Tel: 7676775624 | Mail: info@yellowandred.in

Language: EN KAN

    Follow us :


ಪತ್ರಕರ್ತ ಹನುಮಂತು ಗೆ ಶ್ರದ್ಧಾಂಜಲಿ ಅರ್ಪಿಸಿದ ತಾಲ್ಲೂಕು ಪತ್ರಕರ್ತರು*

Posted date: 22 Apr, 2020

Powered by:     Yellow and Red

ಪತ್ರಕರ್ತ ಹನುಮಂತು ಗೆ ಶ್ರದ್ಧಾಂಜಲಿ ಅರ್ಪಿಸಿದ ತಾಲ್ಲೂಕು ಪತ್ರಕರ್ತರು*

ಚನ್ನಪಟ್ಟಣ:ಏ/೨೨/೨೦/ಬುಧವಾರ. ನಗರದ ಗಾಂಧಿ ಸ್ಮಾರಕ ಭವನದಲ್ಲಿ ನೆನ್ನೆ ಅಪಘಾತದಲ್ಲಿ ನಿಧನ ಹೊಂದಿದ ಪಬ್ಲಿಕ್ ಟಿ.ವಿ ಯ ವರದಿಗಾರ ಟಿ.ಹನುಮಂತು (೩೩) ಇವರ ಸಾವಿಗೆ ತಾಲ್ಲೂಕಿನ ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮದ ಪತ್ರಕರ್ತರು ಸೇರಿ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಿದ್ದರು.

ಈ ಸಂದರ್ಭದಲ್ಲಿ ಎಲ್ಲಾ ಪತ್ರಕರ್ತರೂ ೨ ನಿಮಿಷ ಮೌನ ಆಚರಿಸಿ ಮೃತ ಹನುಮಂತು ಅವರ ಭಾವ ಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಲ್ಲಿಸಿದರು.


ಸಂದರ್ಭದಲ್ಲಿ ನುಡಿ ನಮನ ಸಲ್ಲಿಸಿದ ಪತ್ರಕರ್ತ ರಮೇಶ್ ಗೌಡ ಅವರು ಕೆ. ಹನುಮಂತು ಕ್ರಿಯಾ ಶೀಲಯುವಕ, ಉತ್ತಮವಾಗಿ ವರದಿ ಮಾಡಬೇಕು, ಸಮಸ್ಯೆಗಳಿಗೆ ಪರಿಹಾರ ಹುಡಕಬೇಕು, ಜನರ ನೋವಿಗೆ ಪರಿಹಾರ ಸಿಗಬೇಕು ಎಂಬ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದ್ದರು.

ಶ್ರೀಯುತರ ಸಾವಿನಿಂದ ಪತ್ರಿಕಾ ಕ್ಷೇತ್ರವು ಓರ್ವ ದಿಟ್ಟ ಪತ್ರಕರ್ತನನ್ನು ಕಳೆದು ಕೊಂಡಿದೆ.


ಸರ್ಕಾರ ಕೊರೊನಾ ನಿಮಿತ್ತ ಸತ್ತ ವೈದ್ಯಕೀಯ ಸಿಬ್ಬಂದಿಗೆ ೫೦ ಲಕ್ಷ ಪರಿ ಹಾರ ಕೊಡುವುದಾಗಿ ಘೋಷಿಸಿದೆ, ಕೋವಿಡ್ ಸಂಬಂಧದ ವರದಿ ಮಾಡಲು ಹೋಗಿ ಹಿಂದಿರುಗಿ ಬರುತ್ತಿದ್ದಾಗ ಆದ ಸಾವು ಇದಾಗಿದ್ದು, ಇಂತಹ ಪ್ರಕರಣದಲ್ಲಿಯೂ ೫೦ ಲಕ್ಷ ಪರಿಹಾರ ಘೋಷಿಸಬೇಕು ಎಂದರು. ಹನುಮಂತು ಮಗು ವಿಕಲಚೇತನವಾಗಿದ್ದು, ಅದರ ಪೂರ್ಣ ನಿರ್ವಹಣೆಯನ್ನು ಚನ್ನಪಟ್ಟಣ ಕ್ಷೇತ್ರದ ಶಾಸಕ ಎಚ್.ಡಿ ಕುಮಾರಸ್ವಾಮಿ ಯವರು ವಹಿಸಿಕೊಂಡಿರುವುದು ಶ್ಲಾಘನೀಯವಾದದ್ದು ಎಂದು ಹೇಳಿದರು. ಬೇರೆಯವರು ವೈಯಕ್ತಿಕವಾಗಿ ಘೋಷಿಸಿ ರುವ ಸಹಾಯ ಧನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಇದೇ ವೇಳೆ ಕಿವಿಮಾತು ಹೇಳಿದರು.


ಮತ್ತೋರ್ವ ಹಿರಿಯ ಪತ್ರಕರ್ತ ಸು.ತ ರಾಮೇಗೌಡ ಅವರು ಮಾತನಾಡಿ ಹನುಮಂತು ಅವರು ಮಾನವೀಯ ಹೃದಯವುಳ್ಳವರು ಇಷ್ಟು ಚಿಕ್ಕವಯಸ್ಸಿನಲ್ಲಿ ಅವರ ಸಾವು ಪತ್ರಿಕಾ ಕ್ಷೇತ್ರಕ್ಕೆ, ಅವರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.

ಕೆಲವು ಪ್ರಮುಖರು ವೈಯಕ್ತಿಕವಾಗಿ ಕೊಡುತ್ತಿರುವ ಪರಿಹಾರದ ಜೊತೆಗೆ ಸರ್ಕಾರ ಗಣನೀಯ ಪ್ರಮಾ ಣದಲ್ಲಿ ಪರಿಹಾರ ಒದಗಿಸಿ ಕೊಡಬೇಕು ಅದಕ್ಕೆ ನಾವೆಲ್ಲರೂ ಒತ್ತಾಯ ಹೇರೋಣಾ ಎಂದು ಹೇಳಿದರು.

ಹನುಮಂತು ಸಾಹಿತ್ಯ, ಸಾಂಸ್ಕೃತಿಕ ಹಾಗೂ ರಾಜ ಕೀಯ ವರದಿಗಳನ್ನು ಸಮನ್ವಯಗೊಳಿಸಿಕೊಂಡು ಸಮತೋಲನ ವರದಿ ಮಾಡುತ್ತಿದ್ದರು ಎಂದರು.


ಕಾರ್ಯಕ್ರಮ ನಿರೂಪಣೆ ಮಾಡಿದ ಪತ್ರಕರ್ತ ಲಕ್ಷ್ಮಿಪತಿ, ಹನಮಂತು ಮಾನವೀಯ ಹೃದಯವುಳ್ಳ ಗೆಳೆಯ, ಬೇರೆಯವರು ನೀಡುವ ಸಹಾಯದ ಜೊತೆಗೆ ಜಿಲ್ಲೆಯ ಪತ್ರಕರ್ತರೂ ಸಹ ಸಹಾಯ ಹಸ್ತ ನೀಡಬೇಕು ಎಂದರು.

ಶ್ರದ್ಧಾಂಜಲ ಸಭೆಯಲ್ಲಿ ಪತ್ರಕರ್ತರಾದ ಬಿ.ಟಿ ನಾಗೇಶ್, ಗುರುಮೂರ್ತಿ, ಮಂಜುನಾಥ್, ಕರೀಂ, ಚೇತನ್‌ಕುಮಾರ್ ಸೇರಿ ದಂತೆ ತಾಲ್ಲೂಕಿನ ಬಹುಪಾಲು ಎಲ್ಲಾ ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮದ ಪತ್ರಕರ್ತರು ಪಾಲ್ಗೊಂಡಿದ್ದರು.

ಶ್ರದ್ಧಾಂಜಲ ಸಭೆಯಲ್ಲಿ ಪ್ರತಿಯೊಬ್ಬರೂ ಸಹ ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದರ ಜೊತೆಗೆ ಮಾಸ್ಕ್ ಬಳಸಿ ಶಿಸ್ತು ಮೆರೆದು ಮಾದರಿಯಾಗಿದ್ದು ವಿಶೇಷವಾಗಿತ್ತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑