ವರ್ಗಾವಣೆಗೊಂಡ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ಚನ್ನಪಟ್ಟಣ:ಮೇ/೧೯/೨೦/ಸೋಮವಾರ. ಇಲ್ಲಿನ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ನ್ಯಾಯಾಧೀಶರಾದ ನಟರಾಜು ಮತ್ತು ಅನ್ನಪೂಣೇಶ್ವರಿ ಯವರು ಬಡ್ತಿ ಮೇಲೆ ವರ್ಗಾವಣೆಯಾಗಿದ್ದಾರೆ. ಅವರನ್ನು ಪ್ರಧಾನ ಸಿವಿಲ್ ನ್ಯಾಯಾಧೀಶೆ ಎರ್ಮಲ್ ಕಲ್ಪನ ಅವರು ನೆನಪಿನ ಕಾಣಿಕೆ ನೀಡಿ, ಶಾಲು ಹೊದಿಸಿ ಸನ್ಮಾನ ಮಾಡಿ ಬೀಳ್ಕೊಟ್ಟರು.
ಸಂದರ್ಭದಲ್ಲಿ ಅವರು ಮಾತನಾಡಿ, ನಿಮ್ಮ ಸೇವೆ ಹಾಗೂ ಜೀವನ ಪಯಣ ಸುಖಕರ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಶುಭ ಹಾರೈಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಟರಾಜು ಅವರು ಬೇರೆ ವೃತ್ತಿಗೂ ವಕೀಲ ವೃತ್ತಿಗೂ ಬಹಳ ವ್ಯತ್ಯಾಸವಿದೆ. ವಕೀಲ ವೃತ್ತಿಗೆ ಸಮಾಜದಲ್ಲಿ ವಿಶಿಷ್ಠ ಗೌರವವಿದೆ. ಆದರೆ ಪರಿ ಶ್ರಮ ಪಡಬೇಕು, ವೃತ್ತಿಪರತೆಯ ಜೊತೆಗೆ ಮಾನವೀಯ ಮೌಲ್ಯಗಳನ್ನೂ ಸಹ ಮೈಗೂಡಿಸಿಕೊಳ್ಳ ಬೇಕು. ಸಾಮಾಜಿಕ ಕಳಕಳಿಯಿಂದ ವೃತ್ತಿ ಮಾಡಿದರೆ ಯಶಸ್ಸು ಎಂದರು.
ನ್ಯಾಯಾಧೀಶೆ ಅನ್ನಪೂಣೇಶ್ವರಿ ಮಾತನಾಡಿ, ನಾವು ಇಲ್ಲಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಎಲ್ಲರೂ ಉತ್ತಮವಾಗಿ ಸಹಕಾರ ನೀಡಿದ್ದೀರಿ ವಕೀಲರು, ಸಿಬ್ಬಂದಿವರ್ಗ ಇವರ ಸಹಕಾರ ಪ್ರೀತಿ, ವಿಶ್ವಾಸ ಸ್ಮರಣಾರ್ಹ ಎಂದರು.
ಬಡ್ತಿ ಹೊಂದಿ ವರ್ಗ ಆಗಿರುವ ಇಬ್ಬರು ನ್ಯಾಯಾ ಧೀಶರ ಸೇವೆಯ ಬಗ್ಗೆ ವಕೀಲರಾದ ಜೆ.ಟಿ ಪ್ರಕಾಶ್, ಟಿ.ಎಂ ಲಕ್ಷಣ್, ಧನಂಜಯ, ಪಿ.ಎಲ್ ನಾರಾಯಣಸ್ವಾಮಿ, ಸುವರ್ಣಮ್ಮ, ಎಂ.ಕೆ ನಿಂಗಪ್ಪ, ಬೋಜೇ ಗೌಡ, ರಂಗನಾಥ್, ವಕೀಲರ ಸಂಘದ ಅಧ್ಯಕ್ಷ ಗಿರೀಶ್ ಮತ್ತು ಕಾರ್ಯದರ್ಶಿ ಶಿವಶಂಕರ್ ಸ್ಮರಿಸಿದರು.
ಸಂದರ್ಭದಲ್ಲಿಕೊರೋನಾ ಸಾವಿಗೀಡಾದವರಿಗೆ ಒಂದು ನಿಮಿಷ ಮೌನ ಆಚರಿಸಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಲಾಯಿತು.ಈ ಸಮಾರಂಭದಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »

ಕ್ಲಸ್ಟರ್ ಪಾರ್ಕಗಳಿಂದ ಹೆಚ್ಚಿನ ಉದ್ಯೋಗ ಸೃಷ್ಟಿ: ಜಗದೀಶ್ ಶೆಟ್ಟರ್
ರಾಮನಗರ:ಜ/20/21/ಬುಧವಾರ. ಕೈಗಾರಿಕಾ ಕ್ಲಸ್ಟರ್ಗಳಿಂದ ಹೆಚ್ಚಿನ ಕೈಗಾರಿಕೆಗಳು ರಚನೆಯಾಗಿ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗ ದೊರೆಯುತ್ತದೆ. ಇದರಿ

ರಾಮನಗರ ಜಿಲ್ಲೆಯಲ್ಲಿ ಮಹಿಳಾ ಕಾಯಕೋತ್ಸವಕ್ಕೆ ಚಾಲನೆ
ರಾಮನಗರ:ಜ/20/21/ಬುಧವಾರ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ (ಮನರೇಗಾ) ಮಹಿಳೆಯರು ಭಾಗವಹಿಸುವಿಕೆ ಹೆಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯ

ಶುಕ್ರವಾರ ಅಂಬೇಡ್ಕರ್ ಭವನ ಉದ್ಘಾನೆ. ಹೆಚ್ ಡಿ ಕುಮಾರಸ್ವಾಮಿ
ಚನ್ನಪಟ್ಟಣ:ಜ/20/21ಬುಧವಾರ. ಈ ತಿಂಗಳ 22 ನೇ ತಾರೀಖಿನ ಶುಕ್ರವಾರದಂದು ನಗರದ ಅಂಬೇಡ್ಕರ್ ಭವನವನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀರಾಮು

ಗುತ್ತಲೆಹುಣಸೆ ಗ್ರಾಮಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ
ರಾಮನಗರ:ಜ/18/21/ಸೋಮವಾರ. ವಸತಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಕನಕಪುರ ತಾಲ್ಲೂಕಿನ ಗುತ್ತಲಹುಣಸೆ ಗ್ರಾಮದಲ್ಲಿರುವ ಶ್ರೀ ಮಲೆ ಮಹದೇಶ್ವರಸ್

ಗಣರಾಜ್ಯೋತ್ಸವ ಹಬ್ಬ ಸರಳವಾಗಿ ಆಚರಿಸಲಾಗುತ್ತದೆ ತಹಶಿಲ್ದಾರ್ ನಾಗೇಶ್
- ಚನ್ನಪಟ್ಟಣ:ಜ/19/21/ಮಂಗಳವಾರ.
ಇದೇ ತಿಂಗಳ 26 ನೇ ತಾರೀಖಿನಂದು ನಡೆಯುವ ಗಣರಾಜ್ಯೋತ್ಸವ ಹಬ್ಬವನ್ನು ಸರಳವಾಗಿ, ಅರ್ಥಪೂರ್ಣವಾಗಿ ಹಾಗೂ ಪ್ರೋಟೋಕಾಲ್ ನಿಯಮಾನುಸಾರ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಆಚ

ಖಾತೆ ರಹಿತ ನೂತನ ಸಚಿವ ಸಿ ಪಿ ಯೋಗೇಶ್ವರ್ ರವರಿಗೆ ಅದ್ದೂರಿ ಸ್ವಾಗತ ಕೋರಿದ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು
ಚನ್ನಪಟ್ಟಣ/ಜ/18/21/ಸೋಮವಾರ. ರಾಜ್ಯದ ಮಂತ್ರಿಯಾಗಿ ಇವತ್ತಿಗೂ ಸಹ ಖಾತೆ ಗಳಿಸದ, ಆಧುನಿಕ ಭಗಿರಥ ಎಂದೇ ಹೆಸರು ಮಾಡಿರುವ ಚನ್ನಪಟ್ಟಣ ಕ್ಷೇತ್ರದ

ಪ್ರಥಮ ಬಾರಿಗೆ ತಾಲ್ಲೂಕಿನ ಇಗ್ಗಲೂರು ಮತ್ತು ನಗರ ಸಾರ್ವಜನಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಇಂದು ಲಸಿಕೆ
ಚನ್ನಪಟ್ಟಣ:ಜ/16/21/ಶನಿವಾರ. ವಿಶ್ವವನ್ನೇ ಗಾಬರಿ ಹುಟ್ಟಿಸಿ, ವಿಶ್ವದಾದ್ಯಂತ ಲಕ್ಷಾಂತರ ಮಂದಿಯನ್ನು ಬಲಿ ಪಡೆದ ಕೊರೊನಾ ಮಾರಿಗೆ ಭಾರತದ

ಜಿಲ್ಲೆಯಲ್ಲಿ ಮೊದಲನೇ ದಿನ 353 ಜನರಿಗೆ ಕೋವಿಡ್-19 ಲಸಿಕೆ
ರಾಮನಗರ:ಜ/16/21/ಶನಿವಾರ. ಕೋವಿಡ್-19 ಲಸಿಕೆ ನೀಡಲು ಪ್ರಾರಂಭವಾದ ಮೊದಲನೇ ದಿನವಾದ ಇಂದು (ದಿನಾಂಕ 16-01-2020) 353 ಜನರಿಗೆ ಲಸಿಕೆ ನೀಡಲಾಗಿ

ರಾಮನಗರ ಜಿಲ್ಲೆಗೆ ಆಗಮಿಸಿದ ಕೊರೋನಾ ಲಸಿಕೆ ಹರ್ಷ ವ್ಯಕ್ತಪಡಿಸಿದ ಜಿಲ್ಲಾಡಳಿತ
ರಾಮನಗರ:ಜ/15/21/ಶುಕ್ರವಾರ. ರಾಮನಗರ ಜಿಲ್ಲೆಗೆ ಶುಕ್ರವಾರ ಬೆಳಿಗ್ಗೆ ಬಂದ 5000 ಕೊರೋನಾ ಲಸಿಕೆ ಬಂತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿ

ಮಕರ ಸಂಕ್ರಾಂತಿ ಹಬ್ಬವು ರಾಶಿ ರಾಸುಗಳ ಜೊತೆಗೆ ಹೆಣ್ಮಕ್ಕಳ ಹಬ್ಬವೂ ಹೌದು ಜಿಲ್ಲಾಧಿಕಾರಿ ಅರ್ಚನಾ
ರಾಮನಗರ:ಜ/14/21/ಗುರುವಾರ. ಮಕರ ಸಂಕ್ರಾಂತಿ ಹಬ್ಬವು ರಾಶಿ, ರಾಸುಗಳ ಜೊತೆಗೆ ರೈತರಿಗೆ ಸುಗ್ಗಿಯ ಹಬ್ಬ. ಹಾಗೆ ಹೆಣ್ಣು ಮಕ್ಕಳಿಗೆ ಬಾಗಿನ ಹಬ್ಬವ
ಪ್ರತಿಕ್ರಿಯೆಗಳು