ಜಿಲ್ಲೆಯಲ್ಲಿ ಮೂರು ಸ್ಥಳಗಳಲ್ಲಿ ರೇಷ್ಮೆ ಮಾರುಕಟ್ಟೆ ತೆರೆಯಿರಿ: ಡಾ. ಅಶ್ವಥ್ ನಾರಾಯಣ್
ರಾಮನಗರ:ಏ/೦೪/೨೦/ಶನಿವಾರ. ಕೊರೊನಾ ವೈರಸ್ (ಕೋವಿಡ್-೧೯) ಹರಡದಂತೆ ತಡೆಯಲು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿದೆ. ರೇಷ್ಮೆ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಸಂದಣಿ ಸೇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ೦೩ ಸ್ಥಳಗಳಲ್ಲಿ ರೇಷ್ಮೆ ಮಾರುಕಟ್ಟೆ ತೆರೆದು ವಹಿವಾಟು ನಡೆಸುವಂತೆ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿ ರೇಷ್ಮೆ ಮಾರುಕಟ್ಟೆಗೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ವ್ಯಾಪಾರ ನಡೆಸಲು ವ್ಯಾಪಾರಸ್ಥರು ಬರುತ್ತಾರೆ. ರೇಷ್ಮೆ ಮಾರುಕಟ್ಟೆಗೆ ಬರುವ ಪ್ರತಿಯೊಬ್ಬರು ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡುವಂತೆ ತಿಳಿಸಿದರು.
ರೇಷ್ಮೆ ಮಾರುಕಟ್ಟೆಯಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಹಾಗೂ ದೇಹದ ಉಷ್ಣತೆಯನ್ನು ಪರೀಕ್ಷಿಸಲು ಅಗತ್ಯ ವೈದ್ಯಕೀಯ ಸಿಬ್ಬಂದಿಗಳ ನೇಮಕವಾಗಬೇಕು. ವೈದ್ಯಕೀಯ ಸಿಬ್ಬಂದಿಗಳು ಮಾರುಕಟ್ಟೆಯಲ್ಲಿ ಕೋವಿಡ್-೧೯ ಲಕ್ಷಣವುಳ್ಳವರು ಕಂಡುಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ವರದಿ ಮಾಡಬೇಕು. ಏಪ್ರಿಲ್ ೧೪ ರಂದು ಲಾಕ್ಡೌನ್ ಅಂತ್ಯಗೊಂಡ ನಂತರ ಜನರು ಒಟ್ಟಾಗಿ ಸೇರುವ ಸಂದರ್ಭಗಳು ಹೆಚ್ಚಾಗುತ್ತದೆ. ಆದರೆ ೦೪ ತಿಂಗಳುಗಳ ಕಾಲ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಇದಕ್ಕೆ ಅಧಿಕಾರಿಗಳು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.
ರೈತರು ಬೆಳೆಯುವ ಬೆಳೆಗಳ ವಹಿವಾಟಿಗೆ ಯಾವುದೇ ನಿರ್ಬಂಧವಾಗದಂತೆ ನೋಡಿಕೊಳ್ಳಬೇಕು, ಬಿತ್ತನೆ ಬೀಜ, ಗೊಬ್ಬರ, ಸೇರಿದಂತೆ ಬೆಳೆಗಳ ಸಾಗಾಣಿಕೆಗೆ ಯಾವುದೇ ತೊಂದರೆಯಾಗಬಾರದು. ಸಾಮಾಜಿಕ ಅಂತರ ಕಾಯ್ದುಕೊಂಡು ಯೋಜಿತ ರೂಪದಲ್ಲಿ ಕೆಲಸ ನಿರ್ವಹಿಸಲು ತಿಳಿಸಿದರು.
ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಸೋಡಿಯಂ ಹೈಪೋ ಕ್ಲೋರೈಡ್ ಔಷಧಿಯನ್ನು ರಸ್ತೆಗಳಿಗೆ ಸಿಂಪಡಿಸುತ್ತಿದ್ದಾರೆ. ಇದರ ಬಗ್ಗೆ ಮಾಹಿತಿ ಪಡೆದ ಸಚಿವರು ಈ ಕೆಲಸ ಏಪ್ರಿಲ್ ೧೪ ರ ನಂತರವು ಮುಂದುವರೆಯಬೇಕು. ನಗರ ಸ್ಥಳೀಯ ಸಂಸ್ಥೆಗಳು ಇದಕ್ಕೆ ಬೇಕಿರುವ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ರಾಮನಗರ ನಗರ ಸಭೆಗೆ ಔಷಧಿ ಸಿಂಪರಣೆಗಾಗಿ ಇನ್ನೂ ಹೆಚ್ಚಿನ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಿಂದ ರೋಗ ಹರಡದಂತೆ ತಡೆಗಟ್ಟಲು ಸಾರ್ವಜನಿಕರು ಬಳಸಬಹುದಾದ ಮಾಸ್ಕ್ ನ ಗುಣಮಟ್ಟ ತಿಳಿದುಕೊಂಡು ಜಿಲ್ಲೆಯಲ್ಲಿ ಗಾರ್ಮೆಂಟ್ಗಳಲ್ಲಿ ಕೆಲಸ ನಿರ್ವಹಿಸುವವರ ಸಂಖ್ಯೆ ಹೆಚ್ಚಿಗೆ ಇದ್ದು, ಅವರಿಂದ ಮರುಬಳಕೆ ಮಾಡಬಹುದಾದ ಬಟ್ಟೆಯ ಮಾಸ್ಕ್ ತಯಾರಿಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್-೧೯ ಆಸ್ಪತ್ರೆಯನ್ನು ೧೦೦ ಹಾಸಿಗೆಗೆ ಸಿದ್ದಪಡಿಸಲಾಗಿದ್ದು, ಈ ವರ್ಷಾಂತ್ಯದಲ್ಲಿ ೩೦೦ ಹಾಸಿಗೆಯುಳ್ಳ ಆಸ್ಪತ್ರೆಯನ್ನು ಅಗತ್ಯ ಸಲಕರಣೆ ಹಾಗೂ ವೈದ್ಯಕೀಯ ಸಿಬ್ಬಂದಿ ಗಳೊಂದಿಗೆ ಸಿದ್ದಪಡಿಸಲಾಗುವುದು ಎಂದರು.
ಜಿಲ್ಲೆಯಲ್ಲಿರುವಂತಹ ವಲಸಿಗ ಕಾರ್ಮಿಕರನ್ನು ಸಮೀಕ್ಷೆ ನಡೆಸಿ ಗುರುತಿಸಲಾಗಿದ್ದು, ೫,೦೦೦ ಜನಕ್ಕೆ ಅಡುಗೆ ಸಾಮಗ್ರಿಗಳನ್ನು ತಲುಪಿಸಲಾಗಿದೆ. ೨,೦೦೦ ಜನಕ್ಕೆ ಊಟದ ವ್ಯವಸ್ಥೆಯನ್ನು ಕಾರ್ಮಿಕ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಾಡಲಾಗುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್ ಅವರು ಕೋವಿಡ್-೧೯ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾಡಿಕೊಂಡಿರುವ ಸಿದ್ಧತೆ, ಲಭ್ಯವಿರುವ ಔಷಧಿ ಹಾಗೂ ಸಲಕರಣೆಯ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ ಉಲ್ಲಾ ಷರೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್, ಉಪವಿಭಾಗಾಧಿಕಾರಿ ದಾಕ್ಷಾಯಿಣಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು