Tel: 7676775624 | Mail: info@yellowandred.in

Language: EN KAN

    Follow us :


ಪುಟ್ ಪಾತ್ ತೆರವು ಓಕೆ, ತೆರೆದ ಮಾಂಸದಂಗಡಿ ಯಾಕೆ ?

Posted date: 01 Apr, 2020

Powered by:     Yellow and Red

ಪುಟ್ ಪಾತ್ ತೆರವು ಓಕೆ, ತೆರೆದ ಮಾಂಸದಂಗಡಿ ಯಾಕೆ ?

ಎಪಿಎಂಸಿ ಮಾರುಕಟ್ಟೆ ತೆರವು

ಚನ್ನಪಟ್ಟಣ:ಏ/೦೧/೨೦/ಬುಧವಾರ. ನಗರದ ಎಪಿಎಂಸಿ ಮಾರುಕಟ್ಟೆ,  ಎಂ ಜಿ ರಸ್ತೆ, ಡಿ ಟಿ ರಾಮು ಸರ್ಕಲ್ ಮತ್ತಿತರ ರಸ್ತೆಯ ಇಕ್ಕೆಲಗಳಲ್ಲಿ ತರಕಾರಿ, ಹೂವು ಮತ್ತು ಹಣ್ಣು ವ್ಯಾಪಾರ ಮಾಡುತ್ತಿದ್ದ ಬೀದಿಬದಿಯ ವ್ಯಾಪಾರಿಗಳು ಹಾಗೂ ತರಕಾರಿ ಮಾರುಕಟ್ಟೆಯ ಬಳಿಯ ತಳ್ಳುವ ಗಾಡಿಗಳನ್ನು ತೆರವುಗೊಳಿಸಲಾಯಿತು.


ಕೊರೊನಾ ವೈರಸ್ ಬಂದಾಗಿನಿಂದಲೂ ಜನರನ್ನು ಅಂತರ ಕಾಯ್ದುಕೊಳ್ಳುವಂತೆ (ಸೋಷಿಯಲ್‌ ಡಿಸ್ಟೆನ್ಸ್) ಮನವಿ ಮಾಡಿದರೂ ಸಹ ಬಗ್ಗದ ಮಂದಿಗೆ ಇಂದು ಚುರುಕು ಮುಟ್ಟಿಸಿ ತೆರವುಗೊಳಿಸಲಾಯಿತು.


ನಿಮ್ಮ ತಳ್ಳುವ ಗಾಡಿಗಳಲ್ಲಿ ಬೀದಿಬೀದಿಗಳಿಗೆ ಹೋಗಿ ಮಾರಾಟ ಮಾಡಿ. ಇಲ್ಲಿಯೂ ಸಹ ಗುಂಪುಗೂಡಲು ಅವಕಾಶ ಮಾಡಿಕೊಡದೆ ಅಂತರ ಕಾಯ್ದುಕೊಂಡು ದಿನನಿತ್ಯದ ವಸ್ತುಗಳನ್ನು ಮಾರಿ ಎಂದು ಸಲಹೆ ನೀಡಲಾಯಿತು.


*ಸ್ವಚ್ಚತೆ ಇಲ್ಲದೆ ತಲೆ ಎತ್ತಿದ ಮಾಂಸದಂಗಡಿಗಳು*

ರಸ್ತೆಯ ಬೀದಿಬದಿಗಳಲ್ಲಿ ಮಾರುವ ತರಕಾರಿ ಅಂಗಡಿಗಳನ್ನು ತೆರವುಗೊಳಿಸಿ ಮಾಂಸದಂಗಡಿಗಳು, ಕೋಳಿ ಮಾಂಸದಂಗಡಿಗಳು ಮತ್ತು ಮೀನು ಮಾರಾಟದ ಅಂಗಡಿಗಳನ್ನು ಮುಕ್ತವಾಗಿ ಬಿಟ್ಟಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.


ಕರ್ನಾಟಕ ಲಾಕ್ ಡೌನ್ ನಂತರ ಇಂದು ಹೆಚ್ಚು ಮಾಂಸದಂಗಡಿಗಳು ತೆರೆದಿದ್ದು ಸ್ವಚ್ಚತೆ ಎನ್ನುವುದು ಮಾಯವಾಗಿ, ರೋಗಕ್ಕೆ ಮುಕ್ತ ಅವಕಾಶ ನೀಡಿದಂತಾಗಿದೆ. ಕನಿಷ್ಠ ಪ್ಲಾಸ್ಟಿಕ್ ಹೊದಿಕೆಯನ್ನೂ ಸಹ ಕಟ್ಟದೆ ಕೊಯ್ದು ನೇತು ಹಾಕಿದ್ದು ಲಾಕ್ ಡೌನ್ ಯಾವ ಪುರುಷಾರ್ಥಕ್ಕೆ ಎಂಬುದು ಸಾರ್ವಜನಿಕರ ವ್ಯಂಗ್ಯ ಭರಿತ ಆಕ್ರೋಶವಾಗಿದೆ.


ಲಕ್ಷ್ಮಿ ಟಾಕೀಸ್ (ಮೂರ್ತಿಮಹಲ್) ರಸ್ತೆ, ತುಳಸಿ ಬೀದಿ, ಕೆಲ ಮುಸ್ಲಿಂ ವಾಡ್೯ಗಳು, ಸಾತನೂರು ರಸ್ತೆ ಮತ್ತು ನಿಜಾಮಿ ವೃತ್ತದ ಮೀನಿನ ಅಂಗಡಿಗಳು ಸಂಪೂರ್ಣ ತೆರೆದಿದ್ದು ಸಂಬಂಧಿಸಿದ ಅಧಿಕಾರಿಗಳು ಸಬೂಬು ಹೇಳದೆ ಕನಿಷ್ಠ ಸ್ವಚ್ಚತೆಯನ್ನಾದರೂ ಕಾಪಾಡಲು ಮಾರ್ಗಸೂಚಿ ನೀಡಿ ಕರೋನಾ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಿ.


ಪುಟ್ ಪಾತ್ ತೆರವು ವೇಳೆ ತಹಶಿಲ್ದಾರ್ ಸುದರ್ಶನ್, ಪೌರಾಯುಕ್ತ ಶಿವನಂಕಾರಿಗೌಡ, ನಗರಸಭೆಯ ಆರೋಗ್ಯ ಅಧಿಕಾರಿ ವರಲಕ್ಷ್ಮಿ ಮತ್ತು ಪೋಲಿಸರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑