Tel: 7676775624 | Mail: info@yellowandred.in

Language: EN KAN

    Follow us :


ದೊಡ್ಡಗಂಗವಾಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಐದು ಸಾವಿರ ಸಾಮಥ್ರ್ಯದ ಬಿಎಂಸಿ ಕೇಂದ್ರಕ್ಕೆ ಚಾಲನೆ

Posted date: 06 Mar, 2018

Powered by:     Yellow and Red

ದೊಡ್ಡಗಂಗವಾಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಐದು ಸಾವಿರ ಸಾಮಥ್ರ್ಯದ ಬಿಎಂಸಿ ಕೇಂದ್ರಕ್ಕೆ ಚಾಲನೆ

ರಾಮನಗರ : ತಾಲ್ಲೂಕಿನ ಕೂಟಗಲ್ ಹೋಬಳಿ ದೊಡ್ಡಗಂಗವಾಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಐದು ಸಾವಿರ ಸಾಮಥ್ರ್ಯದ ಬಿಎಂಸಿ ಕೇಂದ್ರಕ್ಕೆ ಚಾಲನೆ ಕಾರ್ಯಕ್ರಮ ನಡೆಯಿತು.
    ತಾಲ್ಲೂಕು ಪಂಚಾಯಿತ್ ಸದಸ್ಯ ಎಚ್. ಶಿವಪ್ರಸಾದ್ ಮಾತನಾಡಿ ಗ್ರಾಮಾಂತರ ಪ್ರದೇಶದ ಒಬ್ಬ ಸಾಮಾನ್ಯ ರೈತನ ಮಗನಾಗಿ ಪಿ.ನಾಗರಾಜು ಹುಟ್ಟಿ ಸಹಕಾರಿ ಕ್ಷೇತ್ರದಲ್ಲಿ ಹಲವು ಸುಧಾರಣೆಗಳನ್ನು ಮಾಡುವ ಮೂಲಕ ಹೊಸಹೊಸ ಯೋಜನೆಗಳ ರುವಾರಿಯಾಗಿರುವುದು ಶ್ಲಾಘನೀಯ ಎಂದರು.
ರೈತ ಕುಟುಂಬದಲ್ಲಿ ಜನಿಸಿದ ವ್ಯಕ್ತಿಗಳಿಗೆ ಮಾತ್ರ ರೈತ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಟಾನ ಮಾಡಲು ಸಾಧ್ಯ. ಈ ಸಾಲಿನಲ್ಲಿ ಪಿ.ನಾಗರಾಜು ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ನಂತರ ಕೆಎಂಎಫ್ ಅಧ್ಯಕ್ಷರಾಗಿ ಹೈನುಗಾರರ ಬಗೆಗೆ ರೈತ ನೆರವು ಕಾರ್ಯಕ್ರಮಗಳನ್ನು ತಂದಿದ್ದಾರೆ.
ರಾಜಕೀಯ ಹೊರತುಪಡಿಸಿ ರೈತ ಆರ್ಥಿಕವಾಗಿ ಸಬಲನಾಗಲು ನೆರವು ನೀಡಲು ವಿಮಾ ಯೋಜನೆ, ಹಾಲು ಉತ್ಪಾದಕ ರೈತ ಮೃತಪಟ್ಟರೆ ಮರಣ ವಿಮೆ, ರಾಸು ವಿಮೆಯಂತಹ ಪಶು ಆಹಾರದ ಬದಲಾವಣೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳು ಸಹಕಾರಿಗಳಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಸಂಘವು ಕೇವಲ 18 ಲೀಟರ್‍ನಿಂದ ಪ್ರಾರಂಭವಾಗಿ ಇಂದು 2200 ಲೀಟರ್ ಪ್ರತಿದಿನ ಉತ್ಪಾದನೆಯಾಗುತ್ತಿದೆ. ಇಂದು ನಮ್ಮ ಸಂಘದಲ್ಲಿ ಬಿಎಂಸಿ ಪ್ರಾರಂಬಿಸಿದ್ದು, ಉತ್ಪಾದಕರು ಅದರ ಸದುಪಯೋಗವನ್ನು ಪಡಿಸಿಕೊಂಡು ಸಂಘವನ್ನು ಸದೃಡಗೊಳಿಸಿ ಎಂದು ಕಿವಿಮಾತು ಹೇಳಿದರು.
ಕೆಎಂಎಫ್ ಅದ್ಯಕ್ಷ ಪಿ.ನಾಗರಾಜು ಬಿಎಂಸಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ನಿರ್ಮಾಣವಾಗುತ್ತಿರುವ ಉತ್ಪನ್ನ ಘಟಕ ಮತ್ತು ಪೌಡರ್ ಪ್ಲಾಂಟ್‍ಗಳು ರೈತರ ಬೆವರಿನ ಹನಿಯಾಗಿದ್ದು, ಅದು ನಿಮ್ಮಗಳ ಕೊಡುಗೆಯೆ ಹೊರತು ಇದಕ್ಕೆ ಯಾವುದೆ ಸರ್ಕಾರಗಳು ಅನುದಾನ ನೀಡಿಲ್ಲ. ಸಹಕಾರಿಗಳ ಪರಿಶ್ರಮದಿಂದ ಬಂದ ಲಾಭದಲ್ಲಿ ಒಕ್ಕೂಟದಿಂದ ನಿರ್ಮಾಣ ಮಾಡುತ್ತಿದೆ ಎಂದರು.
ಹಾಲು ಉತ್ಪಾದಕರ ಪರವಾಗಿ ಕೈಗೊಂಡ ಯೋಜನೆಗಳಲ್ಲಿ ಶೇ.90ರಷ್ಟು ಯಶಸ್ಸು ಕಂಡಿದ್ದು, ಸಹಕಾರಿಗಳು ನನ್ನ ಬೆಂಬಲಕ್ಕೆ ನಿಂತಲ್ಲಿ ಸಹಕಾರಿ ಕ್ಷೇತ್ರದ ಮುಖಾಂತರ ದೇಶದ ಜನರು ಕರ್ನಾಟಕದತ್ತ ನೋಡುವ ಮಾದರಿ ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತರುತ್ತೇನೆ. ಜೊತೆಗೆ ರೈತನ ಆರ್ಥಿಕ ಮಟ್ಟ ವೃದ್ದಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
ಈ ಸಂಧರ್ಭದಲ್ಲಿ ಬೆಂಗಳೂರು ಹಾಲು ಒಕ್ಕೂಟದ ರಾಮನಗರ ಶಿಬಿರ ವ್ಯವಸ್ಥಾಪಕ ಡಾ.ಶಿವಶಂಕರ್, ಎಂಪಿಸಿಎಸ್ ಅಧ್ಯಕ್ಷ ಕಂಡಾದಯ್ಯ, ಕಾರ್ಯದರ್ಶಿ ವಿಜಯ್‍ಕುಮಾರ್,  ವಿಎಸ್‍ಎಸ್‍ಎಸ್‍ಎನ್ ಕಾರ್ಯದರ್ಶಿ ರಾಮಚಂದ್ರಯ್ಯ ಉಪಸ್ಥಿತರಿದ್ದರು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑