Tel: 7676775624 | Mail: info@yellowandred.in

Language: EN KAN

    Follow us :


ಬಿಜೆಪಿ ಬಾಗಿಲು ತಟ್ಟುತ್ತಿರುವ ಇಬ್ಬರು ದಳೀಯರು ? ಹೋದರೆ ಆನಂದ ! ಉಳಿದ ದಳೀಯರ ಸಂತಸದ ನುಡಿ.

Posted date: 29 May, 2020

Powered by:     Yellow and Red

ಬಿಜೆಪಿ ಬಾಗಿಲು ತಟ್ಟುತ್ತಿರುವ ಇಬ್ಬರು ದಳೀಯರು ? ಹೋದರೆ ಆನಂದ ! ಉಳಿದ ದಳೀಯರ ಸಂತಸದ ನುಡಿ.

ಚನ್ನಪಟ್ಟಣ:ಮೇ/೨೯/೨೦/ಶುಕ್ರವಾರ. ತಾಲ್ಲೂಕಿನ ಈರ್ವ ಜನತಾ ದಳದ ನಾಯಕರು ಮಾಜಿ ಶಾಸಕರ ಬಣ್ಣದವರು ಎಂದೇ ಪರಿಚಿತರಾಗಿರುವ ಆಪ್ತನ ಸಹಾಯದಿಂದ ಮಾಜಿ ಶಾಸಕರ ಮನೆಗೋಗಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡು ನನ್ನ ಹಳೆಯ ಸ್ಥಾನವನ್ನಾದರೂ ಗಟ್ಟಿಗೊಳಿಸಕೊಡಬೇಕೆಂದು ಗೋಗರೆದಿದ್ದಾರೆ ಎಂದು ಜೆಡಿಎಸ್ ನ ಉಳಿದ ನಾಯಕರು ಚರ್ಚೆಯಲ್ಲಿ ತೊಡಗಿದ್ದು ಹಲವಾರು ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತಲ್ಲಿ ಉತ್ಸಾಹ ತುಂಬಿರುವುದು ಕಂಡು ಬರುತ್ತಿದೆ.


ಬಣ್ಣದವರೊಬ್ಬರ ಮೂಲಕ ಬ್ಯಾಂಕ್ ನ ಮಾಜಿ ಅಧ್ಯಕ್ಷ ಹಾಗೂ ಅಂದಕಾಲದಲ್ಲೇ ಎಂಎಲ್ಎ ಸೀಟನ್ನು ಗಟ್ಟಿಗೊಳಿಸಿಕೊಂಡು ತಪ್ಪಿಸಿಕೊಂಡಿದ್ದ ನಾಯಕರಿಬ್ಬರೂ ಸ್ಥಳೀಯ ಮಾಜಿ ಶಾಸಕರೊಬ್ಬರ ಮನೆಗೋಗಿ ಬಿಜೆಪಿ ಗೆ ಸೇರಿಸಿಕೊಳ್ಳುವಂತೆ ದುಂಬಾಲು ಬಿದ್ದಿದ್ದು, ಅವರು ನಾನೇ ಈಗ ಅತಂತ್ರ ಸ್ಥಿತಿಯಲ್ಲಿದ್ದೇನೆ. ನಿಮ್ಮನ್ನು ದಡ ಸೇರಿಸುತ್ತೇನೆ ಎಂಬ ಭರವಸೆ ಇಲ್ಲ ಎಂಬುದಾಗಿ ಕೈಚೆಲ್ಲಿದರಂತೆ.


ನಂತರ ಈಗ ಮಂತ್ರಿಯಾಗಿರುವ ಸ್ಥಳೀಯ ನಾಯಕರೊಬ್ಬರ ಮನೆಗೆ ಭೇಟಿ ನೀಡಿ ಅವರ ಮುಂದೆಯೂ ಮಂಡಿಯೂರಿದ್ದರಂತೆ, ಆ ನಾಯಕರು ಅಳೆದು ತೂಗಿ, ಅವರ ಬೇಡಿಕೆಯನ್ನು ಗಮನಿಸಿ ನಾಯಕರ ಬಳಿ ಮಾತನಾಡಿ ತಿಳಿಸುತ್ತೇನೆ ಎಂದು ಅಭಯ ನೀಡಿದ್ದಾರಂತೆ !


ಈ ವಿಷಯ ತಿಳಿದ ಹಲವಾರು ದಳೀಯ ಮುಖಂಡರು ಹಾಗೂ ನಿಷ್ಠಾವಂತ ಕಾರ್ಯಕರ್ತರು ಕುಣಿದು ಕುಪ್ಪಳಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಲು ಸಜ್ಜಾಗುತ್ತಿದ್ದಾರಂತೆ ! ?

ಈ ಈರ್ವರಿಂದ ಪಕ್ಷಕ್ಕೆ ನಷ್ಟವೇ ಹೊರತು, ಇವರಿಂದ ಲಾಭವಂತೂ ಇಲ್ಲ. ಕೇವಲ ಸ್ವಹಿತಕ್ಕಾಗಿ, ಪಕ್ಷದ ಮುಖಂಡರು ಬಂದಾಗ ಮಾತ್ರ ಬಗಲಲ್ಲಿ ನಿಂತು ಫೋಸ್ ಕೊಡುತ್ತಾರೆ. ಪ್ರತಿ ಎಲೆಕ್ಷನ್ ನಲ್ಲೂ ದುಡ್ಡು ಮಾಡಿಕೊಂಡು ಓಟ್ನೂ ಬೇರೆಯವರಿಗೆ ಕೊಡುಸ್ತಾನೆ ಎಂದು ಕುಹಕವಾಡ್ತಿದ್ದಾರಂತೆ.?


ಇತ್ತ ಬಿಜೆಪಿ ಪಕ್ಷದ ಸ್ಥಳೀಯ ನಾಯಕರೂ ಸಹ ಮೇಲ್ನೋಟಕ್ಕೆ ತತ್ವ ಸಿದ್ಧಾಂತಗಳನ್ನು ಒಪ್ಪಿ ಬರುವುದಾದರೆ ಅಪ್ಪಿಕೊಳ್ಳುತ್ತೇವೆ ಎಂದರೂ ಸಹ ಅವರಾರು ಎಂಬುದನ್ನು ಗಮನಿಸಿದ ನಂತರ ತಮ್ಮ ಬೇಗುದಿಯನ್ನು ಹೊರ ಹಾಕಲಾರದೆ ಪಕ್ಷದ ಮುಖಂಡರಿಗೆ ಬಿಟ್ಟಿದ್ದು ಎಂದು ಮಾತು ತೇಲಿಸುತ್ತಿರುವುದು ಕಂಡು ಬರುತ್ತಿದೆ.


ಆ ಪಕ್ಷದಲ್ಲಿ ಇದ್ದುಕೊಂಡೇ ಅದೇ ಪಕ್ಷದವರಿಗೆ ದ್ರೋಹ ಮಾಡುವ ಅವರು ನಮ್ಮನ್ನು ಬಿಟ್ಟಾರೆಯೇ ? ಎಂಬ ದುಗುಡ ವ್ಯಕ್ತಪಡಿಸುವ ಅವರು ರಾಜಕೀಯದಲ್ಲಿ ಶಾಶ್ವತವಾಗಿ ಯಾರೂ ಮಿತ್ರರೂ ಇಲ್ಲ, ಶತೃವೂ ಇಲ್ಲ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಇವೆಲ್ಲವೂ ಈಗಾಗಲೇ ಸಾಧ್ಯವಾಗಿರುವುದರಿಂದ ನಮ್ಮಲ್ಲೂ ಇದು ಸಹಜ ಪ್ರಕ್ರಿಯೆ ಎಂದು ಮುಗುಮ್ಮಾಗಿ ಹೇಳಿ ಮೌನಕ್ಕೆ ಶರಣಾಗುತ್ತಿದ್ದಾರೆ.


*ಮುಂದಿನದನ್ನು ತೆರೆಯ ಮೇಲೇಯೇ ವೀಕ್ಷಿಸೋಣಾ !?*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑