ಕಮೀಷನರ್ ಸಾಹೆಬ್ರೇ ಇದಕ್ಕೆ ಮುಕ್ತಿ ಯಾವಾಗ ?ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟ ಬೇಡ
ಚನ್ನಪಟ್ಟಣ:ಮೇ/೨೨/೨೦/ಶುಕ್ರವಾರ. ನಗರದ ನಗರಸಭೆ ವ್ಯಾಪ್ತಿಯ ಕೆಂಪೇಗೌಡ ಬಡಾವಣೆ ಹಾಗೂ ಸಿಎಂಸಿ ಲೇಔಟ್ ನಡುವೆ ನಾಲ್ಕು ಕೂಡು ರಸ್ತೆಯಿದ್ದು, ಈ ಕೂಡು ರಸ್ತೆಯಲ್ಲಿ ಶೆಟ್ಟಿಹಳ್ಳಿ ಕೆರೆ ಏರಿಯ ಕೆಳಗಿನ ರಾಜಕಾಲುವೆಗೆ ನಿರ್ಮಿಸಿರುವ ಸೇತುವೆ ಕುಸಿದು ವಾರವಾದರೂ ಸಹ ಯಾವುದೇ ಅಧಿಕಾರಿಗಳು ಇತ್ತ ಸುಳಿಯದೇ ಜಾಣ ಕುರುಡು ಪ್ರದರ್ಶಿಸುತ್ತಿರುವುದು ಇಲಾಖೆಯ ಕೆಲಸಕ್ಕೆ ಹಿಡಿದ ಕನ್ನಡಿಯಾಗಿದೆ.
ಈ ಕೂಡು ರಸ್ತೆಯು ಸಂಪೂರ್ಣವಾಗಿ ರಾಜಕಾಲುವೆಯ ರಸ್ತೆಯಾಗಿದ್ದು, ಒಂದು ಸಿಎಂಸಿ ಲೇಔಟ್ ಗೆ, ಮತ್ತೊಂದು ಕೆಂಪೇಗೌಡ ಬಡಾವಣೆ ಮೂಲಕ ಚರ್ಚ್ ರಸ್ತೆಗೆ ತೆರಳಲಿದ್ದು, ಅದೇ ರಾಜಕಾಲುವೆ ರಸ್ತೆಯ ಮೂಲಕ ಚನ್ನಾಂಬಿಕ ಕಾಲೇಜಿನ ಬಳಿ ಸೇರಲಿದ್ದು, ಪ್ರತಿನಿತ್ಯವೂ ಸಹಸ್ರಾರು ಮಂದಿ ಓಡಾಡುತ್ತಿರುವುದು ಗಮನದಲ್ಲಿದ್ದರೂ, ಸಹ ನಗರಸಭೆಯ ಅಧಿಕಾರಿಗಳು ಶೀಘ್ರವಾಗಿ ಸರಿಪಡಿಸದಿರುವುದು ಯಾಕೆ ಎಂಬುದು ಸ್ಥಳೀಯ ನಿವಾಸಿಗಳ ಯಕ್ಷ ಪ್ರಶ್ನೆಯಾಗಿದೆ.
ಕೋಳಿ, ಮಾಂಸ, ಮೀನು ಹಾಗೂ ಹಲವಾರು ರೀತಿಯ ತ್ಯಾಜ್ಯಗಳಿಂದ ತುಂಬಿ ಸಂಪೂರ್ಣವಾಗಿ ತನ್ನ ನೈಜ ಸ್ವರೂಪವನ್ನೇ ಕಳೆದುಕೊಂಡು ದುರ್ವಾಸನೆ ಬೀರುತ್ತಿರುವ ಶೆಟ್ಟಿಹಳ್ಳಿ ಕೆರೆ ಒಂದೆಡೆಯಾದರೆ, ಅದರ ಸೋರಲು ಮತ್ತು ನಗರದ ಕೊಳಚೆ ನೀರು ರಾಜಕಾಲುವೆ ಮೂಲಕ ಹರಿದು ಬರುವ ನೀರಿನ ಗಬ್ಬುವಾಸನೆ ಒಂದೆಡೆ. ಇದರ ಜೊತೆಗೆ ಮೋರಿ ಕುಸಿದಿರುವುದರಿಂದ ನೀರು ನಿಂತು ರಸ್ತೆಯ ಮೇಲೆಲ್ಲಾ ಹರಿಯುವ ಮುನ್ನಾ ಹಾಗೂ ಸಾರ್ವಜನಿಕರು ಬಿದ್ದು ಪ್ರಾಣ ಕಳೆದುಕೊಳ್ಳುವ ಮುನ್ನವೇ ಸೇತುವೆಯನ್ನು ಮರು ನಿರ್ಮಿಸಿ, ಸಾರ್ವಜನಿಕರನ್ನು ಪ್ರಾಣಾಪಾಯದಿಂದ ರಕ್ಷಿಸುವ ಹೊಣೆ ಪೌರಾಯುಕ್ತರ ಮೇಲಿದೆ.
ಇದು ನನ್ನ ಗಮನಕ್ಕೆ ಬಂದಿಲ್ಲ, ಇಂಜಿನಿಯರ್ ರವರನ್ನು ಕಳುಹಿಸಿ ವರದಿ ತರಿಸಿಕೊಂಡು ನನ್ನ ವ್ಯಾಪ್ತಿಯಲ್ಲೇ ಮುಗಿಯುವುದಾದರೆ ಇಂದೇ ಸರಿಪಡಿಸಲು ಪ್ರಯತ್ನಿಸುತ್ತೇನೆ. ದೊಡ್ಡ ಮಟ್ಟದ್ದಾದರೆ ಟೆಂಡರ್ ಕರೆಯಬೆಕಾಗುತ್ತದೆ. ಪರೀಕ್ಷಿಸಿ ಕ್ರಮ ಕೈಗೊಳ್ಳುತ್ತೇನೆ.
*ಶಿವನಂಕಾರಿಗೌಡ. ಪೌರಾಯುಕ್ತರು, ನಗರಸಭೆ ಚನ್ನಪಟ್ಟಣ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು