Tel: 7676775624 | Mail: info@yellowandred.in

Language: EN KAN

    Follow us :


ನೆನೆಗುದಿಗೆ ಬಿದ್ದಿದ್ದ ಕರಿಕಲ್ ದೊಡ್ಡಿ ಪರಿಶಿಷ್ಟ ಜಾತಿ ಯ ಸ್ಮಶಾನಕ್ಕೆ ಮುಕ್ತಿ ದೊರಕಿಸಿದ ತಹಶಿಲ್ದಾರ್

Posted date: 04 Mar, 2020

Powered by:     Yellow and Red

ನೆನೆಗುದಿಗೆ ಬಿದ್ದಿದ್ದ ಕರಿಕಲ್ ದೊಡ್ಡಿ ಪರಿಶಿಷ್ಟ ಜಾತಿ ಯ ಸ್ಮಶಾನಕ್ಕೆ ಮುಕ್ತಿ ದೊರಕಿಸಿದ ತಹಶಿಲ್ದಾರ್

ಚನ್ನಪಟ್ಟಣ: ತಾಲ್ಲೂಕಿನ ವಂದಾರಗುಪ್ಪೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿಕಲ್ ದೊಡ್ಡಿ ಗ್ರಾಮದ ಪರಿಶಿಷ್ಟ ವರ್ಗದ ಜನರು ಮತ್ತು ಪೋಲಿಸ್ ತರಬೇತಿ ಶಾಲೆಗೂ ಸ್ಮಶಾನ ಭೂಮಿಗಾಗಿ ನಡೆಯುತ್ತಿದ್ದ ವಿವಾದವನ್ನು ತಹಶಿಲ್ದಾರ್ ಸುದರ್ಶನ್ ರವರು ಇಂದು ತಡೆಗೋಡೆ ಒಡೆದು ಸ್ಮಶಾನಕ್ಕೆ ದಾರಿ ಮಾಡಿಕೊಡುವ ಮೂಲಕ ಬಗೆಹರಿಸಿದರು.


ಪರಿಶಿಷ್ಟ ಪಂಗಡದವರಿಗೆ ಗ್ರಾಮದ ಬಳಿ ಒಂದು ಎಕರೆ ಭೂಮಿಯನ್ನು ಸ್ಮಶಾನಕ್ಕೆ ನೀಡಬೇಕೆಂದು ಕಾನೂನು ಇದ್ದು, ಕಂದಾಯ ಇಲಾಖೆಯ ವತಿಯಿಂದ ಹೊನ್ನಗಾನಹಳ್ಳಿ ಸರ್ವೇ ನಂ ೪೬ ರ ಗೋಮಾಳದ ಒಂದು ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿತ್ತು. ಸದ್ಯ ಈ ಭೂಮಿಯು ಪೋಲಿಸ್ ತರಬೇತಿ ಶಾಲೆಯ ಒಳಗೆ ಇದ್ದುದರಿಂದ ಪಿಟಿಎಸ್ ನವರು ತಡೆಗೋಡೆ ನಿರ್ಮಿಸಿಕೊಂಡಿದ್ದು ಈ ಭೂಮಿ ಪಿಟಿಎಸ್ ಗೆ ಸೇರಿದ್ದರಿಂದ ಸ್ಮಶಾನಕ್ಕೆ ಬೇರೆ ಜಾಗ ನೀಡುವಂತೆ ನಾವು ಈ‌ ಜಾಗ ನೀಡುವುದಿಲ್ಲ ಎಂದು ಪಟ್ಟುಹಿಡಿದಿದ್ದರು. ಗ್ರಾಮದ ಯಾರೇ ನಿಧನರಾದಗಲೂ ಸಹ ತಾಲ್ಲೂಕು ಕಛೇರಿ, ಪಿಟಿಎಸ್ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ಏರ್ಪಟ್ಟು ಸಂಧಾನದ ನಂತರ ತಣ್ಣಗಾಗುತ್ತಿತ್ತು. ಕೆಲವು ಬಾರಿ ಗ್ರಾಮಸ್ಥರು ಶವವನ್ನು ತಂದು ತಾಲ್ಲೂಕು ಕಛೇರಿಯ ಮುಂದೆ ಇಟ್ಟು ಪ್ರತಿಭಟಿಸಿದ್ದರು.


ಇದನ್ನು ಮನಗಂಡ ತಹಶಿಲ್ದಾರ್ ಸುದರ್ಶನ್ ರವರು ಪೋಲಿಸ್ ತರಬೇತಿ ಶಾಲೆಯ ಪ್ರಾಂಶುಪಾಲರು, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಯ ಜೊತೆ ಸಮಾಲೋಚಿಸಿ ಈ ಹಿಂದೆ ಗುರುತಿಸಿದ್ದ ಭೂಮಿಗೆ ತೆರಳಲು ಅಡ್ಡವಾಗಿದ್ದ ತಡೆಗೋಡೆಯನ್ನು ತೆರವುಗೊಳಿಸಿ ಗೇಟನ್ನು ಅಳವಡಿಸಿ ಶೀಘ್ರವಾಗಿ ಸ್ಮಶಾನದ ಜಾಗಕ್ಕೆ ತಡೆಗೋಡೆ ನಿರ್ಮಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಪೋಲಿಸ್ ವೃತ್ತ ನಿರೀಕ್ಷಕ ವಸಂತ್, ಇನ್ಸ್‌ಪೆಕ್ಟರ್ ಶಿವಕುಮಾರ್, ಕಂದಾಯ ನಿರೀಕ್ಷಕ ಕಾಂತರಾಜು, ವಿಎ ಮಂಜುನಾಥ, ಸಮಾಜ ಕಲ್ಯಾಣ ಇಲಾಖೆ ಯ ವೇದಮೂರ್ತಿ, ಮುಖಂಡ ವಿ ಬಿ ಚಂದ್ರು, ವಿಶ್ವೇಶ್ವರಯ್ಯ ದಲಿತ ಮುಖಂಡರಾದ ಶ್ರೀನಿವಾಸಮೂರ್ತಿ, ವೆಂಕಟಗಿರಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑