ನೀಲಸಂದ್ರ ಭೈರವೇಶ್ವರ ದೇವಾಲಯದ ಹುಂಡಿ ಕಳ್ಳತನ, ಇಪ್ಪತ್ತಕ್ಕೂ ಹೆಚ್ಚು ಬಾರಿ ಕಳ್ಳತನವಾಗಿದ್ದರೂ ಕಳ್ಳನನ್ನು ಹಿಡಿಯದ ಪೋಲೀಸರು
ಚನ್ನಪಟ್ಟಣ:ಏ/೧೬/೨೦/ಗುರುವಾರ. ತಾಲ್ಲೂಕಿನ ನೀಲಸಂದ್ರ ಗ್ರಾಮದ ಹೊರವಲಯದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಭೈರವೇಶ್ವರ ಸ್ವಾಮಿ ದೇವಾಲಯದ ಬಾಗಿಲನ್ನು ಒಡೆದು ಭಕ್ತರು ಅರ್ಪಿಸಿದ ಕಾಣಿಕೆಯ ಹುಂಡಿಯನ್ನು ಒಡೆದು ಹಣ ದೋಚಿರುವ ಪ್ರಕರಣ ನಿನ್ನೆ ರಾತ್ರಿ ನಡೆದಿದೆ.
*ಒಂದಲ್ಲಾ, ಎರಡಲ್ಲಾ ಇಪ್ಪತ್ತಕ್ಕೂ ಹೆಚ್ಚು ಬಾರಿ ಇದೇ ದೇವಾಲಯದಲ್ಲಿ ಹುಂಡಿ ದೋಚಿದ್ದು, ಪ್ರತಿ ಬಾರಿಯೂ ಪೋಲೀಸರು ಬಂದು ಮಹಜರು ಮಾಡಿಕೊಂಡು, ದೂರು ದಾಖಲಿಸಿ ಹೋಗುತ್ತಾರೆಯೇ ವಿನಹ ಇದುವರೆಗೂ ಒಂದು ಪ್ರಕರಣವನ್ನು ಬೇಧಿಸಲೂ ಇಲ್ಲಾ, ಕಳ್ಳನಿಗೆ ಶಿಕ್ಷೆಯೂ ಆಗಲಿಲ್ಲ ಎಂಬುದು ಗ್ರಾಮಸ್ಥರ ದೂರಾಗಿದೆ.*
ಮುಂಭಾಗದ ಕಬ್ಬಿಣದ ಗೇಟನ್ನು ಮುರಿದು ಒಳ ನುಗ್ಗಿರುವ ಕಳ್ಳರು, ಹುಂಡಿಯನ್ನು ಹೊರಗೆ ತಂದು ಒಡೆದು ಹಣ ದೋಚಿದ್ದಾರೆ. ಈಗ ಒಂದೂವರೆ ತಿಂಗಳಿಂದ ಈಚೆಗೆ ಹುಂಡಿಯನ್ನು ತೆರೆಯದಿದ್ದರಿಂದ *ಕನಿಷ್ಠ ಇಪ್ಪತ್ತು ಸಾವಿರ ರೂಪಾಯಿ ಗೂ ಹೆಚ್ಚು ಹಣ ಇದ್ದಿರಬಹುದು* ಎಂದು ಊಹಿಸಲಾಗಿದ್ದು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೇವಾಲಯದ ಮುಖ್ಯಸ್ಥರು ದೂರು ದಾಖಲಿಸಿದ್ದಾರೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶ್ವಾನ ಪತ್ತೆ, ಬೆರಳಚ್ಚು ಪಡೆಯಲಾಗಿದೆ. ಸಿಸಿ ಟಿವಿ ಯ ಡಿವಿಆರ್ ನ್ನು ಕಳ್ಳರೇ ಕದ್ದೊಯ್ದಿದ್ದು ಸನಿಹದಲ್ಲಿ ಇರುವ ಸಿಸಿ ಟಿವಿಗಳನ್ನು ಗ್ರಾಮಾಂತರ ಠಾಣೆಯ ಪೋಲೀಸರು ಪರೀಕ್ಷಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ.
*ಓಂಪ್ರಕಾಶ್, ಪೋಲೀಸ್ ಉಪ ಅಧೀಕ್ಷಕರು.ಚನ್ನಪಟ್ಟಣ.*
ಆ ದೇವಾಸ್ಥಾನವು ಖಾಸಗಿಯವರ ಒಡೆತನದಲ್ಲಿದ್ದು, ತಿಂಗಳಿಗೊಮ್ಮೆಯಾದರೂ ಹಣದ ಹುಂಡಿಯನ್ನು ತೆರೆದು ಬ್ಯಾಂಕ್ ಗೆ ಜಮಾ ಮಾಡಬೇಕಾಗಿತ್ತು, ಮುಖ್ಯಸ್ಥರ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗುವುದು.
*ಸುದರ್ಶನ್, ತಹಶಿಲ್ದಾರ್ ಚನ್ನಪಟ್ಟಣ.*
ಹಲವಾರು ಬಾರಿ ಕಳ್ಳತನವಾಗಿದ್ದರೂ ಇದುವರೆಗೂ ಯಾರ ಬಂಧನವೂ ಆಗಿಲ್ಲ. ಬ್ರಹ್ಮಣಿಪುರ, ತಿಮ್ಮಸಂದ್ರ ಸೇರಿದಂತೆ ನಾಲ್ಕಾರು ಕಡೆ ಸಿಸಿ ಟಿವಿ ಗಳಿದ್ದು, ಪೋಲೀಸರು ಇವುಗಳನ್ನು ಪರಿಶೀಲಿಸಿ ಕಳ್ಳರನ್ನು ಹಿಡಿದು ಕಾನೂನು ಕ್ರಮ ಕೈಗೊಳ್ಳಲಿ.
*ಬಿಳಿಯಪ್ಪ. ನೀಲಸಂದ್ರ ಗ್ರಾಮ ಪಂಚಾಯತಿ ಸದಸ್ಯ.*
ನನಗೆ ದೇವಾಲಯಕ್ಕೆ ಸಂಬಂಧಿಸಿದವರ, ಅರ್ಚಕರ ಜೊತೆಗೆ ಒಡನಾಟ ಇರುವವರ ಮೇಲೆ ಗುಮಾನಿಯಿದ್ದು, ಪೋಲೀಸರ ಮುಂದೆ ವ್ಯಕ್ತಪಡಿಸಿದ್ದೇನೆ. ಪೋಲೀಸರು ಶೀಘ್ರವಾಗಿ ಕ್ರಮ ಕೈಗೊಳ್ಳುತ್ತಾರೆ ಎಂಬ ಭರವಸೆ ಇದೆ.
*ವೀರಭದ್ರಯ್ಯ. ದೇವಾಲಯದ ಮುಖ್ಯಸ್ಥರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು