Tel: 7676775624 | Mail: info@yellowandred.in

Language: EN KAN

    Follow us :


ಹನ್ನೊಂದು ಬೋನುಗಳ ಪೈಕಿ ನಾಲ್ಕು ಬೋನುಗಳಲ್ಲಿ ಸೆರೆಯಾದ ಚಿರತೆಗಳು. ಇಂದು ಕರುವಿನ ಕುತ್ತಿಗೆಗೆ ಬಾಯಿ ಹಾಕಿದ ಮತ್ತೊಂದು ಚಿರತೆ

Posted date: 18 May, 2020

Powered by:     Yellow and Red

ಹನ್ನೊಂದು ಬೋನುಗಳ ಪೈಕಿ ನಾಲ್ಕು ಬೋನುಗಳಲ್ಲಿ ಸೆರೆಯಾದ ಚಿರತೆಗಳು. ಇಂದು ಕರುವಿನ ಕುತ್ತಿಗೆಗೆ ಬಾಯಿ ಹಾಕಿದ ಮತ್ತೊಂದು ಚಿರತೆ

ಮಾಗಡಿ:ಮೇ/೧೮/೨೦/ಸೋಮವಾರ. ವಿವಿಧ ಗ್ರಾಮಗಳಲ್ಲಿ ಇಟ್ಟಿದ್ದ ಒಟ್ಟು ೧೧ ಬೋನುಗಳ ಪೈಕಿ ನಾಲ್ಕು ಬೋನುಗಳಲ್ಲಿ ನಾಲ್ಕು ಚಿರತೆಗಳು ಸೆರೆಯಾಗಿವೆ. ಇದರಿಂದ ಸುತ್ತಲಿನ ಗ್ರಾಮಸ್ಥರು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಒಂದೇ ವಾರದಲ್ಲಿ ಬಾಲಕ ಹೇಮಂತ್ ಹಾಗೂ ಕೊತ್ತಗಾನಹಳ್ಳಿ ಗ್ರಾಮದ ವೃದ್ಧೆ ಗಂಗಮ್ಮನವರನ್ನು ನರಭಕ್ಷಕ ಚಿರತೆಗಳು ಬಲಿಪಡೆದಿದ್ದವು. ಗ್ರಾಮಸ್ಥರು ಭಯ ಭೀತರಾಗಿ ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ನೆಲಮಂಗಲ ಮತ್ತು ಮಾಗಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂ ಡಿದ್ದರು.


ಅರಣ್ಯ ಉಪಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ ಮಾರ್ಗದರ್ಶನ ಹಾಗೂ ವಲಯ ಅರಣ್ಯಾಧಿಕಾರಿ ಕೆ.ಪುಷ್ಪಲತಾ ನೇತೃತ್ವದಲ್ಲಿ ಸಿಬ್ಬಂದಿ ಸುಮಾರು ೧೧ ಬೋನ್‌ಗಳನ್ನು ವಿವಿಧ ಗ್ರಾಮದ ಕಾಡಂಚಿನಲ್ಲಿಟ್ಟು ಕಾರ್ಯಾಚರಣೆ ನಡೆಸಿದ್ದರು.ಮೂರು ಗ್ರಾಮಗಳ ಕಾಡಂಚಿನಲ್ಲಿ ಇಟ್ಟಿದ್ದ ಬೋನ್‌ಗೆ ನಾಲ್ಕು ಚಿರತೆಗಳು ಬಿದ್ದಿದ್ದು, ಕಾಡಂಚಿನ ಗ್ರಾಮದ ಜನತೆ ನಿರಾಳದಾಗಿದ್ದಾರೆ.


*ಇಂದು  ಕರುವಿನ  ಮೇಲೆ ಚಿರತೆ ದಾಳಿ*

ರಾಮನಗರ ತಾಲ್ಲೂಕಿನ ಕಟಮಾನದೊಡ್ಡಿ ಗ್ರಾಮದ ಮನೆಯೊಂದರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಇಂದು ಮುಂಜಾನೆ ಮೂರರ ವೇಳೆಗೆ ದೇಸಪ್ಪ ಎಂಬುವರ ಮನೆಯ ಕಾಂಪೌಂಡ್ ಜಿಗಿದ ಚಿರತೆಯೊಂದು ಒಳ ನುಗ್ಗಿ ಕೊಟ್ಟಿಗೆಗೆ ಪ್ರವೇಶಿಸಿ, ಅಲ್ಲಿದ್ದ ಆರು ತಿಂಗಳ ಕರುವಿನ ಕುತ್ತಿಗೆಗೆ ಬಾಯಿ ಹಾಕಿ ಗಾಯಗೊಳಿಸಿದ್ದು, ಹೊತ್ತೊಯ್ಯಲು ಯತ್ನಿಸಿತು.

ಕರುವಿನ ಚೀರಾಟದಿಂದ ಮನೆಯವರು ಎಚ್ಚೆತ್ತಿದ್ದು ಕೊಟ್ಟಿಗೆಯ ಲೈಟ್ ಹಾಕಿ ಹೋದ ಸಂದರ್ಭ ಚಿರತೆ ಅಲ್ಲಿಂದ ಪರಾರಿ ಆಯಿತು ಎಂದು ಸ್ಥಳೀಯರು ತಿಳಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑