Tel: 7676775624 | Mail: info@yellowandred.in

Language: EN KAN

    Follow us :


ಇಗ್ಗಲೂರು ಶಾಲೆಯನ್ನು ಪ್ರಶಂಸಿಸಿ ಹತ್ತನೇ ತರಗತಿಯ ಮಕ್ಕಳಿಗೆ ಶುಭಾಶಯ ತಿಳಿಸಿದ ಜಿಲ್ಲಾಧಿಕಾರಿ

Posted date: 11 Mar, 2020

Powered by:     Yellow and Red

ಇಗ್ಗಲೂರು ಶಾಲೆಯನ್ನು ಪ್ರಶಂಸಿಸಿ ಹತ್ತನೇ ತರಗತಿಯ ಮಕ್ಕಳಿಗೆ ಶುಭಾಶಯ ತಿಳಿಸಿದ ಜಿಲ್ಲಾಧಿಕಾರಿ

ಚನ್ನಪಟ್ಟಣ:ಎಸ್.ಎಸ್.ಎಲ್ .ಸಿ ಮಕ್ಕಳಿಗೆ ಆಲ್ ದ ಬೆಸ್ಟ್ ಹೇಳಿದ ಜಿಲ್ಲಾಧಿಕಾರಿ; ಚನ್ನಪಟ್ಟಣ ತಾಲ್ಲೂಕಿನ ವಿರೂಪಾಕ್ಷಿಪುರ ಹೋಬಳಿಯ ಇಗ್ಗಲೂರು ಗ್ರಾಮ ಪಂಚಾಯ್ತಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಜನಸಂಪರ್ಕ ಸಭೆ ಮುಗಿದ ನಂತರ ಇಗ್ಗಲೂರು ಪ್ರೌಢಶಾಲೆಗೆ ಭೇಟಿ ನೀಡಿ ಹತ್ತನೇ ತರಗತಿಯ ಮಕ್ಕಳೊಂದಿಗೆ ಪರೀಕ್ಷಾ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ಚರ್ಚಿಸಿದರು.

ಮಕ್ಕಳು ಸಿಲಬಸ್ ಪೂರ್ಣವಾಗಿದ್ದು, ಮಾದರಿ ಪ್ರಶ್ನಪತ್ರಿಕೆಗಳನ್ನು ಪಡೆದು ಅಭ್ಯಾಸ ನಡೆಸುತ್ತಿರುವುದಾಗಿ ತಿಳಿಸಿದರು. ಮಕ್ಕಳನ್ನು ವಿಷಯದ ಬಗ್ಗೆ ವಿಚಾರಿಸಿ ನಿಮಗೆ ಯಾವ ವಿಷಯ ಕಠಿಣವಾಗುತ್ತಿದೆ ? ಯಾವ ವಿಷಯ ಸುಲಭವಾಗಿ ಕಲಿಯಲು ಸಾಧ್ಯ ಎಂದು ಪ್ರಶ್ನಿಸಿ ತಿಳಿದುಕೊಂಡರು. ನಂತರ ಉತ್ತಮ ಫಲಿತಾಂಶದೊಂದಿಗೆ ಎಲ್ಲಾ ಮಕ್ಕಳು ಉತ್ತೀರ್ಣರಾಗಿ, ಆಲ್ ದ ಬೆಸ್ಟ್ ಎಂದು ಹೇಳಿ ಶುಭ ಹಾರೈಸಿದರು.


*ಬಿಸಿ ಊಟದ ಬಗ್ಗೆ ವಿಚಾರಿಸಿದ ಅಪರ ಜಿಲ್ಲಾಧಿಕಾರಿ*


ಜನಸಂಪರ್ಕ ಸಭೆ ಮುಗಿದ ನಂತರ ಇಗ್ಗಲೂರು ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿ ಊಟದ ಬಗ್ಗೆ ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್ ಅವರು ವಿಚಾರಿಸಿದರು‌.

ಮಕ್ಕಳು ರುಚಿ ಹಾಗೂ ಶುಚಿಯಾದ ಊಟ ದೊರಕುತ್ತಿದೆ. ಮಕ್ಕಳು ಶಾಲೆಯಲ್ಲಿ ತಮ್ಮ ಹೆಸರಿನಲ್ಲಿ ಒಂದೊಂದು ಗಿಡ ಪೋಷಿಸಿದ್ದು, ಇದನ್ನು ಶಾಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ತಮ್ನ ಕಿರಿಯ ತರಗತಿಯವರಿಗೆ ಹಸ್ತಾಂತರ ಮಾಡುತ್ತೇವೆ ಎಂದರು.

ಮಕ್ಕಳು ಅಪರ ಜಿಲ್ಲಾಧಿಕಾರಿಗಳನ್ನು ಸರ್ ತಮ್ಮ ಪರಿಚಯ ಮಾಡಿಕೊಡಿ ಎಂದರು. ಅಪರ ಜಿಲ್ಲಾಧಿಕಾರಿಗಳು ಮಕ್ಕಳೊಂದಿಗೆ ಬೆರತು ತಮ್ಮ ಪರಿಚಯ ಹಾಗೂ ಕೆಲಸದ ವಿವರವನ್ನು ಸಹ ವಿವರಿಸಿದರು.


*ಶಾಲೆಯ ಕೈತೋಟದ ಪ್ರಶಂಸಿದ ಜಿ.ಪಂ.ಸಿ.ಇ.ಒ*


ಶಾಲಾ ಆವರಣದಲ್ಲಿ ಬೆಳೆಸಿರುವ ಕೈತೋಟದ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಇಕ್ರಂ ರವರು ಪ್ರಶಂಸೆ ವ್ಯಕ್ತ ಪಡಿಸಿದರು.

ಶಾಲಾ ಮಕ್ಕಳು ಕೈತೊಳೆಯುವ ನೀರನ್ನು ಸಂಗ್ರಹಿಸಿ ಮರಳು, ಇದ್ದಿಲು ಬಳಸಿ ಶುದ್ಧೀಕರಸಿ ಹನಿ ನೀರವಾರಿ ಪದ್ಧತಿ ಯನ್ನು ಅನುಸರಿಸಿ ಕೈತೋಟಕ್ಕೆ ನೀಡಲಾಗುತ್ತಿದೆ. ಇದನ್ನು ಎಲ್ಲಾ ಶಾಲೆಗಳಲ್ಲೂ ಅನುಸರಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


ನಂತರ ಅಧಿಕಾರಿಗಳು ಮಕ್ಕಳೊಂದಿಗೆ ನೆಲದಲ್ಲಿ ಕುಳಿತು ಬಿಸಿಯೂಟ ಸವಿದರು.

ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ತಮ್ಮ ಶಾಲೆಯ ಆವರಣದಲ್ಲಿ ಬೆಳೆದ ಔಷಧೀಯ ಗುಣಗುಳುಳ್ಳ ಸಸ್ಯಗಳು, ಬಿಸಿಯೂಟಕ್ಕೆ ಬೇಕಾದ ಸಸ್ಯಗಳು, ಬೃಹದಾಕಾರವಾಗಿ ಬೆಳೆಯುವರಗಳು ಸೇರಿದಂತೆ ವಿವಿಧ ರೀತಿಯ ಫಲಪುಷ್ಪಗಳ ಗಿಡಗಳನ್ನು ಅಧಿಕಾರಿಗಳಿಗೆ ಪರಿಚಯ ಮಾಡಿಕೊಟ್ಟರು. ಶಾಲೆಯ ಕೈತೋಟಕ್ಕೆ ಬೇಕಾದ ಗೊಬ್ಬರವನ್ನು ತಾವೇ ತಯಾರಿಸುವುದನ್ನು ತೋರಿಸಿ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರವಾದರು.


ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಎಸ್ ಡಿ ಎಂ ಸಿ ಸದಸ್ಯರು ಮತ್ತು ಶಾಲಾ ಶಿಕ್ಷಕರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑