Tel: 7676775624 | Mail: info@yellowandred.in

Language: EN KAN

    Follow us :


ಸರ್ಕಾರದ ಎಡವಟ್ಟು, ರಾಮನಗರದಲ್ಲಿ ನೂರವೈತ್ತಕ್ಕೂ ಹೆಚ್ಚು ಕ್ವಾರಂಟೈನ್ ಸಾಧ್ಯತೆ

Posted date: 24 Apr, 2020

Powered by:     Yellow and Red

ಸರ್ಕಾರದ ಎಡವಟ್ಟು, ರಾಮನಗರದಲ್ಲಿ ನೂರವೈತ್ತಕ್ಕೂ ಹೆಚ್ಚು ಕ್ವಾರಂಟೈನ್ ಸಾಧ್ಯತೆ

ರಾಮನಗರ:ಏ/೨೪/೨೦/ಶುಕ್ರವಾರ. ರಾಮನಗರ ದ ಕಾರಾಗೃಹದಲ್ಲಿದ್ದ ಖೈದಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆದುಕೊಂಡು ಹೋಗಿದ್ದು, ಬೆಂಗಳೂರಿನ ಪಾದರಾಯನಪುರ ದ ಪುಂಡರನ್ನು ರಾಮನಗರದ ಕಾರಾಗೃಹಕ್ಕೆ ಕರೆ ತಂದ ನಂತರ ಅವರಿಗೆ ಸ್ವಾಬ್ ತೆಗೆಯಲಾಗಿದ್ದು, ಮೊದಲಿಗೆ ಎರಡು ನಂತರ ಐದಕ್ಕೇರಿದ ಸೋಂಕಿತರಿಂದ ಹೌಹಾರಿದ ಜಿಲ್ಲೆಯ ಹಿರಿಯ ರಾಜಕಾರಣಿಗಳು, ಸಂಘಸಂಸ್ಥೆಗಳು, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಂತರ ಎಲ್ಲರನ್ನೂ ಬೆಂಗಳೂರಿನ ಹಜ್ ಭವನಕ್ಕೆ ಕರೆದೊಯ್ಯಲಾಯಿತಾದರೂ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ರಾಮನಗರ ದ ನೂರವೈತ್ತಕ್ಕೂ ಹೆಚ್ಚು ಮಂದಿಯನ್ನು ಇಂದು ಕ್ವಾರಂಟೈನ್ ನಲ್ಲಿ ಇಡಲು ಜಿಲ್ಲಾಡಳಿತ ಸಜ್ಜಾಗಿದೆ.


ರಾಮನಗರ ಜೈಲಿಗೆ ಬೆಂಗಳೂರಿನಿಂದ ಕರೆ ತಂದಿದ್ದ ಪಾದರಾಯನಪುರ ಪುಂಡರಲ್ಲಿ ಇಬ್ಬರು ಖೈದಿಗಳಿಗೆ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೊನಾ ಸೋಂಕು ಧೃಡಪಟ್ಟ ಹಿನ್ನಲೆಯಲ್ಲಿ ಸೋಂಕು ಇರುವ ಇಬ್ಬರು ಆರೋಪಿಗಳನ್ನು ಮಧ್ಯರಾತ್ರಿ ಸುಮಾರು ೦೧ ಗಂಟೆಗೆ ಆಂಬುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.


ಕೈದಿಗಳಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ನಾಯಕರು ವಿರೋಧಿಸಿದ್ದರು.  ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿ ಯವರು ಕರೆತರುವ ಮುನ್ನವೇ ಎಚ್ಚರಿಸಿದ್ದರಲ್ಲದೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ಸಹ ನೀಡಿದ್ದರು. ಅಂತೆಯ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಸಂಸದ ಡಿ.ಕೆ ಸುರೇಶ್ ಕೂಡ ಆಕ್ಷೇಪ ವ್ಯಕ್ತಪಡಿಸಿ, ನಂತರ ಪರಿಸ್ಥಿತಿಯನ್ನು ನೋಡಿಕೊಂಡು ಪ್ರತಿಕ್ರಿಯಿಸುವುದಾಗಿ ಹೇಳಿದ್ದರು. ಅದರಿಂದ ಅನಾಹುತ ಉಂಟಾದರೆ ಸರ್ಕಾರವೇ ಅದಕ್ಕೆ ಹೊಣೆ ಯಾಗಬೇಕಾಗುತ್ತದೆ ಎಂದು ಹೇಳಿದ್ದರು.


ವ್ಯಾಪಕ ವಿರೋಧ ದಿಂದ ತಡರಾತ್ರಿ ತುರ್ತು ಸಭೆ ನಡೆಸಿದ ಜಿಲ್ಲಾಡಳಿತ ಇಂದು ಉಳಿದ ಎಲ್ಲಾ ಆರೋಪಿಗಳನ್ನು ಬೆಂಗಳೂರಿನ ಹಜ್ ಭವನಕ್ಕೆ ಶಿಫ್ಟ್ ಮಾಡುವ ನಿರ್ಧಾರ ಕೈಗೊಂಡಿದ್ದು ಬೆಳ್ಳಂಬೆಳಿಗ್ಗೆ ಜೈಲಿನ ಮುಂಭಾಗದಲ್ಲಿ ಪಾದರಾಯನಪುರದ ಆರೋಪಿಗಳನ್ನು ಇಂದು ಬೆಳಿಗ್ಗೆ ೧೦.೦೦ ಗಂಟೆಗೆ ವರ್ಗಾಯಿಸಲಾಯಿತು.


*ಸೇವಾ ಸಿಬ್ಬಂದಿ ಪ್ರತಿಭಟನೆ*

ಪಾದರಾಯನಪುರ ಗಲಭೆ ಕೋರರನ್ನು ರಾಮನಗರ ಜೈಲಿಗೆ ಕರೆತಂದಿರುವುದಕ್ಕೆ ಜೈಲು ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೈದಿಗಳಲ್ಲಿ ಕೋವಿಡ್-೧೯ ದೃಢಪಟ್ಟ ಹಿನ್ನೆಲೆಯಲ್ಲಿ ಜೈಲು ಸಿಬ್ಬಂದಿಗಳು ಜೈಲಿನ ಮುಂಭಾಗದಲ್ಲಿ ಗಲಾಟೆ ಮಾಡಿದ್ದಾರೆ. ನಮ್ಮ ಜೀವ ತೆಗೆಯಲು ಖೈದಿಗಳನ್ನು ಇಲ್ಲಿ ತಂದು ಹಾಕಿದ್ದಾರೆ. ಆರೋಪಿಗಳನ್ನು ಕರೆತರುವಾಗ ಯಾವುದೇ ಮುಂಜಾಗ್ರತಾ ಕ್ರಮ ತಗೆದುಕೊಂಡಿಲ್ಲ ಎಂದು ಜೈಲಿನ ಪಕ್ಕದಲ್ಲಿರುವ ಕ್ವಾರ್ಟರ್ಸ್ ನಲ್ಲಿ ಉಳಿದಿರುವ ಸಿಬ್ಬಂದಿಗಳು ಆತಂಕ ವ್ಯಕ್ತಪಡಿ ಸಿದ್ದಾರೆ.


ನಗರಸಭೆಯ ಹದಿನೈದು ಮಂದಿ,

ಜೈಲು ಅಧಿಕಾರಿಗಳು ಮತ್ತು ಅವರ ಸಂಪೂರ್ಣ ಕುಟುಂಬದ ಸದಸ್ಯರು, ಪೋಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ನೂರೈವತ್ತಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಜಿಲ್ಲಾ ಕಾರ್ಯದರ್ಶಿ ಯವರ ಜೊತೆ ಎಸ್ಪಿ, ಡಿಸಿ, ಡಿಎಚ್‌ಓ ಸಭೆ ಸೇರಿ‌ ತೀರ್ಮಾನಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.


*ಜೈಲಿಗೆ ಬಂದಿದ್ದ ಸಿಬ್ಬಂದಿಗಳಿಗೂ ಕ್ವಾರೆಂಟೈನ್*

ರಾಮನಗರ ನಗರಸಭೆ ಸಿಬ್ಬಂದಿಗಳು ಮಾಸ್ಕ್, ಸ್ಯಾನಿಟೈಜರ್ ಕೊಡಲು ಹೋಗಿದ್ದರು. ಅವರನ್ನು ಕೂಡ ಕ್ವಾರಂಟೈನ್ ಮಾಡುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಒಟ್ಟು ೧೫೦ ಕ್ಕೂ ಹೆಚ್ಚು ಜನರನ್ನು ಹೋಂಕ್ವಾರಂಟೈನ್‌ಗೆ ಒಳಪಡಿಸುವ ಅಂದಾಜಿದೆ. ೨೦ ಕ್ಕೂ ಹೆಚ್ಚು ಜನ ಜೈಲಿನಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಗಳು, ಅಡುಗೆ ಭಟ್ಟರನ್ನು ಸೇರಿ ಎಲ್ಲರನ್ನು ಕ್ವಾರಂ ಟೈನ್ ಮಾಡುವ ಸಾಧ್ಯತೆ ದಟ್ಟವಾಗಿದ್ದು, ಕ್ವಾರಂಟೈನ್ ಗೆ ಒಳಪಡುವ ಸಿಬ್ಬಂದಿಗಳು, ಈ ಎರಡು ದಿನದಲ್ಲಿ ಯಾರು ಯಾರನ್ನು ಸಂಪರ್ಕ ಮಾಡಿದ್ದರೋ ಎಂಬ ಆತಂಕದಲ್ಲಿ ಜಿಲ್ಲೆಯ ಜನರು ಭಯಭೀತರಾಗಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑