ಬೊಂಬೆನಗರಿಯಲ್ಲಿ ಒಂದೇ ದಿನ ಒಟ್ಟು ಏಳು ಮಂದಿಗೆ ಕೊರೋನಾ ಶಂಕೆ; ಆತಂಕ ತಂದಿಟ್ಟ ಪಿ.೧೬೯
ಚನ್ನಪಟ್ಟಣ:ಏ/೦೯/೨೦/ಗುರುವಾರ. ಕೊರೋನಾ ಪೀಡಿತ ರೋಗಿಯೊಬ್ಬ ಪಿ.೧೬೯ (ರಾಜ್ಯ ಮಾಹಿತಿಯ ಸೀರಿಯಲ್ ನಂ) ನಗರದಲ್ಲಿ ವಾಸ್ತವ್ಯ ಹೂಡಿದ್ದ ಸಂಗತಿ ಅವನ ಟ್ರಾವೆಲ್ ಹಿಸ್ಟರಿಯಿಂದ ಬಹಿರಂಗ ಗೊಳ್ಳುತ್ತಿದ್ದಂತೆ ಬೊಂಬೆನಗರಿಯಲ್ಲಿ ಕೊರೋನಾ ಆತಂಕದ ಮಂಕು ಕವಿದಿದೆ.
ಪಿ.೧೬೯ ನೇ ರೋಗಿಯ ಪ್ರಯಾಣದ ವಿವರ,
ಸಂಪರ್ಕದಲ್ಲಿದ್ದವರ ಮಾಹಿತಿಯನ್ನು ಕಲೆಹಾಕಿದ್ದು, ಈತನ ಜತೆಗೆ ಸಂಪರ್ಕಕ್ಕೆ ಬಂದಿದ್ದ ನಗರದ ಕಲಾನಗರದ ಈತನ ತಂಗಿಯ ಮನೆಯ ೦೬ (ಎರಡು ವರ್ಷದ ಪುಟ್ಟ ಮಗುವು ಸೇರಿದೆ) ಮಂದಿಯನ್ನು ಈಗಾಗಲೇ ಸಾರ್ವಜನಿಕ ಆಸ್ಪತ್ರೆಯ ಐಸೋಲೇಷನ್ ಘಟಕದಲ್ಲಿ ಇರಿಸಲಾಗಿದ್ದು, ಗಂಟಲ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಬೆಂಗಳೂರಿಗೆ ವಾಪಸ್ಸಾಗುವ ಸಮಯದಲ್ಲಿ ಅಪ್ಪಗೆರೆ ಗ್ರಾಮದವರೊಬ್ಬರ ಕಾರನ್ನು ಬಾಡಿಗೆಗೆ ಪಡೆದಿದ್ದರಿಂದ ಆ ಚಾಲಕನನ್ನು ಸಹ ವೈದ್ಯರು ಸುಪರ್ದಿಗೆ ಪಡೆದು ಅವನಿಗೂ ಸಹ ಸ್ವಾಬ್ ತೆಗೆದಿದ್ದು ಒಂದೇ ದಿನ ಒಟ್ಟು ಏಳು ಮಂದಿಯನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದ್ದು ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ವರದಿ ಬಂದ ನಂತರ ಪೀಡಿತರೋ ಅಲ್ಲವೋ ಎಂಬುದು ಗೊತ್ತಾಗಲಿದೆ.
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದಿದ್ದ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದ ಹೊಸಕೋಟೆ ತಾಲೂಕಿನ ಬೈಲನರಸಾಪುರ ಗ್ರಾಮದ ಈತ ಮಾ. ೨೦ ರಂದು ದೆಹಲಿಯ ಧರ್ಮ ಸಭೆಯನ್ನು ಮುಗಿಸಿಕೊಂಡು ನೇರವಾಗಿ ತನ್ನ ಸೋದರಿ ಮನೆಗೆ ಬಂದು ಒಂದೂವರೆ ದಿನ ಉಳಿದು ಕೊಂಡಿದ್ದ ಮಾಹಿತಿ ಲಭ್ಯವಾದ ನಂತರ ದಂಡಾಧಿಕಾರಿ ಸುದರ್ಶನ್ ನೇತೃತ್ವದಲ್ಲಿ ಕಲಾನಗರದ ಆರು ಮಂದಿ ಹಾಗೂ ಕಾರು ಚಾಲಕನನ್ನು ಆಸ್ಪತ್ರೆಗೆ ಕರೆದು ಸ್ವಾಬ್ ತೆಗೆಯಲಾಗಿದೆ.
ಮಾ. ೩೧ ರಂದು ಈತನನ್ನು ಹೋಂ ಕ್ವಾರಂಟೇನ್ ನಲ್ಲಿ ಇರಿಸಲಾಗಿತ್ತ . ಏ. ೦೬ ರಂದು ಈತನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಈತನ ಸಂಪರ್ಕಕ್ಕೆ ಬಂದಿದ್ದ ಕುಟುಂಬದ ಆರು ಮತ್ತು ಚಾಲಕ ಸೇರಿದಂತೆ ಒಟ್ಟು ಏಳು ಮಂದಿಯನ್ನು ಆಸ್ಪತ್ರೆಯಲ ಐಸೋಲೇಷನ್ ನಲ್ಲಿ ಇರಿಸಲಾಗಿದೆ.
*ವರದಿ ಕಾಯುತ್ತಿರುವ ಅಧಿಕಾರಿಗಳು:*
ಐದು ಮಂದಿಯನ್ನು ಐಸೋಲೇಷನ್ ಘಟಕದಲ್ಲಿ ಇರಿಸಲಾಗಿದ್ದು, ಪ್ರಯೋಗಾಲಯದ ವರದಿಯಲ್ಲಿ ಇವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಲ್ಲಿ ಬೆಂಗಳೂರಿನ ಕೊರೋನಾ ವಿಶೇಷ ಆಸ್ಪತ್ರೆಗೆ ಕಳುಹಿಸಲಾಗುವುದು. ಒಂದು ವೇಳೆ ಸೋಂಕು ಇಲ್ಲ ಎಂಬ ವರದಿ ಬಂದಿದ್ದೇ ಆದಲ್ಲಿ ತಾಲೂಕಿನ ಹೊನ್ನಾಯ್ಕನಹಳ್ಳಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ಹಾಸ್ಟೆಲ್ನಲ್ಲಿ ಸ್ಥಾಪಿಸಿರುವ ಕೊರೋನಾ ವಿಶೇಷ ನಿಗಾಘಟಕದಲ್ಲಿ ೧೪ ದಿನಗಳ ಕಾಲ ಕ್ವಾರಂಟೇನ್ನಲ್ಲಿ ಇರಿಸಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು