ಮಕ್ಕಳ ಲಸಿಕಾ ಕಾರ್ಯಕ್ರಮ ಹೆಚ್ಚಿನ ಆದ್ಯತೆ ನೀಡಿ: ಜಗದೀಶ್
ರಾಮನಗರ:ಮೇ/೨೮/೨೦/ಗುರುವಾರ. ಕೊರೊನಾ (ಕೋವಿಡ್-೧೯) ಹಿನ್ನೆಲೆಯಲ್ಲಿ ಏಪ್ರಿಲ್ ಮಾಹೆಯಲ್ಲಿ ಮಕ್ಕಳಿಗೆ ಲಸಿಕೆ ನೀಡಲು ತೊಂದರೆಯಾಗಿರುತ್ತದೆ. ಜಿಲ್ಲೆಯ ಎಲ್ಲಾ ಮಕ್ಕಳಿಗೆ ಲಸಿಕೆ ನೀಡಲು ಹೆಚ್ಚಿನ ಆದ್ಯತೆ ನೀಡಿ ಮುಂದಿನ ತಿಂಗಳೊಳಗಾಗಿ ಶೇ. ೧೦೦ ರಷ್ಟು ಸಾಧನೆಯಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಗದೀಶ್ ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್-೧೯ ರ ಹಿನ್ನೆಲೆಯಲ್ಲಿ ಜಿಲ್ಲೆಗೆ ಬಹಳಷ್ಟು ಜನರು ಹಿಂದಿರುಗಿರುತ್ತಾರೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗಬಾರದು. ಆಶಾ ಕಾರ್ಯಕತೆಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಮಕ್ಕಳಿಗೆ ಲಸಿಕೆ ನೀಡಬೇಕು. ಜಿಲ್ಲೆಯಲ್ಲಿ ಗರ್ಭೀಣಿಯರ ಆರೋಗ್ಯ ತಪಾಸಣೆಗಳು ಸಹ ಸರಿಯಾದ ಸಮಯದಲ್ಲಿ ಸರಿಯಾದ ರೀತಿಯಲ್ಲಿ ನಡೆಯಬೇಕು. ಅವರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದರು. ಜಿಲ್ಲೆಯಲ್ಲಿ ಒಂದು ಕೋವಿಡ್-೧೯ ಪ್ರಕರಣ ಕಂಡುಬಂದಿದ್ದು, ಇದು ಹರಡದಂತೆ ಕ್ರಮಕೈಗೊಳ್ಳಬೇಕು. ಮಳೆ ಪ್ರಾರಂಭವಾಗಿದ್ದು, ಬೇರೆ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುತ್ತದೆ. ಈ ಬಗ್ಗೆ ಕೂಡ ಹೆಚ್ಚಿನ ನಿಗಾ ವಹಿಸಿ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್ ಅವರು ಮಾತನಾಡಿ ಲಸಿಕೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಚುರುಕುಗೊಳಿಸಲಾಗದೆ ಮುಂದಿನ ಮಾಹೆಯೊಳಗಾಗಿ ಶೇ. ೧೦೦ ರಷ್ಟು ಸಾಧನೆ ಮಾಡಲಾಗುವುದು. ಜಿಲ್ಲೆಯಲ್ಲಿ ಕೋವಿಡ್-೧೯ ಒಂದು ಪ್ರಕರಣ ಎರಡು ವರ್ಷದ ಮಗುವಿನಲ್ಲಿ ಕಂಡುಬಂದಿದ್ದು, ೧೧ ಪ್ರಾಥಮಿಕ ೨೬ ದ್ವಿತೀಯ ಸಂಪರ್ಕ ಹೊಂದಿರುವವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಕಂಟೈನ್ಮೆಂಟ್ ಜೋನ್ನಲ್ಲಿ ಐದು ಮನೆಗಳು ಹಾಗೂ ಬಫರ್ ಜೋನ್ನಲ್ಲಿ ೮೫ ಮನೆಗಳಿದ್ದು, ಅವರ ಮೇಲೆ ನಿಗಾವಹಿಸಲಾಗುತ್ತಿದೆ ಎಂದರು.
ಜಂಟಿ ಕೃಷಿ ನಿರ್ದೇಶಕ ರವಿ ಮಾತನಾಡಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಪ್ರಾರಂಭವಾಗಿದ್ದು, ೩.೧% ಬಿತ್ತನೆಯಾಗಿರುತ್ತದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಅಗತ್ಯ ದಾಸ್ತಾನು ಇರುತ್ತದೆ. ಗಾಳಿ ಮಳೆಯಿಂದ ೧೦ ಎಕರೆ ೩೫ ಗುಂಟೆ ಬೆಳೆ ನಾಶವಾಗಿರುವ ವರದಿ ಬಂದಿದ್ದು, ಇದನ್ನು ಪರಿಶೀಲಿಸಲಾಗುತ್ತಿದೆ. ಈ ಸಾಲಿನಲ್ಲಿ ೭೬ ಗ್ರಾಮಗಳಲ್ಲಿ ಮಣ್ಣಿನ ಆರೋಗ್ಯ ಚೀಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ೭೬ ಗ್ರಾಮಗಳಲ್ಲಿ ಮಣ್ಣಿನ ಮಾದರಿಗಳನ್ನು ಪರೀಕ್ಷಿಸಿ ರೈತರಿಗೆ ಮಣ್ಣಿನ ಪೋಷಕಾಂಶಗಳು ಹಾಗೂ ಬೆಳೆ ಬೆಳೆಯುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮಾತನಾಡಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸರ್ಕಾರ ನೀಡಿರುವ ಸೂಚನೆಯಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಬೇಕು. ಹೆಚ್ಚಿನ ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಶಾಲಾ ಮುಖ್ಯೋಪಾಧ್ಯಾಯರ ಸಭೆ ನಡೆಸಿ ಜಿಲ್ಲೆಯಿಂದ ಹೊರಗಿದ್ದು ಹೊರ ಜಿಲ್ಲೆಯಲ್ಲಿ ಮಕ್ಕಳು ಪರೀಕ್ಷೆ ಬರೆಯಲು ಇಚ್ಛಿಸಿದರೆ ವ್ಯವಸ್ಥೆ ಮಾಡಬೇಕು. ಪರೀಕ್ಷೆ ಬರೆಯುವ ಮಕ್ಕಳಿಗೆ ಯಾವುದೇ ತೊಂದರೆ ಇದ್ದರೂ ಕರೆ ಮಾಡಿ ಮಾಹಿತಿ ನೀಡಲು ಜಿಲ್ಲೆಯಲ್ಲಿ ಸಹಾಯವಾಣಿ ಪ್ರಾರಂಭಿಸಬೇಕು. ಎಸ್.ಎಸ್.ಎಲ್.ಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಕೆ.ಎಸ್.ಆರ್.ಟಿ.ಸಿ ಬಸ್ನಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಎಲ್ಲಾ ಎಸ್.ಎಸ್.ಎಲ್.ಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಅಥವಾ ಅವರ ಪೋಷಕರಿಗೆ ಕರೆ ಮಾಡಿ ಪರೀಕ್ಷೆ ಬರೆಯಲು ಯಾವುದಾದರೂ ತೊಂದರೆಯಿದ್ದಲ್ಲಿ ತಿಳಿದುಕೊಂಡು ಪರಿಹರಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ ಉಲ್ಲಾ ಷರೀಫ್, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು