Tel: 7676775624 | Mail: info@yellowandred.in

Language: EN KAN

    Follow us :


ಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವಿಗೆ ತಡೆಯಾಜ್ಞೆ ತಂದ ನಿವಾಸಿಗಳು

Posted date: 19 Mar, 2020

Powered by:     Yellow and Red

ಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವಿಗೆ ತಡೆಯಾಜ್ಞೆ ತಂದ ನಿವಾಸಿಗಳು

ಚನ್ನಪಟ್ಟಣ: ಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವಿಗೆ ತೆರಳಿದ ತಹಶಿಲ್ದಾರ್ ರವರಿಗೆ ಸ್ಥಳೀಯ ಒತ್ತುವರಿದಾರರು ಹೈಕೋರ್ಟಿನಂದ ತಡೆಯಾಜ್ಞೆ ತರುವ ಮೂಲಕ ಶಾಕ್ ನೀಡಿದರು. ನಗರದ ಮಧ್ಯ ಭಾಗದಲ್ಲಿ ರುವ ಪುರಾತನ ಶೆಟ್ಟಿಹಳ್ಳಿ ಕೆರೆ ಒತ್ತುವರಿಯಾಗಿದ್ದು, ಇತ್ತೀಚಿಗೆ ತಹಶೀಲ್ದಾರ್ ಸುದರ್ಶನ್ ನೇತೃತ್ವದಲ್ಲಿ ಸಂಪೂರ್ಣ ಸರ್ವೇ ಮಾಡಿಸಿ, ಒತ್ತುವರಿದಾರರನ್ನು ಗುರುತಿಸಲಾಗಿತ್ತು.


ಈ ಸಂಬಂಧ ಹಿಂದೂ ಜಾಗರಣಾ ವೇದಿಕೆಯ ಪದಾಧಿಕಾರಿಗಳೂ ಸಹ ಎಸಿಬಿ ಮತ್ತು ಲೋಕಾಯುಕ್ತಕ್ಕೂ ದೂರು ನೀಡಿದ್ದು, ಅಧಿಕಾರಿಗಳು ತಹಶೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿ, ಶೀಘ್ರ ಸರ್ವೇ ಕಾರ್ಯಮುಗಿಸಿ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದ್ದರು.

ಒತ್ತುವರಿ ಬಗ್ಗೆ ಗಮನ ಹರಿಸಿದ ತಹಶೀಲ್ದಾರರು, ಸರ್ವೇಯ ನಂತರ ಎಲ್ಲಾ ಒತ್ತುವರಿದಾರರಿಗೂ ನೊಟೀಸ್ ಜಾರಿಗೊಳಿಸಿದ್ದಲ್ಲದೆ, ಪ್ರತಿ ಮನೆಯ ಗೋಡೆಗೂ ಮೂರು ದಿನಗಳ ಹಿಂದೆ ನೊಟೀಸ್ ಅನ್ನು ಅಂಟಿಸಿದ್ದರು.


ಅದರಂತೆ ಇಂದು ಒತ್ತು ವರಿಯನ್ನು ತೆರವುಗೊಳಿಸಲು ಇನ್ನಿತರೆ ಅಧಿಕಾರಿಗಳೊಂದಿಗೆ ತೆರಳಿದ ತಹಶೀಲ್ದಾರ್ ಅವರಿಗೆ, ಒತ್ತುವರಿದಾರರೆಲ್ಲರೂ ಹೈಕೋರ್ಟ್ ನಿಂದ ತಂದಿದ್ದ ತಡೆಯಾಜ್ಞೆ ಪ್ರತಿಗಳನ್ನು ನೀಡಿ, ತೆರವು ಕಾರ್ಯವನ್ನು ಸ್ಥಗಿತಗೊಳಿಸಿದ್ದಾರೆ. *ಈ ಮೊದಲು ಚನ್ನಾಂಬಿಕ ಕಾಲೇಜಿನ ಆಡಳಿತ ಮಂಡಳಿಯವರು ಮಾತ್ರ ತಡೆಯಾಜ್ಞೆ ತಂದಿದ್ದರು. ಇಂದು ನಗರ ಜೆಡಿಎಸ್ ಅಧ್ಯಕ್ಷ ರಾಂಪುರ ರಾಜಣ್ಣ ಸಹ ತಡೆಯಾಜ್ಞೆ ತಂದಿರುವುದಲ್ಲದೆ ಇಂದಿರಾ ಕಾಟೇಜ್ ನ ಎಲ್ಲಾ ಒತ್ತುವರಿದಾರರಿಗೂ ಅವರೇ ತಡೆಯಾಜ್ಞೆ ಕೊಡಿಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.*


*ತಡೆಯಾಜ್ಞೆ ಪ್ರತಿಯನ್ನು ಪಡೆದುಕೊಂಡ ತಹಶೀ ಲ್ದಾರ್ ಅವರು ಕೆ ಎಲ್ ಆರ್ ೧೦೪ ರ ಪ್ರಕಾರ ಕೆರೆ ಒತ್ತುವರಿ ತೆರವುಗೊಳಿಸಲು ನನಗೆ ಅಧಿಕಾರವಿದ್ದು ಹೈಕೋರ್ಟಿಗೆ  ಅಪೀಲು ಹೋಗುವುದಾಗಿ ತಿಳಿಸಿದ್ದಾರೆ.*


*ನಾನು ಮನೆಯನ್ನು ಬೇರೆಯವರ ಬಳಿ ಖರೀದಿಸಿದ್ದು, ನನ್ನ ಬಳಿ ಎಲ್ಲಾ ದಾಖಲೆಗಳು ಇವೆ. ತಹಶೀಲ್ದಾರ್ ಅವರು ಕೆರೆಯ ಒತ್ತುವರಿ ತೆರವುಗೊಳಿಸುವ ನೆಪದಲ್ಲಿ ಹಾಲಿ ವಾಸವಿರುವ ಮನೆಗಳಿಗೂ ನೊಟೀಸ್ ನೀಡಿದ್ದು ಸರಿಯಾದ ಕ್ರಮವಲ್ಲ. ೬೭/೧ ಸೆಕ್ಷನ್ ಪ್ರಕಾರ ತಹಶೀಲ್ದಾರ್ ವ್ಯಾಪ್ತಿಗೆ ಒತ್ತುವರಿ ತೆರವು ಬರುವುದಿಲ್ಲ.*

*-ರಾಂಪುರ ರಾಜಣ್ಣ, ತಾ.ಜೆಡಿಎಸ್ ಅಧ್ಯಕ್ಷ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑