ಮೋದಿ ಕರೆಗೆ ಓಗೊಟ್ಟ ಮಂದಿ, ಜನತಾ ಕರ್ಫ್ಯೂ ಗೆ ಸಂಪೂರ್ಣ ಬೆಂಬಲ ನೀಡಿದ ಬೊಂಬೆನಾಡು
ಚನ್ನಪಟ್ಟಣ: ಕರೋನಾ ವೈರಸ್ ಎಂಬ ಮಹಾಮಾರಿಯನ್ನು ತಡೆಗಟ್ಟುವ ಸದುದ್ದೇಶದಿಂದ ದೇಶಾದ್ಯಂತ ಧರ್ಮಾತೀತ, ಜಾತ್ಯಾತೀತ, ಪಕ್ಷಾತೀತವಾಗಿ ಒಂದು ದಿನ ಜನರೇ ನಿಷೇಧಾಜ್ಞೆ (ಜನತಾ ಕರ್ಫ್ಯೂ) ಆಚರಿಸುವ ಮೂಲಕ ಮನೆಯಲ್ಲೇ ಇರುವಂತೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರ ಮನವಿಗೆ ತಾಲ್ಲೂಕಿನ ಮಂದಿ ಸಂಪೂರ್ಣ ಬೆಂಬಲ ನೀಡುವ ಮೂಲಕ ಯಶಸ್ವಿಗೊಳಿಸಿದರು.
ರಾಜಕೀಯ ಪಕ್ಷಗಳು, ಸಂಘಸಂಸ್ಥೆಗಳು ಮತ್ತು ದೊಂಬಿಗಳಾದ ಸಂದರ್ಭಗಳಲ್ಲಿಯೂ ಸಂಪೂರ್ಣ ಯಶಸ್ವಿಯಾಗದ ಬಂದ್ ಇಂದು ಯಶಸ್ವಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು. ಯಾರೇ ಬಂದ್ ಗೆ ಕರೆ ನೀಡಿದರೂ ಪರ ವಿರೋಧಗಳು ಇದ್ದು ವಿರೋಧಿಗಳು ಅಂಗಡಿ ಮುಂಗಟ್ಟುಗಳನ್ನು ತೆರೆದು ಅಥವಾ ವಿರೋಧಿಸುವ ಮೂಲಕ ಸಡ್ಡು ಹೊಡೆದು ಬಂದ್ ವಿಫಲವಾಗಿರುವ ಅನೇಕ ಉದಾಹರಣೆಗಳಿವೆಯಾದರು ಇಂದು ಶೇಕಡಾ ೧೦೦ ಕ್ಕೆ ೧೦೦ ರಷ್ಟು ಬಂದ್ ಯಶಸ್ವಿಯಾಯಿತು.
ರಾಜ್ಯ ಸರ್ಕಾರವೂ ಸಾರಿಗೆ ವ್ಯವಸ್ಥೆ, ಭಾನುವಾರವಾದ್ದರಿಂದ ಸರ್ಕಾರಿ ಕಛೇರಿಗಳಿಗೆ ಇದ್ದ ರಜೆ, ರೇಷ್ಮೆ ಗೂಡಿನ ಮಾರುಕಟ್ಟೆ, ಮಾವಿನ ಹಣ್ಣು ಮಾರುಕಟ್ಟೆ, ವೀಳ್ಯದೆಲೆ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ದಿನಬಳಕೆಯ ವಸ್ತುಗಳ ಹಾಗೂ ದಿನಸಿ ಅಂಗಡಿಗಳು, ಗ್ಯಾರೇಜ್ ಗಳು, ಮಾಂಸದಂಗಡಿಗಳು, ಹೆಂಡದಗಂಗಡಿಗಳು, ಚಹಾದಂಗಡಿಗಳು ಸೇರಿದಂತೆ ಇನ್ನಿತರ ಎಲ್ಲಾ ರೀತಿಯ ಮತ್ತು ವರ್ಗದ ಅಂಗಡಿಯ ಮಾಲೀಕರು ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳುವ ಮೂಲಕ ಇಡೀ ನಗರವೇ ಸ್ತಬ್ದಗೊಂಡಿತ್ತು.
ಸಾರ್ವಜನಿಕ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆ ಗಳಲ್ಲಿ ಕೆಲವೇ ಕೆಲವು ಒಳರೋಗಿಗಳನ್ನು ಹೊರತುಪಡಿಸಿದರೆ ಹೊರ ರೋಗಿಗಳ ಸಂಖ್ಯೆ ಕ್ಷೀಣವಾಗಿತ್ತು. ಬೆರಳೆಣಿಕೆಯ ಔಷಧ ಅಂಗಡಿಗಳು (ಮೆಡಿಕಲ್) ತೆರೆದಿದ್ದವಾದರೂ ಬಣಗುಡುತ್ತಿದ್ದವು. ಬೀದಿಬದಿಯ ವ್ಯಾಪಾರಿಗಳು ಸಹ ಸಂಪೂರ್ಣ ಬೆಂಬಲ ನೀಡಿದ್ದು, ಎಲ್ಲಾ ಸಾರ್ವಜನಿಕರು ಮನೆಯೊಳಗೆ ಸೇರಿಕೊಂಡಿದ್ದರ ಫಲವಾಗಿ ನಗರದ ಪ್ರತಿ ಬೀದಿಗಳು ಬಣಗುಡುತ್ತಿದ್ದವು.
ಕ್ಷಣಕ್ಕೆ ನೂರಾರು ವಾಹನಗಳು ಜುಂಯ್ಯನೇ ಮುನ್ನುಗ್ಗುತಿದ್ದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಗಂಟೆಗೆ ಹತ್ತಾರು ವಾಹನಗಳು ಹೋಗುತ್ತಿದ್ದವು.
ಸದಾ ಗಿಜಿಗುಡುತ್ತಿದ್ದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಅಂಚೆ ಕಚೇರಿ ರಸ್ತೆ, ಷೇರು ಹೋಟೆಲ್, ಸಾತನೂರು ವೃತ್ತ ಗಳು ವಾಹನಗಳು ಮತ್ತು ಸಾರ್ವಜನಿಕರಿಲ್ಲದೇ ಭಣಗುಡುತ್ತಿದ್ದರೆ ವಾಹನಗಳ ಅಬ್ಬರದ ಓಡಾಟವಿಲ್ಲದ ರಸ್ತೆಗಳು ಬೃಹತ್ ಗಾತ್ರದ ಕರಿ ಹೆಬ್ಬಾವು ಮಲಗಿದಂತೆ ಭಾಸವಾಗುತ್ತಿತ್ತು.
ಸಂಜೆ ಐದು ಗಂಟೆಗೆ ಬಹುತೇಕ ಎಲ್ಲರೂ ಅವರವರ ಮನೆಯಲ್ಲೇ ಚಪ್ಪಾಳೆ ತಟ್ಟುವ ಮೂಲಕ ಕರೋನಾ ವೈರಸ್ ಹರಡುತ್ತಿದೆ ಎಂಬ ಅರಿವಿದ್ದರು, ಸಮಾಜದ ಆರೋಗ್ಯಕ್ಕಾಗಿ ಅದರ ವಿರುದ್ಧ ಸೆಣಸುತ್ತಿರುವ ವೈದ್ಯರು, ದಾದಿಯರು, ಔಷಧ ಮಾರಾಟಗಾರರು, ಸೈನಿಕರು, ದಿನನಿತ್ಯ ಅಗತ್ಯ ವಸ್ತುಗಳ ವಿತರಕರು ಹಾಗೂ ಮಾಧ್ಯಮದವರಿಗೆ ಕೃತಘ್ನತೆ ಅರ್ಪಿಸಲೋಸುಗ ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು