Tel: 7676775624 | Mail: info@yellowandred.in

Language: EN KAN

    Follow us :


ಚಿರತೆ ಸೆರೆಗೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದ ಅರಣ್ಯ ಸಂರಕ್ಷಣಾಧಿಕಾರಿ

Posted date: 16 May, 2020

Powered by:     Yellow and Red

ಚಿರತೆ ಸೆರೆಗೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದ ಅರಣ್ಯ ಸಂರಕ್ಷಣಾಧಿಕಾರಿ

ರಾಮನಗರ:ಮೇ/೧೬/೨೦/ಶನಿವಾರ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಮಹಿಳೆಯೋರ್ವರು ಚಿರತೆ ದಾಳಿಗೆ ಮೃತಪಟ್ಟಿರುತ್ತಾರೆ. ಈ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯುವವರೆಗೂ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಕೊಟ್ಟಗಾಣಹಳ್ಳಿಯ ೬೨ ವರ್ಷದ ಮಹಿಳೆ ಚಿರತೆ ದಾಳಿಗೆ ಮೃತ ಪಟ್ಟಿರುವ ಹಿನ್ನೆಲೆಯಲ್ಲಿ ಈ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಹಿಡಿಯಲು ಅರಣ್ಯ ಇಲಾಖೆಯು ವಿವಿಧ ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ, ಸಾರ್ವಜನಿಕರು ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಸಾರ್ವಜನಿಕರನ್ನು ಅರಣ್ಯ ಇಲಾಖೆಯು ಎಚ್ಚರಿಸಿದೆ.


ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯ ವತಿಯಿಂದ ಮಾನವ-ಪ್ರಾಣ ಹಾನಿ ಘಟನೆ ನಡೆದ ಸ್ಥಳದ ಸುತ್ತಮುತ್ತ ಕ್ಯಾಮರಾ ಟ್ರ್ಯಾಪ್‌ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸದರಿ ಪ್ರದೇಶದಲ್ಲಿ ಬೋನುಗಳನ್ನು ಇರಿಸಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಇಲಾಖಾ ಕ್ಷೇತ್ರಾಧಿಕಾರಿಗಳು ಹಗಲು-ರಾತ್ರಿ ಈಗಾಗಲೇ ಗಸ್ತು/ಪಹರೆ ತಿರುಗುವಂತೆ ಸೂಚಿಸಲಾಗಿದೆ.


ಚಿರತೆ ಹಾವಳಿ ತಡೆಗಟ್ಟಲು ರಚಿಸಲಾಗಿರುವ ವನ್ಯಪ್ರಾಣಿ ಹಿಮ್ಮೆಟ್ಟಿಸುವ ತಂಡ ಕಾರ್ಯಾಚರಣೆ ತೀವ್ರ ಪ್ರಗತಿಯಲ್ಲಿದೆ. ಹೀಗಾಗಿ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ವನ್ಯಜೀವಿ ಪರಿಪಾಲಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


ಮಕ್ಕಳು, ವೃದ್ಧರು ಮತ್ತು ಮಹಿಳೆಯರು ಯಾವುದೇ ಕಾರಣಕ್ಕೂ ಒಂಟಿಯಾಗಿ ಓಡಾಡತಕ್ಕದ್ದಲ್ಲ. ಗುಂಪಾಗಿ ಚಲಿಸತಕ್ಕದ್ದು ಮತ್ತು ಸಂಜೆ ೦೬ ಗಂಟೆಯೊಳಗೆ ಮನೆಗೆ ಸೇರುವುದು. ಬಯಲು ಬಹಿರ್ದೇಶಿಗೆ ಹೋಗಬಾರದು. ಚಿರತೆಯು ಕಂಡಲ್ಲಿ ಯಾವುದೇ ಕಾರಣಕ್ಕೂ ಹೆಚ್ಚು ಜನ ಸೇರಿ ಗದ್ದಲ ಮಾಡಬಾರದು. ಈ ಬಗ್ಗೆ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.


ದನಗಳನ್ನು ಮೇಯಿಸಲು ಮತ್ತು ಹೊಲಕ್ಕೆ ಹೋದಾಗ ಬಯಲು ಪ್ರದೇಶದಲ್ಲಿ ಕುಳಿತುಕೊಳ್ಳಬೇಕು. ಪೊದೆಗಳ ಬಳಿ ಒಂಟಿಯಾಗಿ ಕೂರಬಾರದು ಹಾಗೂ ಚಿರತೆಯ ಬಗ್ಗೆ ಸದಾಕಾಲ ಎಚ್ಚರಿಕೆಯಿಂದ ಇರಬೇಕು. ಸಂಜೆ ಆರು ಗಂಟೆಯ ನಂತರ ಎಲ್ಲಾ ಸಾಕು ಪ್ರಾಣಿಗಳನ್ನು ಮನೆ ಇಲ್ಲವೆ ಕೊಟ್ಟಿಗೆ ಒಳಗೆ ಕೂಡಿಹಾಕಬೇಕು. ಸಾಕು ಪ್ರಾಣಿಯನ್ನು ಚಿರತೆಯು ಹತ್ಯೆ ಮಾಡಿದಲ್ಲಿ ಅದನ್ನು ಮುಟ್ಟಬಾರದು ಮತ್ತು ಕೂಡಲೆ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು ಇಂದು ತಿಳಿಸಿದೆ.


ಚಿರತೆಯ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಅರಣ್ಯ ಇಲಾಖೆಯ ಸಹಾಯವಾಣಿ ಸಂಖ್ಯೆ: ೧,೯೨೬ ಅಥವಾ ರಾಮನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೊ.ನಂ. 9448381927ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಕೋರಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑