ನಡಿಗೆಯ ಮೂಲಕ ಬಳ್ಳಾರಿ ತಲುಪುತ್ತಿರುವ ವಲಸಿಗರು. ಊಟ ವಸತಿ ಕಲ್ಪಿಸುತ್ತೇವೆ ಇರಿ ಎಂದ ಅಧಿಕಾರಿಗಳು
ಚನ್ನಪಟ್ಟಣ: ರಾಮನಗರ ಜಿಲ್ಲೆಯಲ್ಲಿ ೪ ಸಾವಿರ ಮಂದಿ ವಲಸೆ ಬಂದ ಕೂಲಿ ಕಾರ್ಮಿಕರು ನೆಲೆಸಿದ್ದು ಚನ್ನಪಟ್ಟಣ ದಲ್ಲಿ ಒಂದು ಸಾವಿರದ ಇನ್ನೂರು ಮಂದಿ ನಗರದ ಸಾತನೂರು ರಸ್ತೆಯ ಆಜೂಬಾಜಿನಲ್ಲಿ ಟೆಂಟ್ ನಿರ್ಮಿಸಿಕೊಂಡು ವಾಸವಿದ್ದರು.
ಕರೋನಾ ವೈರಸ್ ನಿಂದ ಕರ್ನಾಟಕ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಕೆಲಸ ಇಲ್ಲದೆ, ಇತ್ತ ಊಟಕ್ಕೂ ಪರದಾಡುವಂತಾಗಿದ್ದು ತಮ್ಮ ಊರಿಗೆ ಹಿಂದಿರುಗಲು ಹವಣಿಸುತ್ತಿದ್ದು, ಊರಿಗೆ ಕಳುಹಿಸಲು ಸಂಬಂಧಿಸಿದ ಇಲಾಖೆಗಳು ಆಸಕ್ತಿ ತೋರದ ಕಾರಣ ಈಗಾಗಲೇ ಹಲವಾರು ಮಂದಿ ಗಂಟುಮೂಟೆ ಕಟ್ಟಿಕೊಂಡು ಕಾಲ್ನಡಿಗೆಯಲ್ಲೇ ಹೊರಟಿರುವುದು ಜಿಲ್ಲಾಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ.
೧,೨೦೦ ಮಂದಿ ಇದ್ದವರು ಕರೋನಾ ವೈರಸ್ ವಿರುದ್ಧ ಸರ್ಕಾರ ಸಮರ ಸಾರಿದ ದಿನದಂದೇ ಸ್ವಲ್ಪ ಸ್ವಲ್ಪವೇ ಮಂದಿ ಬಸ್ ಮತ್ತು ರೈಲುಗಳ ಮೂಲಕ ಹೋಗಿದ್ದು ೩೦೦ ಕ್ಕೂ ಹೆಚ್ಚು ಮಂದಿ ಮಾತ್ರ ಉಳಿದುಕೊಂಡಿದ್ದರು. ಇಂದು ಕಾರ್ಮಿಕ ಇಲಾಖೆಯ ಅಧಿಕಾರಿ ಮತ್ತು ನೀಲಸಂದ್ರ ಗ್ರಾಮ ಪಂಚಾಯತಿ ಪಿಡಿಓ ಮಾದೇಗೌಡರು ಬಂದು ಊಟದ ವ್ಯವಸ್ಥೆ ಮತ್ತು ಕಲ್ಯಾಣ ಮಂಟಪದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವುದಾಗಿ ತಿಳಿಸಿ ಲೆಕ್ಕ ಹಾಕಿದಾಗ ಎಣಿಕೆಗೆ ಸಿಕ್ಕಿದ್ದು ಮಾತ್ರ ೧೫೦ ಮಂದಿ. ನಿನ್ನೆಯಿಂದೀಚೆಗೆ ೧೫೦ ಕ್ಕೂ ಹೆಚ್ಚು ಮಂದಿ ಕಾಲ್ನಡಿಗೆಯಲ್ಲೇ ಹೋದರು ಎಂಬ ಮಾಹಿತಿಯನ್ನು ಉಳಿದ ವಲಸಿಗರು ತಿಳಿಸಿದರು.
ಉಳಿದ ವಲಸಿಗರು ಇಲ್ಲಿ ಕೆಲಸವೇ ಇಲ್ಲಾ ಎಂದ ಮೇಲೆ ನಾವು ಇಲ್ಲಿ ಇರುವುದಿಲ್ಲ, ನಮಗೆ ಊಟ ವಸತಿ ಏನೂ ಬೇಡ. ನಮ್ಮ ಊರಿಗೆ ಹೋಗಲು ವಾಹನಗಳ ವ್ಯವಸ್ಥೆ ಮಾಡಿ, ಇಲ್ಲ ನಾವೇ ವಾಹನಗಳನ್ನು ಬಾಡಿಗೆಗೆ ತೆಗೆದುಕೊಂಡು ಹೋಗುತ್ತೇವೆ. ಅನುಮತಿ ನೀಡಿ ಎಂದು ಅಧಿಕಾರಿಗಳ ಬಳಿ ಗೋಳು ತೋಡಿಕೊಂಡರು.
ನಾವು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ವಲಸೆ ಬಂದಿರುವ ಕೂಲಿ ಕಾರ್ಮಿಕರಿಗೆ ಉಚಿತವಾಗಿ ಊಟ ಮತ್ತು ವಸತಿಯನ್ನು ಒದಗಿಸಲು ಕ್ರಮ ತೆಗೆದುಕೊಳ್ಳುತ್ತಿದ್ದೇವೆ.
ಈಗಾಗಲೇ ಶಿವಳ್ಳಿ ರೆಸ್ಟೋರೆಂಟ್ ನಿಂದ ಸಂಜೆಯ ಊಟಕ್ಕೆ ವ್ಯವಸ್ಥೆ ಮಾಡಿದ್ದು ಕಲ್ಯಾಣ ಮಂಟಪಕ್ಕೆ ವಾಸ್ತವ್ಯ ಬದಲಿಸುವಂತೆ ಸೂಚಿಸಲಾಗಿದೆ.
*ಮುನಿಲಿಂಗೇಗೌಡ ಲೇಬರ್ ಇನ್ಸ್ಪೆಕ್ಟರ್*
ಇಂದು ಮುಖ್ಯಮಂತ್ರಿ ಗಳು ವಲಸೆ ಬಂದಿರುವ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು ನಾವು ಕ್ರಮ ಕೈಗೊಳ್ಳುತ್ತಿದ್ದೆವೆ. ಕರೋನಾ ವೈರಸ್ ಇರುವುದರಿಂದ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಹೋಗಲು ಅನುಮತಿ ಇಲ್ಲ. ಜಿಲ್ಲಾ ಪಂಚಾಯತಿ ಸಿಇಓ ರವರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುತ್ತೇನೆ.
*ಶೇಖರಪ್ಪ ಗಡದ್. ಕಟ್ಟಡ ಕಾರ್ಮಿಕ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು