ಸಿ.ಎಸ್.ಆರ್ ಅನುದಾನವನ್ನು ಜಿಲ್ಲೆಯ ಕಾರ್ಯಕ್ರಮಕ್ಕೆ ಉಪಯುಕ್ತವಾಗುವ ರೀತಿ ಯೋಜನೆ ರೂಪಿಸಿ: ಅರ್ಚನಾ ಎಂ.ಎಸ್.
ರಾಮನಗರ ಜಿಲ್ಲೆಗೆ ಅವಶ್ಯಕವಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿ ಕೈಗಾರಿಕೆಗಳಿಂದ ನೀಡಲಾಗುವ ಸಿಎಸ್ಆರ್ ಅನುದಾನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟಯೋಟ ಕಿರ್ಲೋಸ್ಕರ್ ಆಟೋ ಪಾರ್ಟ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಿ.ಎಸ್.ಆರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕೆಗಳು ತಮ್ಮ ೫ ರಿಂದ ೧೦ ಕಿ.ಮೀ ವ್ಯಾಪ್ತಿಯಲ್ಲಿ ಬರುವ ಪ್ರದೇಶವನ್ನು ಗಮನದಲ್ಲಿಟ್ಟಿಕೊಂಡು ಸಿಎಸ್ಆರ್ ಅನುದಾನದಡಿ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ. ಇದನ್ನು ಜಿಲ್ಲೆಯಾದ್ಯಂತ ವಿಸ್ತರಿಸಲು ಯೋಜನೆ ರೂಪಿಸಲಾಗುವುದು ಎಂದರು.
ಸರ್ಕಾರದಿAದ ಹಲವಾರು ಜನಪರ ಯೋಜನೆಗಳು ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತದೆ. ಅದೇ ಯೋಜನೆಗಳು ಪುನಃ ಸಿಎಸ್ಆರ್ ಅನುದಾನದಲ್ಲೂ ಪುನರಾವರ್ತನೆಗೊಂಡರೆ ಅನುದಾನ ಉಪಯುಕ್ತವಾಗುವುದಿಲ್ಲ. ಆದ್ದರಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಒಟ್ಟಿಗೆ ಸೇರಿ ಸಿ.ಎಸ್.ಆರ್ ಅನುದಾನದಿಂದ ಕೈಗೊಳ್ಳಬಹುದಾದ ಕೆಲಸಗಳ ಬಗ್ಗೆ ಆರೋಗ್ಯ, ಶಿಕ್ಷಣ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳಿಂದ ಬೇಡಿಕೆಗಳನ್ನು ಪಡೆದು ಕ್ರೂಡೀಕರಿಸಿ ಕೈಗಾರಿಕೆಗಳಿಗೆ ಜಿಲ್ಲೆಗೆ ಬೇಕಿರುವ ಅಗತ್ಯತೆಯ ಬಗ್ಗೆ ತಿಳಿಸಲಿದೆ. ಇದರಿಂದ ಕೈಗಾರಿಕೆಗಳು ಸಹ ಕೆಲಸಗಳನ್ನು ಹಂಚಿಕೆ ಮಾಡಿಕೊಂಡು ಪುನರಾವರ್ತನೆಯಾಗದಂತೆ ಕೆಲಸ ಕೈಗೊಳ್ಳಬಹುದು ಎಂದರು.
ಸಿ.ಎಸ್.ಆರ್ ಅನುದಾನದಡಿ ಶಾಲಾ ಕಟ್ಟಡ ಕಾಮಗಾರಿಗಳು, ಕುಡಿಯುವ ನೀರಿನ ಘಟಕಗಳು, ಶೌಚಾಲಯಗಳು, ಆರೋಗ್ಯಕ್ಕೆ ಸಂಬAಧಿಸಿದAತೆ ಕ್ಯಾಂಪ್ಗಳು ಸೇರಿದಂತೆ ಹಲವಾರು ಕೆಲಸಗಳನ್ನು ಮಾಡಲಾಗಿದೆ. ಇವುಗಳ ಉಪಯುಕ್ತತೆಯ ಬಗ್ಗೆ ಸರ್ವೆ ನಡೆಸಿ. ಇದರಿಂದ ಕೈಗಾರಿಕೆಗಳಿಗೂ ಸಹ ಅವರು ನೀಡಿದ ಅನುದಾನದ ಸದ್ಭಳಕೆಯ ಬಗ್ಗೆ ಮಾಹಿತಿ ಸಿಗುತ್ತದೆ ಎಂದರು.
ಸಿಎಸ್ಆರ್ ಅನುದಾನದಡಿ ಶಿಕ್ಷಣ, ಆರೋಗ್ಯ ಹಾಗೂ ಪರಿಸರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಬಾರಿ ಇದರ ಜೊತೆಗೆ ಜಿಲ್ಲೆಯ ೪ ತಾಲ್ಲೂಕುಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ, ಸರ್ಕಾರಿ ಶಾಲೆಯ ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತಿಸಲಾಗುತ್ತಿದೆ ಎಂದರು.
ಬಿಡದಿ ಕೈಗಾರಿಕಾ ಸಂಘದ ಅಧ್ಯಕ್ಷರಾದ ರಾಜೇಂದ್ರ ಹೆಗ್ಡೆ ಅವರು ಮಾತನಾಡಿ ಬಿಡದಿ ಕೈಗಾರಿಕಾ ಸಂಘದಿAದಲೂ ಸಹ ಸಿಎಸ್ಆರ್ ಅನುದಾನದಿಂದ ಯೋಜನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಲು ಸಿಂಗಲ್ ವಿಂಡೋ ಸಿಸ್ಟಂನ್ನು ಅಳವಡಿಸಿಕೊಳ್ಳಲಾಗಿದೆ. ಈ ಬಾರಿ ಜಿಲ್ಲಾಡಳಿತ ಕೂಡ ಎಲ್ಲಾ ಇಲಾಖೆಗಳ ಬೇಡಿಕೆ ಪಡೆದು ಯೋಜನೆಯ ಪಟ್ಟಿಯನ್ನು ಸಲ್ಲಿಸುತ್ತಿರುವುದು ಉತ್ತಮವಾದ ಕೆಲಸ. ಪ್ರತಿ ವರ್ಷ ಏಪ್ರಿಲ್ನಲ್ಲಿ ಕೈಗಾರಿಕೆಗಳಿಂದ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುತ್ತದೆ. ಮಾರ್ಚ್ ಮಾಹೆಯಲ್ಲೇ ವಾರ್ಷಿಕ ಬೇಡಿಕೆಯನ್ನು ನೀಡಿದರೆ ಕಂಪನಿಯ ಬೋರ್ಡ್ಗಳಿಗೆ ಸಲ್ಲಿಸಿ ಅನುಮತಿಯನ್ನು ಪಡೆದುಕೊಳ್ಳಬಹುದು ಎಂದರು.
ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಸಿ.ಎಸ್.ಆರ್. ಸಭೆ ನಡೆಸುವುದು ಉತ್ತಮ. ಸರ್ಕಾರದಿಂದ ಕೂಡ ಹಲವಾರು ಯೋಜನೆಗಳಿಗೆ ಅನುದಾನವಿರುತ್ತದೆ. ಇದರ ಬಗ್ಗೆ ಒಂದು ದಿನ ಕಾರ್ಯಕ್ರಮವನ್ನು ಆಯೋಜಿಸಿ ಇಲಾಖೆವಾರು ಮಾಹಿತಿ ನೀಡಿದರೆ ಅನುದಾನ ಇಲ್ಲದ ಕಡೆ ಸಿಎಸ್ಆರ್ ಅನುದಾನವನ್ನು ಬಳಸಿಕೊಳ್ಳಬಹುದು ಎಂದರು.
ಸಭೆಯಲ್ಲಿ ಬಾಷ್ ಇಂಡಿಯಾ ಪೌಂಡೇಶನ್, ಟಯೋಟಾ ಕಿರ್ಲೋಸ್ಕರ್ ಮೋಟರ್, ಟಯೋಟಾ ಕಿರ್ಲೋಸ್ಕರ್ ಅಟೋ ಪಾಟ್ಸ್, ಟಯೋಡಾ ಗೋಸೈ ಸೌತ್ ಇಂಡಿಯಾ, ಹಿಂದೂಸ್ತಾನ ಕೋಕೋ ಕೋಲಾ, ಇಲಿಯೋಟ್, ಇಬರಾ ಟರ್ಬೊಮೆಷಿನರಿ, ಗೇಯಲ್ ಇಂಡಿಯಾ ಲಿಮಿಟೆಡ್ ಸಂಸ್ಥೆಗಳು ಸಿ.ಎಸ್.ಆರ್ ಅನುದಾನದಡಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಬಿಡದಿ ಕೈಗಾರಿಕಾ ಸಂಘದ ಕಾರ್ಯದರ್ಶಿ ನರಸಿಂಹ ಭಟ್, ಬಾಷ್ ಇಂಡಿಯಾ ಪೌಂಡೇಶನ್ ಸಂಸ್ಥೆಯ ಕಾಮತ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಲ್.ನಾಗರಾಜು, ಉಪನಿರ್ದೇಶಕ ಶಿವಲಿಂಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿ.ವಿ. ರಾಮನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು