ಬಾರ್, ರೆಸ್ಟೋರೆಂಟ್, ಟೀ ಅಂಗಡಿಗಳು, ಹೋಟೆಲ್ ಗಳು ಮಾತ್ರ ಮುಚ್ಚುವಂತೆ ಆದೇಶ ಮಾಡಿದ ಜಿಲ್ಲಾಧಿಕಾರಿ
ರಾಮನಗರ: ಹೆದ್ದಾರಿ ಮತ್ತು ನಗರದ ರಸ್ತೆ ಬದಿಯ ಬಾರ್, ರೆಸ್ಟೋರೆಂಟ್, ಟೀ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ಅದೇಶ ಹೊರಡಿಸಿದ್ದಾರೆ.
ಅವರು ಇಂದು ಅವರ ಕಛೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕರೋನಾ ವೈರಸ್ ತಡೆಯಲು ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿರುವುದರ ಬಗ್ಗೆ ಆದೇಶ ಹೊರಡಿಸಿ ಈ ವಿಷಯ ತಿಳಿಸಿದರು.
ಜಿಲ್ಲೆಯಲ್ಲಿ ೧೧೪ ಜನರ ಮೇಲೆ ನಿಗಾ ಇಡಲಾಗಿತ್ತು. ೬೭ ಜನರು ಮನೆಯಲ್ಲಿಯೇ ನಿಗಾದಲ್ಲಿದ್ದರು.
೧೦ ಮಂದಿ ಸೋಂಕಿತರು ಇಲ್ಲಿಗೆ ಬಂದು ಬೇರೆ ಜಿಲ್ಲೆಗೆ ಹೋಗಿದ್ದು ಅವರು ಭೇಟಿ ನೀಡಿದ ಎಲ್ಲಾ ಸ್ಥಳಗಳು ಹಾಗೂ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದರು.
ಈಗಾಗಲೇ ೧೦೦ ಜನರನ್ನು ಪರೀಕ್ಷೆ ಮಾಡಲಾಗಿದೆ.
ಆರೋಗ್ಯದ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದ್ದು
ಹೈಸೋಲೆನ್ ವ್ಯವಸ್ಥೆ ಮಾಡಲಾಗಿದೆ.
೧,೦೦೦ ಬೆಡ್ ಗಳನ್ನು ಕರೋನ
ಹೈಸೋಲೇಷನ್ ಗಾಗಿ ಇಡಲಾಗಿದೆ.
೯ ಜಿಲ್ಲೆಗಳು ಈಗಾಗಲೇ ಲಾಕ್ ಡೌನ್ ಅಗಿದೆ.
ಈಗಾಲೇ ಎರಡು ಘಟನೆಗಳು ನಡೆದಿದ್ದು
ಬೇರೆ ಜಿಲ್ಲೆ ಯಿಂದ ಬಂದು ನಮ್ಮ ಜಿಲ್ಲೆಯಲ್ಲಿ ಹಾದು ಹೋಗಿದ್ದಾರೆ.
ನಾವು ಖಾಸಗಿ ವಾಹನಗಳಿಗೂ ಮಾಹಿತಿ ನೀಡಿದ್ದು
ಅವರು ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಪ್ರಯಾಣ ಹೋಗಬಾರದು ಎಂದು ಸೂಚಿಸಲಾಗಿದೆ.
ಅನಾರೋಗ್ಯ ಕಂಡುಬಂದ ತಕ್ಷಣ ೧೦೮ ಗೆ ತುರ್ತು ಕರೆ ಮಾಡಿದ ತಕ್ಷಣ ನಾವು ಆಂಬ್ಯುಲೆನ್ಸ್ ಇಲ್ಲದೇ ಇದ್ದರೂ ಬದಲಿ ವಾಹನದ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಜನ ಸೇರುವಂತ ಕಡೆಗಳಲ್ಲಿ ಹೆಚ್ಚಿನ ಜನ ಸೇರಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ರೇಷ್ಮೆ ಬೆಳೆಗಾರರಿಗೆ ತೊಂದರೆಯಾಗದಂತೆ ನಿಗಾವಹಿಸಲಾಗಿದೆ.
ರೈತರ ಮನೆ ಬಾಗಿಲಿಗೆ ಹೋಗಿ ರೇಷ್ಮೆ ತೆಗೆದುಕೊಳ್ಳುವಂತೆ ರೀಲರ್ ಮತ್ತು ಮಾರುಕಟ್ಟೆಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ.
ಇಂದು ರೈತರು ತಂದಿರುವ ರೇಷ್ಮೆ ಗೂಡನ್ನು ಮಾರಲು ಅವಕಾಶ ಮಾಡಿಕೊಡಲಾಗಿದೆ.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ.
ಇಂದಿನಿಂದ ಮೂರು ಹೆದ್ದಾರಿಯಲ್ಲಿ ಹೋಟೆಲ್ ಮತ್ತು ಮಾಲ್ ಗಳನ್ನು ಬಂದ್ ಮಾಡಲಾಗಿದೆ.
ಬಾರ್ ಅಂಡ್ ರೆಸ್ಟೋರೆಂಟ್ ಗಳು ಕ್ಲೋಸ್ ಆಗಲಿವೆ.
ಜಿಲ್ಲೆಯಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ನೌಕರರು ಬೆಂಗಳೂರಿನಿಂದ ಟ್ರಾವೆಲ್ ಮಾಡದಂತೆ ಸೂಚನೆ ನೀಡಲಾಗಿದೆ.
ಅವರಿಗೆ ಜಿಲ್ಲೆಯಲ್ಲಿಯೇ ಇರುವಂತೆ ಆದೇಶ ಮಾಡಲಾಗಿದೆ.
ರಾಮನಗರ ಜಿಲ್ಲಾ ಶಸ್ತ್ರ ಚಿಕಿತ್ಸಕ ವಿಜಯನರಸಿಂಹ ಅವರನ್ನು ದಿಡೀರ್ ಬದಲಾವಣೆ ಮಾಡಲಾಗಿದೆ.
ಅವರು ಸರಿಯಾದ ಮಾಹಿತಿಯನ್ನು ನೀಡದ ಕಾರಣ ಅವರನ್ನು ತಾತ್ಕಾಲಿಕವಾಗಿ ತಡೆ ಹಿಡಿದಿದ್ದು ಬೇರೋಬ್ಬ ವೈದ್ಯೆಗೆ ಜವಾಬ್ದಾರಿ ನೀಡಲಾಗಿದೆ.
ಬಾರ್, ರೆಸ್ಟೋರೆಂಟ್, ಟೀ ಅಂಗಡಿಗಳು, ಹೋಟೆಲ್ ಗಳು ಮಾತ್ರ ಮುಚ್ಚುವಂತೆ ಆದೇಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಪೋಲಿಸ್ ವರಿಷ್ಟಾಧಿಕಾರಿ ಅನೂಪ್ ಎಂ ಶೆಟ್ಟಿ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು