Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ ವೈರಸ್ ಗೆ ಶುಚಿತ್ವವೇ ಮೊದಲ ಮದ್ದು ಡಾ ಲೋಕಾನಂದ

Posted date: 14 Mar, 2020

Powered by:     Yellow and Red

ಕೊರೊನಾ ವೈರಸ್ ಗೆ ಶುಚಿತ್ವವೇ ಮೊದಲ ಮದ್ದು ಡಾ ಲೋಕಾನಂದ

ಚನ್ನಪಟ್ಟಣ: ಪ್ರಪಂಚದ ಅನೇಕ ದೇಶಗಳಲ್ಲಿ ತಲ್ಲಣ ಮೂಡಿಸಿ ದೇಶಕ್ಕೂ ಕಾಲಿಟ್ಟಿರುವ *ಕೊರೊನಾ ವೈರಸ್* ಗೆ ಶುಚಿತ್ವವೇ ಮೊದಲ ಮದ್ದು. ನಾವು, ನಮ್ಮವರು, ನಮ್ಮನೆ ಹಾಗೂ ಸುತ್ತಲಿನ ಪರಿಸರವನ್ನು ನಮ್ಮದೆಂದು ತಿಳಿದು ಶುಚಿತ್ವಕ್ಕೆ‌ ಮಹತ್ವ ನೀಡಿದರೇ ಯಾವ ವೈರಸ್ ಸಹ ಮನುಷ್ಯನ ದೇಹವನ್ನು ಹೊಕ್ಕುವುದಿಲ್ಲ ಎಂದು ನಗರದ ಗುರುವಪ್ಪ ಆಸ್ಪತ್ರೆಯ ವೈದ್ಯ ಲೋಕಾನಂದ ತಿಳಿಸಿದರು.

ಅವರು ಇಂದು ಬೆಳಿಗ್ಗೆ ಗುರುವಪ್ಪ ವೃತ್ತದಲ್ಲಿ ತಮ್ಮ ತಂದೆ ದಿವಂಗತ ಡಾ ಗುರುವಪ್ಪ ನವರ ೮೫ ನೇ ಜನ್ಮ ದಿನಾಚರಣೆ ಪ್ರಯುಕ್ತ ಕೊರೊನಾ ವೈರಸ್ ನ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ಪಾಲ್ಗೊಂಡು ಈ ವಿಷಯ ತಿಳಿಸಿದರು.


ಕೊರೊನಾ ವೈರಸ್‌ ಅಷ್ಟೇ ಅಲ್ಲದೇ ಮನುಷ್ಯನಿಗೆ ಬರುವ ಬಹುತೇಕ ರೋಗಗಳು ಶುಚಿತ್ವದ ಕೊರತೆಯಿಂದಲೇ ಬರುತ್ತವೆ. ಹಿಂದಿನ ಕಾಲದ ಮಲೇರಿಯಾ, ಪ್ಲೇಗ್ ನಂತಹ ಕಾಯಿಲೆಗಳು ಎಲ್ಲೆಂದರಲ್ಲಿ ನಿಂತ ನೀರಿನಿಂದ ಉತ್ಪತ್ತಿಯಾದ ಸೊಳ್ಳೆಗಳಿಂದ, ಧವಸಧಾನ್ಯಗಳಿಗಾಗಿ ಮುತ್ತಿಕ್ಕಿ ಪಿಕ್ಕೆ ಉದುರಿಸಿ ಹೋಗುತ್ತಿದ್ದ ಇಲಿಗಳಿಂದ ಬಂದ ಕಾಯಿಲೆಗಳೇ ಆಗಿವೆ.

ಈಗ ಹರಡಲು ಪ್ರಯತ್ನಿಸುತ್ತಿರುವ ಕೊರೊನಾ ವೈರಸ್ ರೋಗದ ಬಗ್ಗೆ ಸರ್ಕಾರವು ಮುನ್ನೆಚ್ಚರಿಕೆಯ ಕ್ರಮ ಇಟ್ಟಿರುವುದು ಶ್ಲಾಘನೀಯವಾಗಿದ್ದು, ಎಲ್ಲಾ ಆರೋಗ್ಯವಂತರೂ ಸಹ ಕನಿಷ್ಠ ಎರಡು ಗಂಟೆಗಳಿಗೊಮ್ಮೆ ತಮ್ಮ ಕೈಗಳನ್ನು ಶುಚಿಮಾಡಿಕೊಳ್ಳುವುದರ ಜೊತೆಗೆ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಿ ಎಂದು ಸಲಹೆ ನೀಡಿದರು.


ಸಾಹಿತಿ ವಿಜಯ್ ರಾಂಪುರ ಮಾತನಾಡಿ ಡಾ ಗುರುವಪ್ಪ ತಾಲ್ಲೂಕಿನಲ್ಲಿಯೇ ಒಂದು ದೊಡ್ಡ ಹೆಸರು, ಬಡತನದ ಬೇಗೆಯಲ್ಲಿ ಜನ್ಮತಾಳಿದ ಅವರು ತಂದೆಗಿಂತ ತಾಯಿಯನ್ನು ಹೆಚ್ಚು ಪ್ರೀತಿಸಿದವರು. ಉನ್ನತ ಮಟ್ಟದ ವೈದ್ಯಕೀಯ ಪದವಿಯನ್ನು ಪಡೆದ ಅವರು ಅನೇಕ ಕಡೆ ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕವೂ ತಮ್ಮ ಸೇವೆಯನ್ನು ಮುಂದುವರೆಸಿದ್ದಲ್ಲದೆ ಅನೇಕ ಬಡ ರೋಗಿಗಳಿಗೆ ಉಚಿತ ಔಷಧೋಪಚಾರ ನೀಡಿ, ಪ್ರಯಾಣಕ್ಕೂ ಹಣ ಕೊಟ್ಟು ಕಳುಹಿಸಿದಂತಹ ಅನೇಕ ಉದಾಹರಣೆಗಳು ಇವೆ ಎಂದು ಸ್ಮರಿಸಿದರು.


ಡಾ ಗುರುವಪ್ಪ ನವರ ಅಳಿಯ ಹಿರಿಯ ಫಾರ್ಮಾಸಿಸ್ಟ್ ವೇದಮೂರ್ತಿ ಮಾತನಾಡಿ ಸದ್ಯ ನಮ್ಮ ತಾಲ್ಲೂಕಿನಲ್ಲಿ ಎಲ್ಲಿಯೂ ಕೊರೊನಾ ಕಾಣಿಸಿಕೊಂಡಿಲ್ಲ. ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಯಾರಿಗಾದರೂ‌ ಸತತ ಕೆಮ್ಮು ಹಾಗೂ ಜ್ವರ ಕಾಣಿಸಿಕೊಂಡರೆ ತಕ್ಷಣ ಆಸ್ಪತ್ರೆಗೆ ಧಾವಿಸಿ ಪರೀಕ್ಷಿಷಿಕೊಂಡು ದೃಢಪಡಿಸಿಕೊಳ್ಳಿ ಎಂದು ತಿಳಿಸಿದರು.


ಇದೇ ವೇಳೆ ಡಾ ಲೋಕಾನಂದರವರು ಗುರುವಪ್ಪ ವೃತ್ತ, ಚಚ್೯ ರಸ್ತೆ, ಸೆಂಟ್ ಆನ್ಸ್ ಶಾಲೆ ರಸ್ತೆ ಯ ಇಕ್ಕೆಲಗಳಿಗೆ ಬ್ಲೀಚಿಂಗ್ ಪೌಡರ್ ಸಿಂಪಡಿಸಿದರು. ನೆರೆದಿದ್ದವರೆಲ್ಲರಿಗೂ ಉಚಿತವಾಗಿ ಸೋಪು (ಸಾಬೂನು) ಮತ್ತು ಮಾಸ್ಕ್ ಗಳನ್ನು ವಿತರಿಸಿದರು.


ಜನ್ಮದಿನಾಚರಣೆಯಲ್ಲಿ ಗುರುವಪ್ಪನವರ ಕುಟುಂಬ ಸದಸ್ಯರು, ದಲಿತ ಮುಖಂಡರಾದ ಅಕ್ಕೂರು ಶೇಖರ್, ವೆಂಕಟೇಶ್ (ಶೇಟು) ಚಂದ್ರು, ನೀಲಸಂದ್ರ ಸಿದ್ದರಾಮು, ನೀಲಸಂದ್ರ ಬಸವರಾಜು, ಮತ್ತೀಕೆರೆ ಹನುಮಂತ, ಕೋಟೆ ಶ್ರೀನಿವಾಸ ಮತ್ತು ಮಹೇಂದ್ರ, ವಕೀಲ ಕುಮಾರ್, ಪೋಲಿಸ್ ವೆಂಕಟೇಶ್, ಚೌಪು ಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑