂದು ಮಂದಿ ನನ್ನ ಮೇಲೆ ವಿಶ್ವಾಸ ಇಟ್ಟಿರುವುದು ನನ್ನ ಪೂರ್ವಜನ್ಮದ ಪುಣ್ಯ. ವಾಕಿಂಗ್ ಟೀಂ ನಿಂದ ರಸ್ತೆ ಬದಿಯಲ್ಲಿ, ಕೆಲವು ಸಂಘಸಂಸ್ಥೆಗಳಿಂದ ಆಸ್ಪತ್ರೆ ಮತ್ತು ನಮ್ಮ ಮನೆಯಲ್ಲಿ, ಇನ್ನೂ ಕೆಲವರು ವೃದ್ದಾಶ್ರಮದಲ್ಲಿ ಆಚರಿಸಿ ಶುಭಕೋರಿರುವುದು ಸಂತಸ ತಂದಿದೆ. ಅದರಲ್ಲೂ ನನ್ನ ಊರಿನ ಯುವಕ ಮಿತ್ರರು ಗ್ರಾಮದಲ್ಲಿ ಹುಟ್ಟುಹಬ್ಬ ಆಚರಿಸಿದ್ದು ಅತೀವ ಸಂತೋಷವಾಗಿದೆ ಎಂದು ಭಾವುಕಕ್ಕೆ ಒಳಗಾದರು.
ಜನ್ಮ ದಿನದ ಶುಭಾಶಯಗಳನ್ನು ಸ್ಥಳೀಯ ರಾಜಕಾರಣಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪತ್ರಕರ್ತರು, ಅನೇಕ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ನೀಲಕಂಠನಹಳ್ಳಿ ಗ್ರಾಮದ ಯುವಕರು ಸನ್ಮಾನಿಸುವ ಮೂಲಕ ಶುಭಕೋರಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು