ನಗರದಲ್ಲಿ ನರರ ಮೇಲೆ ಅಟ್ಯಾಕ್ ಮಾಡಿದ ಕರಡಿ; ಸಾವು ಬದುಕಿನ ಹೋರಾಟದಲ್ಲಿ ವೃದ್ದೆ. ವಾಕಿಂಗ್ ಪ್ರಿಯರು ಥರಥರ
ಚನ್ನಪಟ್ಟಣ:ಮೇ/೨೭/೨೦/ಬುಧವಾರ. ನಗರದ ಸುಣ್ಣದ ಕೇರಿ ಗೆ ಇಂದು ಬೆಳಗಿನ ಜಾವ ಮೂರು ಗಂಟೆಗೆ ಕರಡಿಯೊಂದು ಬಂದಿದ್ದು, ಬೆಳಗಿನ ಆರು ಗಂಟೆಯಲ್ಲಿ ಮನೆಯಿಂದ ಹೊರಗೆ ಬಂದ ಮಾಜಿ ನಗರಸಭಾ ಸದಸ್ಯೆ ಸಾಕಮ್ಮ (೬೫) ಎಂಬ ವೃದ್ದೆಯ ಮೇಲೆ ಅವರದೇ ಮನೆಯ ಕಾಂಪೌಂಡ್ ನಲ್ಲಿ ಅಡಗಿದ್ದ ಕರಡಿಯು ಎರಗಿದೆ. ಅವರ ಸಂಪೂರ್ಣ ಮುಖವನ್ನು ಪರಚಿದ್ದು. ಸಹಾಯಕ್ಕೆ ತೆರಳಿದ ಅವರ ಪುತ್ರ ಸುಧೀರ್ (೪೦) ಗೂ ಸಹ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ, ಸಾಕಮ್ಮ ನವರನ್ನು ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಮಹಮ್ಮದ್ ಮನ್ಸೂರ್ ತಿಳಿಸಿದ್ದಾರೆ.
ಬೆಳಗಿನ ಜಾವ ಮೂರು ಗಂಟೆಗೆ ಮಾಹಿತಿ ಪಡೆದ ಅರಣ್ಯ ಮತ್ತು ಪೋಲಿಸ್ ಇಲಾಖೆಗಳು ಆ ಭಾಗದ ಜನರಿಗೆ ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಿದ್ದರೂ ಸಹ ಬೆಳಗಿನ ಜಾವ ಈ ಕೃತ್ಯ ನಡೆದಿರುವುದು ನಗರದ ಜನರನ್ನು ಬೆಚ್ಚಿ ಬೀಳಿಸಿದೆ.
ಇದು ಹಣ್ಣಿನ ಕಾಲವಾಗಿರುವುದರಿಂದ ಹಲಸಿನ ಹಣ್ಣನ್ನು ಅರಸಿ ಬಂದಿದ್ದು, ಜನರ ಗಾಬರಿಗೆ ಬಿದ್ದು ಭಯದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿರಬಹುದು. ಸದ್ಯ ಕಾರ್ಯಾಚರಣೆಗೂ ಸಿಗದೇ ದೇವರಹಳ್ಳಿ ಮೂಲಕ ಅಬ್ಬೂರುಗುಡ್ಡೆ ಕಡೆಗೆ ತೆರಳಿದೆ. ಇತ್ತೀಚಿಗೆ ಮತ್ತೀಕೆರೆ ಗ್ರಾಮಕ್ಕೂ ಬಂದಿದ್ದು ಅದೇ ಕರಡಿ ಬಂದಿದೆಯಾ ಎಂಬ ಅನುಮಾನವು ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೊಜ್ಜು ಕರಗಿಸಲು ಬೆಳಗಿನ ಜಾವ ನಾಲ್ಕು ಗಂಟೆಗೆ ವಾಕಿಂಗ್ ಹೆಸರಿನಲ್ಲಿ ರಸ್ತೆಗಿಳಿಯುವ ವಾಕಿಂಗ್ ಪ್ರಿಯರನ್ನು ಸಹ ಈ ಘಟನೆ ಬೆಚ್ಚಿ ಬೀಳಿಸಿದೆ. ಚನ್ನಪಟ್ಟಣ ಕ್ಕೆ ಸೇರಿದ (ಸ್ವಲ್ಪ ಭಾಗ) ತೆಂಗಿನಕಲ್ಲು ಅರಣ್ಯ ಪ್ರದೇಶ ಸೇರಿದಂತೆ ಚನ್ನಪಟ್ಟಣ ಅರಣ್ಯ ಪ್ರದೇಶದಲ್ಲಿಯೇ ಎಪ್ಪತ್ತರಿಂದ ಎಂಭತ್ತು ಚಿರತೆಗಳು ಹಾಗೂ ಅರವತ್ತರಿಂದ ಎಪ್ಪತ್ತು ಕರಡಿಗಳು ಇರಬಹುದು ಎಂದು ಅಂದಾಜಿದೆ.
ವಾಕಿಂಗ್ ಹೋಗುವವರು ಬೆಳಕಾದ ನಂತರ ಕನಿಷ್ಟ ನಾಲ್ಕರಿಂದ ಐದು ಮಂದಿ ಅಂತರ ಕಾಯ್ದುಕೊಂಡು ವಾಕಿಂಗ್ ಹೋಗಿ. ಒಬ್ಬೊಬ್ಬರೇ ಹಾಗೂ ಬೆಳಗಾಗುವ ಮುಂಚೆ ವಾಕಿಂಗ್ ಬೇಡ. *ದಂಡಾಧಿಕಾರಿ ಸುದರ್ಶನ್.
ರಾತ್ರಿ ವಿಷಯ ತಿಳಿದ ನಂತರ ನಗರ ವೃತ್ತ ನಿರೀಕ್ಷಕ ಗೋವಿಂದರಾಜು ಮತ್ತು ಸಿಬ್ಬಂದಿಗಳು ಹಾಗು ಅರಣ್ಯಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಆದರೂ ಈ ಘಟನೆ ಆಘಾತ ತಂದಿದೆ.
*ಪುರುಷೋತ್ತಮ. ಪ್ರಭಾರ ಡಿವೈಎಸ್ಪಿ. ಚನ್ನಪಟ್ಟಣ*
ನಗರಕ್ಕೆ ಕರಡಿ ದಾಳಿ ಮಾಡಿರುವುದು ಆಘಾತ ತಂದಿದೆ. ಅರಣ್ಯಾಧಿಕಾರಿಗಳ ಜೊತೆ ಸಮಾಲೋಚಿಸಿ, ನಮ್ಮ ಮಿತಿಯಲ್ಲಿ ಏನು ಸಹಕಾರ ನೀಡಲು ಸಾಧ್ಯವೋ ಅದನ್ನು ನೀಡಲು ಬದ್ದರಾಗಿದ್ದೇವೆ.
*ಶಿವನಂಕಾರಿಗೌಡ. ಪೌರಾಯುಕ್ತರು. ಚನ್ನಪಟ್ಟಣ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು