Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕಿನ ಎಲ್ಲಾ ಸಂಘಗಳು ಒಗ್ಗೂಡಿ ಹೋರಾಟ ನಡೆಸಿದರೆ ಫಲಪ್ರದವಾಗಲಿದೆ, ಹಿರಿಯ ನಾಗರೀಕ ಎಂ ಸಿ ಮಲ್ಲಯ್ಯ

Posted date: 16 Mar, 2020

Powered by:     Yellow and Red

ತಾಲ್ಲೂಕಿನ ಎಲ್ಲಾ ಸಂಘಗಳು ಒಗ್ಗೂಡಿ ಹೋರಾಟ ನಡೆಸಿದರೆ ಫಲಪ್ರದವಾಗಲಿದೆ, ಹಿರಿಯ ನಾಗರೀಕ ಎಂ ಸಿ ಮಲ್ಲಯ್ಯ

ಚನ್ನಪಟ್ಟಣ: ಹಿರಿಯ ನಾಗರೀಕರ ಆರೋಗ್ಯ ದೃಷ್ಟಿಯಿಂದ ಹಾಗೂ ವಯಸ್ಸಿಗೆ ಅನುಗುಣವಾಗಿ ಕೆಲವು ಆಟಗಳನ್ನು ಏರ್ಪಡಿಸುತ್ತೇವೆ. ನಮ್ಮ ಸಂಘದಲ್ಲಿ ಎಲ್ಲರೂ ಪ್ರಾಮಾಣಿಕತೆಯಿಂದ ನಡೆದುಕೊಳ್ಳುವುದರ ಜೊತೆಗೆ ಲೋಪವಾಗದಂತೆ ಕೆಲಸ ನಿರ್ವಹಿಸುತ್ತೇವೆ. ತಾಲ್ಲೂಕಿನಲ್ಲಿ ಹಲವಾರು ಸಂಘಸಂಸ್ಥೆಗಳು ಇದ್ದು ಎಲ್ಲರೂ ಒಗ್ಗೂಡಿ ಹೋರಾಟ ಮಾಡಿದರೇ ತಾಲೂಕಿನ ಹಿತದೃಷ್ಟಿಯಿಂದ ಉಪಯೋಗವಾಗಲಿದೆ. ಯಾವುದೇ ಸಂಘಸಂಸ್ಥೆಗಳು ಹೋರಾಟ ಮತ್ತು ಜನಪರ ಕೆಲಸಗಳಿಗೆ ನಮ್ಮ ಸಂಘದ ಬೆಂಬಲ ಇರಲಿದೆ ಎಂದು ಎಂ ಸಿ ಮಲ್ಲಯ್ಯ ನವರು ತಿಳಿಸಿದರು.

ಅವರು ಇಂದು ನಗರದ ಪಾರ್ವತಿ ಟಾಕೀಸ್ ರಸ್ತೆಯಲ್ಲಿ ಹಮ್ಮಿಕೊಂಡಿದ್ದ ಹಿರಿಯ ನಾಗರೀಕರ ರಿಕ್ರಿಯೇಷನ್ ಅಸೋಸಿಯೇಷನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.


ಹಿರಿಯ ನಾಗರೀಕರ ರಿಕ್ರಿಯೇಷನ್ ಅಸೋಸಿಯೇಷನ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ ಸು ತ ರಾಮೇಗೌಡ ಮಾತನಾಡಿ ನಗರದಲ್ಲಿ ವಯಸ್ಕರಿಗೆ ಇಂತಹ ಒಂದು ಅಸೋಸಿಯೇಷನ್ ಅವಶ್ಯಕತೆ ಇದ್ದು, ಈಗ ಈಡೇರಿದೆ. ಗಾಂಧಿ ಭವನ, ಕೊಲ್ಲಾಪುರದಮ್ಮ ದೇವಾಲಯ, ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕುಳಿತು ಕಾಲ ಕಳೆಯುತ್ತಿದ್ದವರಿಗೆ ಅನೇಕ ರೀತಿಯ ಉಪಯುಕ್ತತೆ ಇರುವ ಈ ಜಾಗ ಅನುಕೂಲವಾಗಲಿದೆ ಎಂದು ಅಭಿಪ್ರಾಯ ಪಟ್ಟರು.


ಹಿರಿಯ ನಾಗರೀಕರಿಗೆ ತಾಲ್ಲೂಕು ಆಡಳಿತ ಅಥವಾ ನಗರಸಭೆಯೇ ಈ ಕೆಲಸ ಮಾಡಬಹುದಾಗಿತ್ತು. ಅನೇಕ ಉದ್ಯಾನವನಗಳನ್ನು ನಿರ್ಮಿಸಿದರೇ ಮತ್ತಷ್ಟು ಅನುಕೂಲವಾಗುತ್ತಿತ್ತು. ಎಲ್ಲರನ್ನೂ ಒಗ್ಗೂಡಿಸಿಕೊಂಡು ಅನೇಕ ಜನಪರ ಕೆಲಸಗಳನ್ನು ಮಾಡಲಿ‌ ಎಂದು ಆಶೀಸಿದರು.


ಪ್ರಾಸ್ತಾವಿಕ ನುಡಿಗಳನ್ನಾಡಿದ ನಿವೃತ್ತ ಶಿಕ್ಷಕ ಬೆಟ್ಟಯ್ಯ ಮಾತನಾಡಿ ನಮ್ಮ ಸಂಘದಲ್ಲಿ ಕೇವಲ ನಿವೃತ್ತರಲ್ಲದೆ ಅರವತ್ತು ವರ್ಷ ತುಂಬಿದ ಹಿರಿಯ ನಾಗರೀಕರೆಲ್ಲರೂ ಒಂದೆಡೆ ಸೇರಲು ಅವಕಾಶ ಕಲ್ಪಿಸುವ ಸಂಘವಾಗಿದೆ. ಬಹುತೇಕ ಶಿಕ್ಷಕರೇ ಇರುವುದರಿಂದ ಮಕ್ಕಳಿಗೆ, ಪರಿಸರಕ್ಕೆ ಸೇರಿದಂತೆ ಅನೇಕ ಕೆಲಸಗಳನ್ನು ಮಾಡುವ ಮೂಲಕ ನಾವು‌ತೊಡಗಿಸಿಕೊಳ್ಳುತ್ತೇವೆ ಎಂದರು.


ಕಸಾಪ ಜಿಲ್ಲಾಧ್ಯಕ್ಷ ಸಿಂಲಿಂ ನಾಗರಾಜು ಮಾತನಾಡಿ ನಮ್ಮಲ್ಲಿ ಏನಾದರೂ ಕೆಲಸವಾಗಬೇಕಾದರೆ ಧರಣಿ, ಸತ್ಯಾಗ್ರಹ ಹಮ್ಮಿಕೊಂಡು ಫಲ ಪಡೆಯಬೇಕಾಗಿದೆ. ಹಿರಿಯ ನಾಗರೀಕರಿಗೆ ಸವಲತ್ತುಗಳನ್ನು ಒದಗಿಸುವ ಇಚ್ಚಾಶಕ್ತಿ ಜನಪ್ರತಿನಿಧಿಗಳಿಗಿಲ್ಲ. ಹಾಗಾಗಿ ಎಲ್ಲರೂ‌ ಒಗ್ಗೂಡಿ ಇಂತಹ ನಿರ್ಧಾರ ತೆಗೆದುಕೊಂಡಿರುವುದು ಉತ್ತಮ ಎಂದರು.

ಈ ಅಸೋಸಿಯೇಷನ್ ಗೆ ನಾನು ಪ್ರತಿನಿತ್ಯ ಒಂದು ದಿನಪತ್ರಿಕೆಯನ್ನು ಹಾಗೂ ಕೆಲ ಪುಸ್ತಕಗಳನ್ನು ಕೊಡುಗೆಯಾಗಿ ನೀಡುತ್ತೇನೆ ಎಂದರು.


ಕಕಜವೇ ರಾಜ್ಯಾಧ್ಯಕ್ಷ ರಮೇಶಗೌಡ ಮಾತನಾಡಿ ಹಿರಿಯ ನಾಗರೀಕರು ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಭರವಸೆಯನ್ನು ಇಟ್ಟುಕೊಂಡಿದ್ದೀರಿ. ಯುವಕರನ್ನು ನಾಚಿಸುವಂತೆ ಕೆಲಸ ಮಾಡಲು ಮುಂದಡಿಯಿಟ್ಟಿರುವುದು ಶ್ಲಾಘನೀಯವಾಗಿದ್ದು ಯುವ ಪೀಳಿಗೆಗೆ ಮಾದರಿಯಾಗಿದ್ದೀರಿ. ನಿಮ್ಮ ಆರೋಗ್ಯ ಕಾಳಜಿಯುಳ್ಳ ಮುಂದಿನ ಕಾರ್ಯಕ್ರಮಗಳು ತಮ್ಮ ಆರೋಗ್ಯವನ್ನು ಗಣನೆಗೆ ತೆಗೆದುಕೊಂಡು ಇನ್ನೂ ಹೆಚ್ಚಿನ ಆರೋಗ್ಯವಂತರಾಗಲಿ ಎಂದು ಆಶೀಸಿದರು.


ರೇಷ್ಮೆ ಇಲಾಖೆಯ ನಿವೃತ್ತ ಅಧಿಕಾರಿ ಮುನಿರಾಜು ಮಾತನಾಡಿ ನಮ್ಮ ಸಂಘದ ಹೆಸರಿನಲ್ಲಿ ಪ್ರತಿ ತಿಂಗಳು ಐದು ಮಂದಿ ರೈತರಿಗೆ ಇಪ್ಪತ್ತೈದು ಮೊಟ್ಟೆಯ ರೇಷ್ಮೆ ಚಾಕಿಯನ್ನು ಉಚಿತವಾಗಿ ನೀಡುವುದರ ಜೊತೆಗೆ ಒಂದು ದಿನ ಪತ್ರಿಕೆಯನ್ನು ಕೊಡುವುದಾಗಿ ಘೋಷಿಸಿದರು. 


ಪತ್ರಕರ್ತ ಎಂ ಶಿವಮಾದು, ಹಾಗೂ ಚಂದ್ರು ರವರು ಮಾತನಾಡಿದರು. ಇದೇ ವೇಳೆ ಕಟ್ಟಡದ ಮಾಲೀಕರಾದ ಎನ್ ಚಂದ್ರಶೇಖರ್ ಬಾಬು ರವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಅಸೋಸಿಯೇಷನ್ ನ ಪದಾಧಿಕಾರಿಗಳು, ಕಾಂಗ್ರೆಸ್ ಮುಖಂಡ ಸಿದ್ದರಾಮು, ಅನೇಕ ಸಂಘಸಂಸ್ಥೆಗಳ ಒಡನಾಡಿ ಬಿ ಎನ್ ಕಾಡಯ್ಯ, ಶ್ರೀನಿವಾಸಯ್ಯ,

ಅನೇಕ ಇಲಾಖೆಯ ನಿವೃತ್ತ ಅಧಿಕಾರಿಗಳು ಮತ್ತು ಹಿರಿಯ ನಾಗರೀಕರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑