Tel: 7676775624 | Mail: info@yellowandred.in

Language: EN KAN

    Follow us :


ನೀಲಸಂದ್ರ ಭೈರವೇಶ್ವರ ದೇವಾಲಯದ ಹುಂಡಿ ಕಳ್ಳತನ, ಇಪ್ಪತ್ತಕ್ಕೂ ಹೆಚ್ಚು ಬಾರಿ ಕಳ್ಳತನವಾಗಿದ್ದರೂ ಕಳ್ಳನನ್ನು ಹಿಡಿಯದ ಪೋಲೀಸರು

Posted date: 16 Apr, 2020

Powered by:     Yellow and Red

ನೀಲಸಂದ್ರ ಭೈರವೇಶ್ವರ ದೇವಾಲಯದ ಹುಂಡಿ ಕಳ್ಳತನ, ಇಪ್ಪತ್ತಕ್ಕೂ ಹೆಚ್ಚು ಬಾರಿ ಕಳ್ಳತನವಾಗಿದ್ದರೂ ಕಳ್ಳನನ್ನು ಹಿಡಿಯದ ಪೋಲೀಸರು

ಚನ್ನಪಟ್ಟಣ:ಏ/೧೬/೨೦/ಗುರುವಾರ. ತಾಲ್ಲೂಕಿನ ನೀಲಸಂದ್ರ ಗ್ರಾಮದ ಹೊರವಲಯದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಭೈರವೇಶ್ವರ ಸ್ವಾಮಿ ದೇವಾಲಯದ ಬಾಗಿಲನ್ನು ಒಡೆದು ಭಕ್ತರು ಅರ್ಪಿಸಿದ ಕಾಣಿಕೆಯ ಹುಂಡಿಯನ್ನು ಒಡೆದು ಹಣ ದೋಚಿರುವ ಪ್ರಕರಣ ನಿನ್ನೆ ರಾತ್ರಿ ನಡೆದಿದೆ.


*ಒಂದಲ್ಲಾ, ಎರಡಲ್ಲಾ ಇಪ್ಪತ್ತಕ್ಕೂ ಹೆಚ್ಚು ಬಾರಿ ಇದೇ ದೇವಾಲಯದಲ್ಲಿ ಹುಂಡಿ ದೋಚಿದ್ದು, ಪ್ರತಿ ಬಾರಿಯೂ ಪೋಲೀಸರು ಬಂದು ಮಹಜರು ಮಾಡಿಕೊಂಡು, ದೂರು ದಾಖಲಿಸಿ ಹೋಗುತ್ತಾರೆಯೇ ವಿನಹ ಇದುವರೆಗೂ ಒಂದು ಪ್ರಕರಣವನ್ನು ಬೇಧಿಸಲೂ ಇಲ್ಲಾ, ಕಳ್ಳನಿಗೆ ಶಿಕ್ಷೆಯೂ ಆಗಲಿಲ್ಲ ಎಂಬುದು ಗ್ರಾಮಸ್ಥರ ದೂರಾಗಿದೆ.*


ಮುಂಭಾಗದ ಕಬ್ಬಿಣದ ಗೇಟನ್ನು ಮುರಿದು ಒಳ ನುಗ್ಗಿರುವ ಕಳ್ಳರು, ಹುಂಡಿಯನ್ನು ಹೊರಗೆ ತಂದು ಒಡೆದು ಹಣ ದೋಚಿದ್ದಾರೆ. ಈಗ ಒಂದೂವರೆ ತಿಂಗಳಿಂದ ಈಚೆಗೆ ಹುಂಡಿಯನ್ನು ತೆರೆಯದಿದ್ದರಿಂದ *ಕನಿಷ್ಠ ಇಪ್ಪತ್ತು ಸಾವಿರ ರೂಪಾಯಿ ಗೂ ಹೆಚ್ಚು ಹಣ ಇದ್ದಿರಬಹುದು* ಎಂದು ಊಹಿಸಲಾಗಿದ್ದು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೇವಾಲಯದ ಮುಖ್ಯಸ್ಥರು ದೂರು ದಾಖಲಿಸಿದ್ದಾರೆ.


ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶ್ವಾನ ಪತ್ತೆ, ಬೆರಳಚ್ಚು ಪಡೆಯಲಾಗಿದೆ. ಸಿಸಿ ಟಿವಿ ಯ ಡಿವಿಆರ್ ನ್ನು ಕಳ್ಳರೇ ಕದ್ದೊಯ್ದಿದ್ದು ಸನಿಹದಲ್ಲಿ ಇರುವ ಸಿಸಿ ಟಿವಿಗಳನ್ನು ಗ್ರಾಮಾಂತರ ಠಾಣೆಯ ಪೋಲೀಸರು ಪರೀಕ್ಷಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ.

*ಓಂಪ್ರಕಾಶ್, ಪೋಲೀಸ್ ಉಪ ಅಧೀಕ್ಷಕರು.ಚನ್ನಪಟ್ಟಣ.*


ಆ ದೇವಾಸ್ಥಾನವು ಖಾಸಗಿಯವರ ಒಡೆತನದಲ್ಲಿದ್ದು, ತಿಂಗಳಿಗೊಮ್ಮೆಯಾದರೂ ಹಣದ ಹುಂಡಿಯನ್ನು ತೆರೆದು ಬ್ಯಾಂಕ್ ಗೆ ಜಮಾ ಮಾಡಬೇಕಾಗಿತ್ತು, ಮುಖ್ಯಸ್ಥರ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗುವುದು.


*ಸುದರ್ಶನ್, ತಹಶಿಲ್ದಾರ್ ಚನ್ನಪಟ್ಟಣ.*


ಹಲವಾರು ಬಾರಿ ಕಳ್ಳತನವಾಗಿದ್ದರೂ ಇದುವರೆಗೂ ಯಾರ ಬಂಧನವೂ ಆಗಿಲ್ಲ. ಬ್ರಹ್ಮಣಿಪುರ, ತಿಮ್ಮಸಂದ್ರ ಸೇರಿದಂತೆ ನಾಲ್ಕಾರು ಕಡೆ ಸಿಸಿ ಟಿವಿ ಗಳಿದ್ದು, ಪೋಲೀಸರು ಇವುಗಳನ್ನು ಪರಿಶೀಲಿಸಿ ಕಳ್ಳರನ್ನು ಹಿಡಿದು ಕಾನೂನು ಕ್ರಮ ಕೈಗೊಳ್ಳಲಿ.

*ಬಿಳಿಯಪ್ಪ. ನೀಲಸಂದ್ರ ಗ್ರಾಮ ಪಂಚಾಯತಿ ಸದಸ್ಯ.*


ನನಗೆ ದೇವಾಲಯಕ್ಕೆ ಸಂಬಂಧಿಸಿದವರ, ಅರ್ಚಕರ ಜೊತೆಗೆ ಒಡನಾಟ ಇರುವವರ ಮೇಲೆ ಗುಮಾನಿಯಿದ್ದು, ಪೋಲೀಸರ ಮುಂದೆ ವ್ಯಕ್ತಪಡಿಸಿದ್ದೇನೆ. ಪೋಲೀಸರು ಶೀಘ್ರವಾಗಿ ಕ್ರಮ ಕೈಗೊಳ್ಳುತ್ತಾರೆ ಎಂಬ ಭರವಸೆ ಇದೆ.

*ವೀರಭದ್ರಯ್ಯ. ದೇವಾಲಯದ ಮುಖ್ಯಸ್ಥರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑