Tel: 7676775624 | Mail: info@yellowandred.in

Language: EN KAN

    Follow us :


ಬಿಎಸ್ ಪೆಟ್ರೋಲ್ ಬಂಕ್ ನಲ್ಲಿ ಅಳತೆ ಮೋಸ, ಗ್ರಾಹಕ ದೂರು, ಆಹಾರ ನಿರೀಕ್ಷಕಿ ಭೇಟಿ ಪರಿಶೀಲನೆ

Posted date: 24 Feb, 2020

Powered by:     Yellow and Red

ಬಿಎಸ್ ಪೆಟ್ರೋಲ್ ಬಂಕ್ ನಲ್ಲಿ ಅಳತೆ ಮೋಸ, ಗ್ರಾಹಕ ದೂರು, ಆಹಾರ ನಿರೀಕ್ಷಕಿ ಭೇಟಿ ಪರಿಶೀಲನೆ

ಚನ್ನಪಟ್ಟಣ:ಫೆ/೨೪/೨೦/ಸೋಮವಾರ.


ನಗರದ ಸಾತನೂರು ರಸ್ತೆಯಲ್ಲಿರುವ ಎಸ್ ಬಿ ಸರ್ವೀಸ್ ಸ್ಟೇಷನ್ (ಪೆಟ್ರೋಲ್ ಬಂಕ್) ನಲ್ಲಿ ಗ್ರಾಹಕರಿಗೆ ಮೋಸ ಮಾಡಲಾಗುತ್ತಿದೆ ಎಂಬ ದೂರಿನ ಮೇರೆಗೆ ಆಹಾರ ನಿರೀಕ್ಷಕಿ ಅನುಷಾ, ಶಿರಸ್ತೇದಾರರಾದ ಶಾಂತಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ರಾಮನಗರ ತಾಲ್ಲೂಕು ಕೈಲಾಂಚ ಹೋಬಳಿಯ ಅವ್ವೇರಹಳ್ಳಿ ಗ್ರಾಮದ ನಾಗೇಂದ್ರ ಎಂಬುವವರು ತಮ್ಮ ಬೈಕ್ ಗೆ ೨೦೦ ರೂಪಾಯಿಗಳಿಗೆ ಪೆಟ್ರೋಲ್ ಹಾಕಿಸಿದ್ದು, ೦೨.೬೭ ಲೀ ಮೀಟರ್ ನಲ್ಲಿ ತೋರಿಸುತ್ತಿದ್ದರೂ, ಸಹ ಪೆಟ್ರೋಲ್ ಕಡಿಮೆ ಹಾಕಿದ್ದಾರೆ, ಎಂಬ ಸಂದೇಹದ ಮೇರೆಗೆ ಬೈಕ್ ನ ಟ್ಯಾಂಕ್ ನಿಂದ ಪೆಟ್ರೋಲ್ ಹೊರತೆಗೆಸಿದ್ದಾರೆ. ೦೨.೬೭ ರ ಬದಲಾಗಿ ೦೧.೭೫ ಲೀ ಹೊರಗೆ ಬಂದಿದ್ದರಿಂದ ನೇರವಾಗಿ ಆಹಾರ ನಿರೀಕ್ಷಕರಿಗೆ ಮಾಹಿತಿ ನೀಡಲಾಗಿ ಸ್ಪಂದಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.


ದೂರು ನೀಡಿ ಮಾತನಾಡಿದ ಗ್ರಾಹಕ ನಾಗೇಂದ್ರ ನನ್ನ ಕಣ್ಣ ಮುಂದೆಯೇ ಮೋಸ ಮಾಡಿದ್ದು ಅನುಮಾನಗೊಂಡ ನಾನು ಸ್ಥಳದಲ್ಲಿಯೇ ಪರಿಶೀಲಿಸಲಾಗಿ ಪೆಟ್ರೋಲ್ ಕಡಿಮೆ ಹಾಕಿರುವುದು ಖಾತ್ರಿಯಾದ್ದರಿಂದ ದೂರು ನೀಡಿದ್ದೇನೆ ಎಂದರು.


ಮೇಲ್ನೋಟಕ್ಕೆ ಮೀಟರ್ ಗೂ ಪೆಟ್ರೋಲ್ ಗೂ ವ್ಯತ್ಯಾಸ ತಿಳಿದಿದ್ದು ಸಂಬಂಧಿಸಿದ ಜಿಲ್ಲಾ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಲಾಗಿದೆ. ಅವರು ಬಂದ ನಂತರ ಅವರ ಸಮ್ಮುಖದಲ್ಲಿ ಇಂದು ಬೆಳಿಗ್ಗೆ ದಾಸ್ತಾನು ಇದ್ದ ಪೆಟ್ರೋಲ್ ಮತ್ತು ಈಗ ಮಾರಾಟವಾಗಿರುವ ಪೆಟ್ರೋಲ್, ನಂತರ ಉಳಿದ ಪೆಟ್ರೋಲ್ ವ್ಯತ್ಯಾಸವನ್ನು ಅಳೆದ ನಂತರವೇ ಸತ್ಯಾಂಶ ಹೊರಬರಬೇಕಾಗಿದೆ ಎಂದು ಅನುಷಾ ತಿಳಿಸಿದರು.


ಪೆಟ್ರೋಲ್ ಬಂಕ್ ಮಾಲೀಕ ಶೃಂಕಲ್ ಗೌಡ ಮಾತನಾಡಿ ನಮ್ಮಲ್ಲಿ ಯಾವುದೇ ರೀತಿಯ ಮೋಸವಾಗಿಲ್ಲ, ಅಧಿಕಾರಿಗಳು ಬಂದು ಮೀಟರ್ ಪರಿಶೀಲಿಸಿ, ಸಿ ಸಿ ಟಿವಿಯನ್ನು ಪರೀಕ್ಷಿಸಿದ ನಂತರ ಸತ್ಯಾಂಶ ಗೊತ್ತಾಗಲಿದೆ ಎಂದು ಹೇಳಿದರು. 


ಶೃಂಕರ್ ಗೌಡ 

ಪೆಟ್ರೋಲ್ ಬಂಕ್ ಮಾಲೀಕ

ಸಂಜೆ ಆರು ಗಂಟೆಯ ನಂತರ ಇಂಡಿಯನ್ ಸೇಲ್ಸ್ ಮ್ಯಾನೇಜರ್ ಜೊತೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ದಂಡಾಧಿಕಾರಿ ಸುದರ್ಶನ್ ರವರು ಅಳತೆಯನ್ನು ಪರಿಶೀಲಿಸಲಾಗಿ ನಮಗೆ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ, ಪೆಟ್ರೋಲ್ ಹಾಕುವ ಹುಡುಗರು ಕೈಚಳಕ ಮಾಡಿರಬಹುದೇ ವಿನಹ ಪಂಪ್ ಗಳಲ್ಲಿ ವ್ಯತ್ಯಾಸ ಕಂಡುಬಂದಿಲ್ಲ ಎಂದು ಮಾಹಿತಿ ನೀಡಿದರು.


ಎಜಿಎಸ್ ಕೋಳಿ ಅಂಗಡಿಯ ಮಾಲೀಕ ಎ ಜಿ ಸ್ವಾಮಿ ಸೇರಿದಂತೆ ಅನೇಕ ಗ್ರಾಹಕರು ಈ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಗ್ರಾಹಕರ ಮನ ಬೇರೆಡೆ ಸೆಳೆದು ಮೋಸ ಮಾಡುವುದರಲ್ಲಿ ನಿಸ್ಸೀಮರಾಗಿದ್ದಾರೆ. ಅಧಿಕಾರಿಗಳು ಇಂದೇ ಪೆಟ್ರೋಲ್ ಬಂಕ್ ಸೀಜ್ ಮಾಡಿ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಂಡು ಗ್ರಾಹಕರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು.


ಪೋಲಿಸ್ ಇನ್ಸ್‌ಪೆಕ್ಟರ್ ಜೋಸೆಫ್ ಮತ್ತು ಸಿಬ್ಬಂದಿಗಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑