ಪ್ರತಿ ವರ್ಷದ ಮಳೆಗಾಲದಲ್ಲೂ ಗಿಡ ನೆಡುತ್ತಾರೆ. ನೆಟ್ಟ ಗಿಡಗಳು ಏನಾಗುತ್ತವೇ ?
ಚನ್ನಪಟ್ಟಣ:ಮೇ/೨೩/೨೦/ಶನಿವಾರ. ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಪ್ರತಿ ವರ್ಷದ ಮಳೆಗಾಲದಲ್ಲಿಯೂ ರಸ್ತೆ ಬದಿ, ಗೋಮಾಳ, ಕೆಲ ಉದ್ಯಾನವನ ಸೇರಿದಂತೆ ಅನೇಕ ಕಡೆ ಸಸಿಗಳನ್ನು ನೆಡುತ್ತಿದ್ದು ಈ ವರ್ಷದ ಮಳೆಗಾಲದಲ್ಲಿಯೂ ಸಹ ಎಲ್ಲಾ ಕಡೆ ನೆಡುತ್ತಿದ್ದಾರೆ. ಆದರೆ ಪ್ರತಿ ವರ್ಷವೂ ಅದೇ ಜಾಗದಲ್ಲಿ ಗಿಡ ನೆಡುತ್ತಿದ್ದು, ಹಿಂದಿನ ವರ್ಷಗಳ ಗಿಡಗಳು ಏನಾದವೂ ? ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಒಂದು ಗಿಡ ನೆಟ್ಟು ಪೋಸಿಸಲು ಇಲಾಖೆ ವತಿಯಿಂದ ವರ್ಷಕ್ಕೆ ಇಂತಿಷ್ಟು ಹಣ ಎಂದು ಬಿಡುಗಡೆಯಾಗುತ್ತದೆ. ಇದರಲ್ಲಿ ಗುಣಿ ತೋಡಲು, ಗೊಬ್ಬರ ಹಾಕಲು, ಬೇಸಿಗೆಯಲ್ಲಿ ನೀರುಣಿಸಲು, ಗಿಡಕ್ಕೆ ಊರುಗೋಲು ನೆಡಲು ಮತ್ತು ಜಾನುವಾರುಗಳು ತಿನ್ನದಂತೆ ಕಾಪಿಡುವುದು ಸೇರಿ ಹಣ ಬಿಡುಗಡೆ ಮಾಡಿರುತ್ತಾರೆ. ಆದರೂ ಪ್ರತಿ ವರ್ಷವೂ ಅದೇ ಜಾಗದಲ್ಲಿ ಗಿಡ ನೆಡುತ್ತಾರೆ ಹೇಗೆ !?
ಪ್ರತಿ ವರ್ಷದ ಮಳೆಗಾಲದಲ್ಲಿಯೂ ಗಿಡ ನೆಡುತ್ತಾರೆ, ಈ ವರ್ಷವೂ ಅದೇ ಹಳೆಯ ಜಾಗದಲ್ಲಿ ಗಿಡ ನೆಡುತ್ತಿದ್ದು, ಉಳಿದುಕೊಂಡಿರುವ ಗಿಡಗಳನ್ನು ಕಿತ್ತೆಸೆದು, ಹೊಸ ಗಿಡಗಳನ್ನು ನೆಡುತ್ತಿದ್ದಾರೆ. ಇದರ ಮರ್ಮವೇನು ? ಕೇವಲ ಇಲಾಖೆಯ ಹಣ ಪಡೆಯಲೋಸುಗ ಈ ರೀತಿಯ ಕೆಲಸ ಮಾಡುತ್ತಿದ್ದಾರೆಯೇ ? ಇಲಾಖೆಯಲ್ಲಿ ಈ ರೀತಿಯಾದ ಕಾನೂನು ಇದೆಯೇ ? ಎಂದು ಪ್ರಶ್ನಿಸುತ್ತಾರೆ ತಾಲೂಕಿನ ಅರಳಾಳುಸಂದ್ರದ ರೈತ ರಾಜೇಶ್ ಎಂಬುವವರು.
*ಸರ್ಕಾರದ ಆದೇಶ ಇದೆ ಹಾಗೂ ಅದರಿಂದ ಹಣ ಬಿಡುಗಡೆ ಆಗುತ್ತಿದೆ, ಹಣ ವಾಪಸು ಕಳುಹಿಸಲಾಗುವುದಿಲ್ಲ. ಗುತ್ತಿಗೆದಾರರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಗಿಡ ನೆಡದೇ, ನೆಟ್ಟ ಗಿಡವನ್ನು ಪೋಷಿಸಿ ಉಳಿಸುವ ಕೆಲಸಕ್ಕೆ ಅಧಿಕಾರಿಗಳು ಗಮನ ನೀಡಬೇಕಾಗಿದೆ.*
ಪ್ರತಿ ವರ್ಷವೂ ಪಿಗ್ಗಿ ಬಿದ್ದ (ಸತ್ತು ಹೋಗಿರುವ) ಗಿಡಗಳ ಪೈಕಿ ಶೇಕಡಾ ೧೦ ರಷ್ಟು ಗಿಡಗಳನ್ನು ನೆಟ್ಟು ಪೋಷಿಸಲು ಅವಕಾಶವಿದೆ. ಎಲ್ಲಾ ಗಿಡಗಳನ್ನು ಕಿತ್ತು ನೆಡುವುದಿಲ್ಲ. ಕಳೆದ ಬಾರಿ ನೆಟ್ಟು ಬೆಳವಣಿಗೆ ಕಾಣದ ಒಂದೆರಡು ಗಿಡಗಳನ್ನು ಹಾಗೆ ಮಾಡಿರಬಹುದು. ನರೇಗಾ ಅಡಿಯಲ್ಲಿ ಈ ವರ್ಷ ಮೂವತ್ತು ಕಿಮೀ ಉದ್ದ ಗಿಡಗ ನೆಡುತ್ತೇವೆ. ಒಂದು ಗಿಡಕ್ಕೆ ತೊಂಭತ್ತು ರೂಪಾಯಿ ಖರ್ಚು ಬೀಳುತ್ತಿದ್ದು ಕಾಪಾಡುವ ಹೊಣೆಯೂ ನಮ್ಮ ಮೇಲಿದೆ.ಕಾಪಾಡುತ್ತೇವೆ.
*ಚೈತ್ರಾ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಚನ್ನಪಟ್ಟಣ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು