ಪೋಸ್ಟ್ ಮಾಸ್ಟರ್ ಎಚ್.ಟಿ. ಲಕ್ಷ್ಮಿದೇವಿ ಅವರಿಗೆ ಬೀಳ್ಕೊಡುಗೆ ಸಮಾರಂಭ
ರಾಮನಗರ : ಜನಸಾಮಾನ್ಯರು ಸರಕಾರಿ ನೌಕರರಿಂದ ಉತ್ತಮ ಸೇವೆಯನ್ನು ಬಯಸುತ್ತಾರೆ, ಹೀಗಾಗಿ ನಮ್ಮಿಂದ ತೃಪ್ತಿದಾಯಕ ಕೆಲಸ ಆಗುತ್ತಿದೆಯೇ ಎಂಬುದನ್ನು ನೌಕರರು ಆತ್ಮಾವಲೋಖನ ಮಾಡಿಕೊಳ್ಳಬೇಕು ಎಂದು ಬಿಡದಿ ಅಂಚೆ ಕಚೇರಿಯ ಅಂಚೆ ಪಾಲಕಿ(ಪೋಸ್ಟ್ ಮಾಸ್ಟರ್) ಎಚ್.ಟಿ.ಲಕ್ಷ್ಮಿದೇವಿ ತಿಳಿಸಿದರು.
ಅಂಚೆ ಇಲಾಖೆಯ ವಿವಿಧ ಹುದ್ದೆಗಳಲ್ಲಿ 39 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಯಾದ ಹಿನ್ನೆಲೆಯಲ್ಲಿ ಬಿಡದಿ ಅಂಚೆ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅಭಿನಂದನೆಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ಸರಕಾರಿ ನೌಕರರು ಸರಿಯಾಗಿ ಕೆಲಸ ಮಾಡುವುದಿಲ್ಲ ಎಂಬ ಆರೋಪಗಳು ಜನರಲ್ಲಿ ಸರ್ವೆ ಸಾಮಾನ್ಯವಾಗಿವೆ, ಇಂತಹ ಆಪಾದನೆಗಳಿಂದ ನೌಕರರು ಮುಕ್ತರಾಗಲು ಸರಕಾರದಿಂದ ಜಾರಿಗೊಳ್ಳುವ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೊಂಡಿಗಳಾಗಿ ಕೆಲಸ ಮಾಡಬೇಕು, ತಮ್ಮ ಸುದೀರ್ಘ ಸರಕಾರಿ ಸೇವೆಯಲ್ಲಿ ಜನಸಾಮಾನ್ಯರ ಜೊತೆಯಲ್ಲಿ ಬಾಂಧವ್ಯವನ್ನು ಹಂಚಿಕೊಂಡಿದ್ದಾಗಿ ಅವರು ತಿಳಿಸಿದರು.
ಬಹುತೇಕ ಇಲಾಖೆಯ ಸರಕಾರಿ ನೌಕರರ ವೃತ್ತಿ ಜೀವನ ಸದಾ ಒತ್ತಡದಲ್ಲಿ ಕೆಲಸ ಮಾಡುವ ಸನ್ನಿವೇಶವಿರುತ್ತದೆ, ಬರುವ ಸಮಸ್ಯೆಗಳನ್ನು ಎದುರಿಸುವ ಪ್ರಯತ್ನಶೀಲತೆಯನ್ನು ರೂಢಿಸಿಕೊಳ್ಳಬೇಕು, ಶಿಸ್ತು, ಶ್ರದ್ಧೆ, ಸಮಯಪಾಲನೆಗೆ ಹೆಚ್ಚು ಒತ್ತು ನೀಡಬೇಕು, ಸೇವೆ ಮಾಡುವ ದೃಢನಿರ್ಧಾರ ಇದ್ದಾಗ ಅಧಿಕಾರವೇ ಮನುಷ್ಯನನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ, ಏನೇ ಪದವಿ, ಅಧಿಕಾರಗಳು ದೊರೆತರೂ, ಎಷ್ಟೇ ವಿದ್ಯಾವಂತರಾದರೂ ಸಹ ವಿಶ್ವ ಮಾನವತೆಯ ತತ್ವಗಳನ್ನು ರೂಢಿಸಿಕೊಳ್ಳದೇ ಹೋದರೆ ಅವೆಲ್ಲಾ ಪರಿಪೂರ್ಣವಾಗುವುದಿಲ್ಲ ಎಂದು ಲಕ್ಷ್ಮಮ್ಮ ಅಭಿಪ್ರಾಯಪಟ್ಟರು.
ಸರಕಾರಿ ನೌಕರರು ದೈಹಿಕವಾಗಿ ಆರೋಗ್ಯವಂತರು ಆದಾಗ ಮಾತ್ರ ದೇಶದ ಅಭಿವೃದ್ಧಿಯೂ ಶರವೇಗದಲ್ಲಿ ಸಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿ ಬದುಕಿನ ಬಗೆಗಿನ ಬದ್ಧತೆಯನ್ನು ಕುರಿತು ಸಿಬ್ಬಂದಿಗಳಿಗೆ ಮನಮುಟ್ಟವಂತೆ ಹೇಳಿದರು. ಸಾರ್ಥಕ ಸವೇಗೆ ಸಹಕರಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಕೃತಜ್ಞಳಾಗಿರುವುದಾಗಿ ಅವರು ತಿಳಿಸಿದರು.
ಚನ್ನಪಟ್ಟಣ ಉಪ ವಿಭಾಗದ ಸಹಾಯಕ ಅಧೀಕ್ಷಕ ಹರ್ಷ ಮಾತನಾಡಿ ಪ್ರತಿಯೊಬ್ಬ ಸರಕಾರಿ ನೌಕರನಿಗೂ ನಿವೃತ್ತಿ ಎಂಬುದು ಕಡ್ಡಾಯವಾಗಿದೆ, ಆದರೆ ಸೇವಾ ಅವಧಿಯಲ್ಲಿ ಮಾಡಿದ ಒಳ್ಳೆಯ ಕೆಲಸಗಳು ನಮ್ಮ ನಿವೃತ್ತಿ ಜೀವನದಲ್ಲಿ ಅತ್ಮ ತೃಪ್ತಿಯನ್ನು ಕೊಡುವ ಜತೆಗೆ ಸದಾ ನೆನಪಿನಲ್ಲಿ ಉಳಿಯುತ್ತವೆ, ಹೀಗಾಗಿ ಸರಕಾರಿ ನೌಕರರು ಲಕ್ಷ್ಮಮ್ಮನವರಂತೆ ಮಾದರಿಯಾಗಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ಅಂಚೆ ಸಹಾಯಕ ಬಿ.ಎಂ.ಕುಮಾರ್ ಮಾತನಾಡಿ ಬಿಡದಿಯಲ್ಲಿ ಹಲವಾರು ಆರ್ಡಿ ಡ್ರೈವ್ಗಳನ್ನು ಮಾಡುವ ಮೂಲಕ ಸುಮಾರು 2.500 ಖಾತೆಗಳನ್ನು ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ಲಕ್ಷ್ಮಮ್ಮನವರಿಗೆ ಸಲ್ಲುತ್ತದೆ, ವೃತ್ತ ಜೀವನದಲ್ಲಿ ಯಾವುದೇ ಒಂದು ಕಪ್ಪುಚುಕ್ಕಿ ಇಲ್ಲದೆ ಸೇವೆ ಮಾಡಿ ನಿವೃತ್ತಿಯಾದ ಅಧಿಕಾರಿ ಅಥವಾ ನೌಕರಿನಿಗೆ ಸಿಗುವ ತೃಪ್ತಿ ಎಲ್ಲಾ ಗೌರವಗಳಿಗೂ ಮಿಗಿಲಾಗಿರುತ್ತದೆ, ಇದಕ್ಕೆ ಲಕ್ಷ್ಮಮ್ಮನವರು 39 ವರ್ಷಗಳ ಸೇವೆ ಅಧೀನ ಸಿಬ್ಬಂದಿಗೆ ಮಾರ್ಗದರ್ಶನವಾಗಿದೆ ಎಂದು ಬಣ್ಣಿಸಿದರು.
ಇದೇ ಸಂದರ್ಭದಲ್ಲಿ ಸೇವೆಯಿಂದ ನಿವೃತ್ತಿಯಾದ ಲಕ್ಷ್ಮಮ್ಮನವರನ್ನು ಅಧಿಕಾರಿಗಳು ಮತ್ತು ಕಚೇರಿ ಸಿಬ್ಬಂದಿ ವರ್ಗ ಹಾಗೂ ಬಿಡದಿಯ ಕೆಲವು ನಾಗರೀಕರು ಅಭಿನಂದಿಸಿ ಬೀಳ್ಕೊಟ್ಟರು.
ಕಾರ್ಯಕ್ರಮದಲ್ಲಿ ಚನ್ನಪಟ್ಟಣ ಅಂಚೆ ಸಹಾಯಕ ಅಧಿಕಾರಿ ಚಿಕ್ಕಸಿದ್ಧೇಗೌಡ, ರಾಮನಗರ ಅಂಚೆ ಸಹಾಯಕ ಅಧಿಕಾರಿ ಎನ್.ಎಲ್.ಶಿವಲಿಂಗಯ್ಯ, ಬಿಡದಿ ಅಂಚೆ ಸಹಾಯಕ ಅಧಿಕಾರಿ ಗಿರೀಶ್, ಸಿಬ್ಬಂದಿಗಳಾದ ರಮೇಶ್ಕುಮಾರ್, ವೆಂಕಟೇಶ್, ನಾಗರಾಜು, ಕೃಷ್ಣಯ್ಯ, ಲಕ್ಷ್ಮಣಕುಮಾರ್(ಬಾಬು), ನಿವೃತ್ತ ಪೋಸ್ಟ್ ಮಾಸ್ಟರ್ ಗಂಗಯ್ಯ ಮುಂತಾದವರು ಉಪಸ್ಥಿತರಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು