ಖಾಲಿ ಹೊಡೆದ ಹೆದ್ದಾರಿ, ಹಬ್ಬದ ಖರೀದಿಗೆ ಪೇಟೆಗೆ ಮುಗಿಬಿದ್ದ ಗ್ರಾಹಕರು
ಚನ್ನಪಟ್ಟಣ: ಕರ್ನಾಟಕ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಿಗಿ ಕ್ರಮ ವಹಿಸಿರುವ ತಾಲ್ಲೂಕು ದಂಡಾಧಿಕಾರಿ ಸುದರ್ಶನ್, ಪೌರಾಯುಕ್ತ ಶಿವನಂಕಾರಿಗೌಡ ಮತ್ತು ಡಿವೈಎಸ್ಪಿ ಓಂಪ್ರಕಾಶ್ ರವರು ಒಗ್ಗೂಡಿ ಕಾರ್ಯಾಚರಣೆಗೆ ಇಳಿದಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
*ಬೆಂಗಳೂರಿಗೆ ನಿಷೇಧ*
ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿದ್ದು ಕೋಲೂರು ಮತ್ತು ಕಣಿಮಿಣಿಕೆ ಗ್ರಾಮಗಳ ಬಳಿ ಬೆಂಗಳೂರಿಗೆ ಸಾಮಾನ್ಯವಾಗಿ ಹೋಗುವವರರನ್ನು ತಡೆ ಹಿಡಿದು ವಾಪಸ್ಸು ಕಳುಹಿಸುತ್ತಿದ್ದು ನಗರಕ್ಕೆ ಆಗಮಿಸುತ್ತಿರುವ ವಾಹನಗಳನ್ನು ತಡೆ ಹಿಡಿದು ವಿಡಿಯೋ ಮಾಡಿಕೊಳ್ಳುತ್ತಿದ್ದಾರೆ.
*ಕಂಡ ವಾಹನಗಳಿಗೆಲ್ಲಾ ಕೈ ತೋರುವ ಪ್ರಯಾಣಿಕರು*
ಸಾರಿಗೆ ಮತ್ತು ರೈಲು ಸಂಚಾರದ ನಿಷೇಧವಿರುವುದರಿಂದ ನಗರದ ಷೇರು ಹೋಟೆಲ್, ಸಾತನೂರು ಸರ್ಕಲ್, ಬಸ್ ನಿಲ್ದಾಣದ ಮುಂಭಾಗ, ಎಸ್ ಬಿ ಎಂ ನಿಲ್ದಾಣ ಹಾಗೂ ಮಂಗಳವಾರಪೇಟೆ ಯ ಹೆದ್ದಾರಿಯ ಬದಿಯಲ್ಲಿ ಊರಿಗೆ ತೆರಳಲು ಪ್ರಯಾಣಿಕರು ಕಣ್ಣಿಗೆ ಕಾಣುವ ಎಲ್ಲಾ ವಾಹನಗಳಿಗೂ ಕೈತೋರಿ ನಿಲ್ಲಿಸುವಂತೆ ಮನವಿ ಮಾಡುತ್ತಿದ್ದು, ಬಹುತೇಕ ಖಾಸಗಿ ವಾಹನಗಳೇ ಹೋಗುತ್ತಿರುವುದರಿಂದ ಹಾಗೂ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಯಾವುದೇ ವಾಹನಗಳು ನಿಲ್ಲಿಸದೇ ಪ್ರಯಾಣಿಕರು ಪರದಾಡುತ್ತಿರುವುದು ಕಂಡುಬರುತ್ತಿತ್ತು.
*ಹಬ್ಬದ ಖರೀದಿ ಜೋರು*
ಯುಗಾದಿಯ ಮುನ್ನಾ ದಿನವಾದ ಇಂದೂ ಸಹ ನಗರದ ಜೆಸಿ ರಸ್ತೆ ಮತ್ತು ಎಂಜಿ ರಸ್ತೆಯಲ್ಲಿ ವ್ಯಾಪಾರ ವಹಿವಾಟು ನಡೆಯಿತು. ಅದರಲ್ಲೂ ಬೀದಿ ಬದಿಯ ವ್ಯಾಪಾರಿಗಳ ಭರಾಟೆ ಹೆಚ್ಚಾಗಿದ್ದು ಹೂವು, ಹಣ್ಣು, ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ಜನ ಖರೀದಿಸಲು ಮುಗಿಬಿದ್ದಿದ್ದರು.
*ತಹಶಿಲ್ದಾರ್, ಪೌರಾಯುಕ್ತ ಮತ್ತು ಪೋಲೀಸರು*
ನಗರದಲ್ಲಿ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ದಂಡಾಧಿಕಾರಿ ಸುದರ್ಶನ್ ಮತ್ತು ಪೌರಾಯುಕ್ತ ಶಿವನಂಕಾರಿಗೌಡರು ಒಂದೇ ವಾಹನದಲ್ಲಿ ಸಂಚರಿಸಿ ನಗರದ ಬೀದಿಬದಿಯ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ತಿಳುವಳಿಕೆ ನೀಡಿದರು. ಇವರ ಜೊತೆಗೆ ಡಿವೈಎಸ್ಪಿ ಓಂಪ್ರಕಾಶ್ ಆದೇಶದ ಮೇರೆಗೆ ಪೋಲಿಸ್ ಗಸ್ತು ವಾಹನ ಮತ್ತು ಸಿಬ್ಬಂದಿಗಳು ಗುಂಪುಗೂಡುವ ಮಂದಿಯನ್ನು ಚದುರಿಸಿ ಕಳುಹಿಸುತ್ತಿದ್ದರು.
*ಸಾರ್ವಜನಿಕ ಆಸ್ಪತ್ರೆಯಲ್ಲಿ ಕರೋನಾ ರೋಗಿಗಳಿಗೆ ವಿಶೇಷ ನಿಗಾ*
ಸಾರ್ವಜನಿಕ ಆಸ್ಪತ್ರೆಯ ಅಧೀಕ್ಷಕ ಡಾ ಮಹೇಂದ್ರ ಮತ್ತು ತಾಲ್ಲೂಕು ವೈದ್ಯಾಧಿಕಾರಿ ಡಾ ರಾಜು ನೇತೃತ್ವದಲ್ಲಿ ಕೊರೊನಾ ವೈರಸ್ ರೋಗಿಗಳಿಗೆ ಮಾಹಿತಿ ನೀಡಲು ವಿಶೇಷ ಕ್ಯಾಬಿನ್ ರೂಪಿಸಿದ್ದು, ರೋಗಿಗಳನ್ನು ಸಂದರ್ಶಿಸಿ, ರೋಗ ದೃಢ ಪಟ್ಟರೆ ತಕ್ಷಣವೇ ನೇರವಾಗಿ ಕಾಯ್ದಿರಿಸಿದ ವಾಡ್೯ಗೆ ಹೋಗಲು ನೆಲದ ಮೇಲೆ ಬಾಣದ ಗುರುತು ಹಾಗೂ ಫಲಕಗಳನ್ನು ಅಳವಡಿಸಿದ್ದು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿರುವುದಾಗಿ ಡಾ ಮಹೇಂದ್ರ ಮಾಹಿತಿ ನೀಡಿದರು.
*ಸನ್ಮಿತ್ರ ಪತ್ರಿಕೆಯ ಆಶಯ*
*ಈ ವರ್ಷದ ಯುಗಾದಿ ಹಬ್ಬದ ಹರ್ಷ ಕ್ಷೀಣಿಸಿದ್ದು, ಕರೋನಾ ಎಂಬ ಮಹಾಮಾರಿ ಯ ಕೈ ಮೇಲಾಗುವ ಸಾಧ್ಯತೆ ಹೆಚ್ಚಾಗುತ್ತಿದ್ದು, ಆರೋಗ್ಯ ಚನ್ನಾಗಿದ್ದರೆ ಮುಂದಿನ ವರ್ಷ ವಿಜೃಂಭಣೆಯಿಂದ ಹಬ್ಬ ಆಚರಿಸಬಹುದು. ಹಬ್ಬದ ಸಡಗರ ಬಿಟ್ಟು ಕರೋನಾ ತಡೆಗಟ್ಟುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಪತ್ರಿಕೆಯ ಆಶಯವಾಗಿದೆ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು