Tel: 7676775624 | Mail: info@yellowandred.in

Language: EN KAN

    Follow us :


ಮತ್ತೆ ಗರಿಗೆದರಿದ ಪುಟ್ಪಾತ್ ವ್ಯಾಪಾರ. ನಗರಸಭೆ ಮತ್ತು ಪೋಲೀಸರು ಮೌನ, ತಹಶಿಲ್ದಾರ್ ತೆರವು ಪ್ರಯೋಗ

Posted date: 02 May, 2020

Powered by:     Yellow and Red

ಮತ್ತೆ ಗರಿಗೆದರಿದ ಪುಟ್ಪಾತ್ ವ್ಯಾಪಾರ. ನಗರಸಭೆ ಮತ್ತು ಪೋಲೀಸರು ಮೌನ, ತಹಶಿಲ್ದಾರ್ ತೆರವು ಪ್ರಯೋಗ

ಚನ್ನಪಟ್ಟಣ:ಮೇ/೦೨/೨೦/ಶನಿವಾರ. ಲಾಕ್‌ಡೌನ್ ಸ್ವಲ್ಪ ಸಡಿಲ ವಾಗುತ್ತಿದ್ದಂತೆ ನಗರದಾದ್ಯಂತ ರಸ್ತೆ ಬದಿಗಳಲ್ಲಿ ತಳ್ಳುವ ಗಾಡಿಗಳು ಹಾಗೂ ರಸ್ತೆ ಬದಿಗಳಲ್ಲಿಯೇ ನಡೆಯುವ ವ್ಯಾಪಾರಗಳು ಅತ್ಯಧಿಕವಾಗಿವೆ. ಪಾದಚಾರಿಗಳು ಸಂಚರಿಸಲಾಗದಷ್ಟೂ ಜಾಗವು ಇಲ್ಲದೇ ಫುಟ್ಪಾತ್‌ನ್ನು ವ್ಯಾಪಾರಿಗಳು ಈಗಾಗಲೇ ಆವರಸಿ ಕೊಂಡಿದ್ದಾರೆ.


ಅಂಚೆ ಕಛೇರಿ ರಸ್ತೆ, ಜೆ.ಸಿ ರಸ್ತೆ, ಎಂ.ಜಿ ರಸ್ತೆ, ಡಿ.ಟಿ ರಾಮು ಸರ್ಕಲ್ ಸೇರಿದಂತೆ ಫುಟ್‌ಪಾತ್ ಇರುವ ಎಲ್ಲ ಕಡೆಯೂ ಹಣ್ಣು, ತರಕಾರಿ, ಹೂವು ಮತ್ತು ಎಳನೀರು ಮಾರಾಟಗಾರರು ಸಂಪೂರ್ಣವಾಗಿ ಫುಟ್‌ಪಾತ್‌ನ್ನು ಆವರಸಿಕೊಂಡಿದ್ದಾರೆ.


ನಗರಸಭೆಯ ಸಿಬ್ಬಂದಿ ಮತ್ತು ಅಧಿಕಾರಿಗಳಾಗಲಿ, ಪೊಲೀಸ್ ಇಲಾಖೆಯವರಾಗಲಿ ನಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನು ವಂತೆ ನಡೆದುಕೊಳ್ಳುತ್ತಿರುವುದು ನಗರದ ಸೌಂದರ್ಯ ಹಾಳಾಗಲು ಹಾಗೂ ಸಾಂಕ್ರಾಮಿಕ ರೋಗಗಳು ಹರಡಲು ಕಾರಣಕರ್ತರಾಗಿದ್ದಾರೆ ಎಂದರೆ ತಪ್ಪ್ಪಾಗಲಾರದು.


ಫುಟ್‌ಪಾತ್ ವ್ಯಾಪಾರಸ್ಥರು ದಿನೇದಿನೇ ಹೆಚ್ಚಾಗುತ್ತಿರುವುದನ್ನು ಗಮನಿಸಿದ ತಹಶೀಲ್ದಾರ್ ಸುದರ್ಶನ್ ಅವರು ಇಂದು ಪ್ರತಿ ಫುಟ್‌ಪಾತ್ಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಿ, ವ್ಯಾಪಾರಿಗಳಿಗೆ ಖಡಕ್ ಎಚ್ಚರಿಕೆ ಯನ್ನು ನೀಡಿದರು.


ಡಿ.ಟಿ ರಾಮು ಸರ್ಕಲ್ ನಲ್ಲಿ ಬಹುತೇಕ ಹಣ್ಣು ಮಾರಾಟಗಾರರು, ಹತ್ತಾರು ತಳ್ಳುವ ಗಾಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದು, ಈಗಾಗಲೇ ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಸಹ ಯಥಾಸ್ಥಿತಿ ಮುಂದುವರಿಸಿದ್ದರಿಂದ ಗರಂ ಆದ ಸುದರ್ಶನ್ ಅವರು ಇದೇ ಕೊನೆಯ ಎಚ್ಚರಿಕೆ,  ವ್ಯಾಪ್ಯಾರಿಗಳು ಆಯಾಯ ಬೀದಿಗಳಲ್ಲಿ ತಳ್ಳುವ ಗಾಡಿಗಳಲ್ಲಿ, ಬೀದಿ ಬೀದಿಗಳಲ್ಲಿ ಮಾತ್ರ ವ್ಯಾಪಾರ ಮಾಡುವಂತೆ ಸೂಚಿಸಿದರು. ಇನ್ನು ಮುಂದೆ ಫುಟ್‌ಪಾತ್ ಗಳಲ್ಲಿ ವ್ಯಾಪಾರ ಮಾಡಿದರೆ, ದಂಡ ವಿಧಿಸಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.


ಭಂಡ ಬಿದ್ದಿರುವ ವ್ಯಾಪಾರಿಗಳು

ಕಳೆದ ಹಲವು ವರ್ಷಗಳಿಂದ ಹೊಸದಾಗಿ ಅಧಿಕಾರಿಗಳು ಬಂದಾಗ ಬೀದಿ ಬದಿಯ ವ್ಯಾಪಾರಿಗಳನ್ನು ವಿಚಲಿತಗೊಳ್ಳುವಂತೆ ಮಾಡುವುದು, ಆಮೇಲೆ ತೆಪ್ಪಗಾಗುವುದು, ನಡೆದು ಕೊಂಡೇ ಬರುತ್ತಿದೆ. ಇದು ಮಾಮೂಲಿ ಎಂಬ ರೀತಿ ಯಲ್ಲಿ ಇಲ್ಲಿನ ಬೀದಿ ಬದಿಯ ವ್ಯಾಪಾರಸ್ಥರೂ ಸಹ ದಪ್ಪ ಚರ್ಮದವರಾಗಿದ್ದಾರೆ.  ಇದು ನಿಲ್ಲಬೇಕು ಎಂದರೆ ಖಡಕ್ ನಿಲುವು ತೆಗದುಕೊಳ್ಳಬೇಕು.


ಒಂದು ಸಾರಿ ಬೀದಿ ಬದಿಯ ವ್ಯಾಪಾರಿಗಳ ಸಂಘ ಮಾಡುವುದಕ್ಕೆ ಸರ್ಕಾರವೇ ಪೂರಕವಾಗಿ ನಿಲ್ಲುವುದು, ಮತ್ತೊಂದು ಸಾರಿ ಅವರನ್ನು ತೆರವು ಗೊಳಿಸುವ ಮಾತನ್ನು ಆಡುವುದೂ ಸಹ ಹಲವು ಗೊಂದಲಗಳಿಗೆ ಕಾರಣವಾಗಿದೆ. ಇವುಗಳನ್ನೂ ಸಹ ಗಂಭೀರವಾಗಿ ಗಮನಿಸಿ ಕೊಂಡು ಸುಧಾರಣೆಯ ಮುಖವಾಗಿ ಆಲೋಚಿಸಬೇಕು.

ಇಲ್ಲಿನಗರಸಭೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳೂ ಸಹ ಸುಧಾರಣಾ ಮುಖವಾಗಿ ಆಲೋಚಿಸಿದ ಸಂದರ್ಭದಲ್ಲಿ ಪೂರಕವಾಗಿ ನಿಂತು ಕೆಲಸ ಮಾಡಬೇಕು. ಅಂತಹ ಸಂದರ್ಭದಲ್ಲಿ ಮಾತ್ರ ಏನಾದರೂ ಸುಧಾರಣೆಯನ್ನು ತರಲು ಸಾಧ್ಯ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑