Tel: 7676775624 | Mail: info@yellowandred.in

Language: EN KAN

    Follow us :


ಸುಖಾಸುಮ್ಮನೆ ತಿರುಗುವವರಿಗೆ ನಾಕಾಬಂದಿ ಹಾಕಿ ವಾಹನಗಳನ್ನು ವಶಪಡಿಸಿಕೊಂಡ ಪೋಲೀಸರು

Posted date: 03 Apr, 2020

Powered by:     Yellow and Red

ಸುಖಾಸುಮ್ಮನೆ ತಿರುಗುವವರಿಗೆ ನಾಕಾಬಂದಿ ಹಾಕಿ ವಾಹನಗಳನ್ನು ವಶಪಡಿಸಿಕೊಂಡ ಪೋಲೀಸರು

ಚನ್ನಪಟ್ಟಣ:ಏ/೦೩/೨೦/ಶುಕ್ರವಾರ. ನಗರಕ್ಕೆ ಸೇರುವ ಎಲ್ಲಾ ರಸ್ತೆಗಳಲ್ಲಿ ಬ್ಯಾರೀಕೇಡ್ ಅಳವಡಿಸಿ ಬರುವ ಎಲ್ಲಾ ವಾಹನಗಳನ್ನು ತಡೆದು, ವಿಚಾರಣೆ ನಡೆಸಿ ಸುಖಾಸುಮ್ಮನೆ ಸುತ್ತಲು ಬರುವ ವಾಹನಗಳನ್ನು ವಶಪಡಿಸಿಕೊಂಡು ವಾಪಸು ಕಳುಹಿಸುವ ಕೆಲಸವನ್ನು ಡಿವೈಎಸ್ಪಿ ಓಂಪ್ರಕಾಶ್ ನೇತೃತ್ವದಲ್ಲಿ ಇಂದು ಪೋಲೀಸರು ಕೈಗೊಂಡರು.


ಡಿವೈಎಸ್ಪಿ ಓಂಪ್ರಕಾಶ್ ಪ್ರಯಾಣಿಕರ ಜೊತೆ ಮಾತನಾಡಿ ನಾವು ನಿಮಗಾಗಿಯೇ ಕೆಲಸ ನಿರ್ವಹಿಸುತ್ತಿದ್ದೇವೆ. ನೀವು ನಿಮಗಾಗಿಯೇ ಮನೆಯಲ್ಲಿ ಇರಿ. ವೈರಸ್ ಹಂತಹಂತವಾಗಿ ಹರಡುತ್ತಿದ್ದು, ರೋಗಿಗಳು ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ. ರಸ್ತೆ ಉಬ್ಬುಗಳು ಮತ್ತು ಡಿವೈಡರ್ ಗಳನ್ನು ಹತ್ತಿಸಿಕೊಂಡು ಹೋಗುವವರನ್ನು ನೋಡಿದ್ದೇವೆ. ಔಷಧದ ನೆಪ ಒಡ್ಡಿಕೊಂಡು ಒಟ್ಟಿಗೆ ಟ್ರಾವೆಲ್ ಮಾಡುವವರು ಅನೇಕ ಮಂದಿ ಇದ್ದು ಇದನ್ನೆಲ್ಲಾ ಬಿಟ್ಟು ಮನೆಯಲ್ಲಿಯೇ ಇರುವಂತೆ ಪ್ರಯಾಣಿಕರಿಗೆ ತಿಳಿ ಹೇಳಿದರು.


ಕೊರೊನಾ ವೈರಸ್ ತಡೆಗಟ್ಟಲು ಕರ್ನಾಟಕ ಲಾಕ್ ಡೌನ್ ಆದ ನಂತರ ಸ್ವಲ್ಪ ಮಟ್ಟಿಗೆ ಮನೆಯಲ್ಲಿಯೇ ಉಳಿದಿದ್ದ ಸಾರ್ವಜನಿಕರು ಕಳೆದ ಮೂರ್ನಾಲ್ಕು‌ ದಿನಗಳಲ್ಲಿ ಸಹಜವಾಗಿ ನಗರದ ತುಂಬೆಲ್ಲಾ ಓಡಾಡುವುದನ್ನು ರೂಢಿಸಿಕೊಂಡು ಎಲ್ಲೆಂದರಲ್ಲಿ ಸುತ್ತು ಹಾಕುತ್ತಿದ್ದರು.


ದಿನಸಿ ಅಂಗಡಿಗಳು, ಹಾಲು, ಹಣ್ಣು ತರಕಾರಿ ಹಾಗೂ ಮುಖ್ಯವಾಗಿ ಆಸ್ಪತ್ರೆ ಮತ್ತು ಮೆಡಿಕಲ್ ಗಳು ಮಾತ್ರ ತೆಗೆದಿದ್ದರೂ ಅಷ್ಟನ್ನೂ ಹೊರತುಪಡಿಸಿ, ಆಟೋಗಳು, ಕಾರುಗಳು ಸಹ ರಸ್ತೆಗೆ ಇಳಿದು ಲಾಕ್ ಡೌನ್ ಉಲ್ಲಂಘಿಸಿದ್ದಲ್ಲದೆ ಸವಾಲು ಸ್ವೀಕರಿಸಿದ ಪೋಲೀಸರಿಗೆ ತಲೆ ನೋವಾಗಿ ಪರಿಣಮಿಸಿದ್ದರು.


ಇದನ್ನು ಮನಗಂಡ ಡಿವೈಎಸ್ಪಿ ಓಂಪ್ರಕಾಶ್ ರವರು ನಗರದ ಎಲ್ಲಾ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿ, ಅನಗತ್ಯವಾಗಿ ಓಡಾಡುತ್ತಿರುವವರ ವಾಹನಗಳನ್ನು ಮಾತ್ರ ವಶಪಡಿಸಿಕೊಂಡು ಎಚ್ಚರಿಕೆ ನೀಡಿ ಕಳುಹಿಸುವಂತೆ ಆದೇಶಿಸಿದ್ದಾರೆ.


*ಕರ್ನಾಟಕ ಲಾಕ್ ಡೌನ್ ನಂತರ ಮನೆಯಲ್ಲಿರಬೇಕಾದ ಮಂದಿ ಹಲವಾರು ನೆಪಗಳನ್ನೊಡ್ಡಿ, ಶೋಕಿಗಾಗಿ ನಗರಕ್ಕೆ ಬರುತ್ತಿದ್ದು, ಅವರ ವಾಹನಗಳನ್ನು ವಶಪಡಿಸಿಕೊಳ್ಳುತ್ತಿದ್ದೇವೆ. ಔಷಧಿಗಾಗಿ ಬರುವವರು ಆಸ್ಪತ್ರೆಯ ಅಧಿಕೃತ ಚೀಟಿಯೊಂದಿಗೆ ಒಬ್ಬರೇ ಬರಬೇಕು. ಅಗತ್ಯ ವಸ್ತುಗಳ ಖರೀದಿಗೂ ಒಬ್ಬರೇ ಬರಬೇಕು. ಪದೇಪದೇ ಒಂದೇ ವಾಹನ ಎರಡು ಮೂರು ಬಾರಿ ಕಂಡರೂ ಸಹ ವಶಪಡಿಸಿಕೊಳ್ಳಲಾಗುವುದು.*

*ಓಂಪ್ರಕಾಶ್ ಡಿವೈಎಸ್ಪಿ ಚನ್ನಪಟ್ಟಣ*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑