ಅನ್ಯಾಯದ ಕಡೆ ವಾಲಿದ ನ್ಯಾಯ ಬೆಲೆ ಅಂಗಡಿಗಳು. ಎರಡು ಲೈಸೆನ್ಸ್ ರದ್ದುಗೊಳಿಸಲು ಆದೇಶಿಸಿದ ತಹಶಿಲ್ದಾರ್
ಚನ್ನಪಟ್ಟಣ:ಏ;೧೧/೨೦/ಶುಕ್ರವಾರ. ತಾಲ್ಲೂಕಿನಾದ್ಯಂತ ಇರುವ ಕೆಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಅನ್ಯಾಯ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿನ್ನಾಧರಿಸಿದ ತಹಶಿಲ್ದಾರ್ ಸುದರ್ಶನ್ ರವರು ಮತ್ತು ಆಹಾರ ಸಹಾಯಕ ನಿರ್ದೇಶಕಿ ಶಾಂತಕುಮಾರಿ ರವರು ನೇರ ದಾಳಿ ನಡೆಸಿ ಎರಡು ಅಂಗಡಿಗಳ ಲೈಸೆನ್ಸ್ ರದ್ದತಿ ಮತ್ತು ಎರಡು ಅಂಗಡಿಗಳ ಮಾಪನ ಇಲಾಖೆ (ಸ್ಕೇಲ್) ದಾವೇ ಹೂಡುವಂತೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ.
ಕರೋನಾ (ಕೋವಿಡ್-೧೯) ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಲಾಕ್ ಡೌನ್ ಮಾಡಲಾಗಿರುವುದರಿಂದ ಸರ್ಕಾರವು ಎರಡು ತಿಂಗಳ (ಏಪ್ರಿಲ್ ಮತ್ತು ಮೇ) ಪಡಿತರವನ್ನು ಇದೇ ತಿಂಗಳು ವಿತರಿಸುವಂತೆ ಆದೇಶಿಸಲಾಗಿತ್ತು. ಒಬ್ಬ ವ್ಯಕ್ತಿಗೆ ೫ ಕಿಲೋ ಅಕ್ಕಿ ಮತ್ತು ಪಡಿತರ ಚೀಟಿಯೊಂದಕ್ಕೆ ಎರಡು ಕಿಲೋ ಗೋಧಿಯನ್ನು, ತಲಾ ೧೦ ಕಿಲೋ ಅಕ್ಕಿ ಮತ್ತು ಕಾಡ್೯ ಒಂದಕ್ಕೆ ನಾಲ್ಕು ಕಿಲೋ ಗೋಧಿ ವಿತರಿಸುವಂತೆ ಸೂಚಿಸಿದ್ದು, ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲೂ ಇದೇ ತಿಂಗಳು ವಿತರಿಸಲಾಗುತ್ತಿವೆ.
ಇದನ್ನೇ ಆದಾಯದ ಬಂಡವಾಳವನ್ನಾಗಿ ಮಾರ್ಪಾಡು ಮಾಡಿಕೊಂಡ ಕೆಲ ಸನ್ನದುದಾರರು ಅಕ್ಕಿ ಕಡಿಮೆ ಕೊಡುವುದು, ತೂಕದಲ್ಲಿ ಮೋಸ ಮಾಡುವುದು, ದುಡ್ಡು ಪಡೆದು ಪಡಿತರ ನೀಡುವುದನ್ನೇ ಕಾಯಕ ಮಾಡಿಕೊಂಡಿದ್ದು, ಕೆಲ ದೂರುಗಳನ್ನು ಆಧರಿಸಿ ದಾಳಿ ಮಾಡಿರುವುದಾಗಿ ತಿಳಿಸಿದರು.
ಕೋಟಮಾರನಹಳ್ಳಿ ಗ್ರಾಮ ಮತ್ತು ಸುಣ್ಣಘಟ್ಟ ಗ್ರಾಮದ ಸನ್ನದುದಾರರ ಲೈಸೆನ್ಸ್ ರದ್ದು ಪಡಿಸಲು ಆಹಾರ ನಿರೀಕ್ಷಕಿ ಶಾಂತಕುಮಾರಿಯವರಿಗೆ ಸೂಚಿಸಿದ್ದು, ಹೊಡಿಕೆಹೊಸಹಳ್ಳಿ ಮತ್ತು ಸುಣ್ಣಘಟ್ಟ ಗ್ರಾಮಗಳ ಲೈಸೆನ್ಸ್ ದಾರರಿಗೆ ತೂಕ ಮತ್ತು ಮಾಪನ ಇಲಾಖೆಯ ರಾಮಚಂದ್ರ ರವರಿಗೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆದೇಶಿಸಿರುವುದಾಗಿ ತಹಶಿಲ್ದಾರ್ ಸುದರ್ಶನ್ ರವರು ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು