ಶ್ರೀರಂಗ ಬಾಯ್ಸ್ ವತಿಯಿಂದ ಚಿನ್ನಿದಾಂಡು ಆಟದ ಸ್ಪರ್ಧೆ
ಮಾಗಡಿ : ದೇಸಿಯ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹ ಸಧೃಡವಾಗುವುದರ ಜೊತೆಗೆ ಆರೋಗ್ಯವಂತರಾಗಿ ಜೀವಿಸಲು ಸಾಧ್ಯ ಎಂದು ಬಿಜೆಪಿ ಮುಖಂಡ ಎ.ಹೆಚ್.ಬಸವರಾಜು ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬಿಸಿಲು ಮಾರಮ್ಮ ದೇವಿಯ ಹಬ್ಬದ ಪ್ರಯುಕ್ತ ತಿರುಮಲೆ ಶ್ರೀರಂಗ ಬಾಯ್ಸ್ವತಿಯಿಂದ ಏರ್ಪಡಿಸಿದ್ದ ಚಿನ್ನಿದಾಂಡು ಆಟಕ್ಕೆ ಚಾಲನೆ ನೀಡಿ ಮಾತನಾಡಿ ಇಂದಿನ ದಿನಗಳಲ್ಲಿ ಮಕ್ಕಳು ದೈಹಿಕ ಶ್ರಮ ಬೇಡುವ ಆಟಗಳಿಗೆ ಹೆಚ್ಚಿನ ಗಮನ ನೀಡದೇ ಮನೆಯಲ್ಲಿ ಕಂಪ್ಯೂಟರ್, ಮೊಬೈಲ್ ಹಾಗೂ ಟಿವಿಗಳ ಮುಂದೆ ಕುಳಿತು ಆಟವಾಡವುದರ ಕಡೆಗೆ ಹೆಚ್ಚಿನ ಗಮನ ನೀಡುತ್ತಿರುವುದರಿಂದ ಇಂದಿನ ಮಕ್ಕಳಲ್ಲಿ ಬೋಜ್ಜಿನ ಸಮಸ್ಯೆ ಜೊತೆಗೆ ದೃಷ್ಠಿಹೀನತೆ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿವೆ. ಮಕ್ಕಳು ಮೈದಾನದಲ್ಲಿ ನಮ್ಮ ದೇಸಿಯ ಆಟಗಳಾದ ಲಗೋರಿ, ಚಿನ್ನಿದಾಂಡು, ಮರಕೋತಿಯಂತಹ ಕ್ರೀಡೆಗಳನ್ನು ಹೆಚ್ಚಾಗಿ ಆಡುವುದರಿಂದ ಆರೋಗ್ಯವನ್ನು ಉತ್ತಮವಾಗಿಟ್ಟು ಕೊಳ್ಳುವುದರ ಜೊತೆಗೆ ದೈಹಿಕವಾಗಿ ಸಧೃಡರಾಗಬಹುದು ಎಂದ ಅವರು ನಮ್ಮ ದೇಸಿಯ ಕ್ರೀಡೆಗಳು ಹೆಚ್ಚಾಗಿ ಕೌಶಲ್ಯತೆ, ಚತುರತೆಯನ್ನು ಒಳಗೊಂಡಿದ್ದು ಇವುಗಳನ್ನು ಆಡುವುದರಿಂದ ಮಕ್ಕಳಲ್ಲಿ ಬುದ್ಧಿ ಮತ್ತೇ ಚತುರತೆ ಹಾಗೂ ಕೌಶಲ್ಯ ಹೆಚ್ಚಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ಬಯಲಿನಲ್ಲಿ ಆಡುವುದರಿಂದ ಬಿದ್ದು ಗಾಯ ಮಾಡಿಕೊಳ್ಳುತ್ತಾರೆ ಎಂಬ ಹೆದರಿಕೆಯನ್ನು ತೊರೆದು ಹೊರಾಂಗಣ ಆಟಗಳನ್ನು ಆಡವಾಡುವುದಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ಚಿನ್ನಿದಾಂಡು ಸ್ಪರ್ಧೆಯ ಆಯೋಜಕ ಕಿರಣ್ ಮಾತನಾಡಿ ತಿರುಮಲೆ ಗ್ರಾಮದಲ್ಲಿ ಬಿಸಿಲು ಮಾರಮ್ಮ ದೇವಿಯ ಹಬ್ಬವನ್ನು ಆಚರಿಸುವುತ್ತಿರುವ ಹಿನ್ನಲೆಯಲ್ಲಿ ದೇಸಿಯ ಕ್ರೀಡೆಯಾದ ಚಿನ್ನಿದಾಂಡಿನ ಸ್ಪರ್ದೆಯನ್ನು ಆಯೋಜಿಸಿದ್ದು ಮಾಗಡಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮದ 12 ತಂಡಗಳು ಸ್ವರ್ಧೆಯಲ್ಲಿ ಭಾಗವಹಿಸಿವೆ ಎಂದ ಅವರು ಇತ್ತೀಚಿನ ದಿನಗಳಲ್ಲಿ ಯಾವುದೇ ವಿಶೇಷ ಕಾರ್ಯಕ್ರಮಗಳಾದರೂ ಸಹ ವಿದೇಶಿ ಆಟ ಕ್ರಿಕೆಟ್ಟನ್ನು ಹೆಚ್ಚಾಗಿ ಆಡಿಸಲಾಗುತ್ತದೆ. ನಮ್ಮ ದೇಸಿಯ ಕ್ರೀಡೆಯಲ್ಲಿ ನಿಪುಣರಾಗಿರುವವರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಚಿನ್ನಿದಾಂಡು ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಪುಟ್ಟನರಸಪ್ಪ, ಹೊಸಪೇಟೆ ಆಶ್ವತ್ಥ್, ಬಿ.ಎಂ.ಧನಂಜಯ್ಯ, ದಯಾನಂದ, ಗಟ್ಟೀಪುರ ಸತೀಶ್, ಶಶಿ, ರಮೇಶ್, ಸುರೇಶ್, ನಾಗರಾಜ್, ಟಿ.ಎಂ.ರವಿ, ರಾಜೇಶ್, ಜಗದೀಶ್ ಉಪಸ್ಥಿತರಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು