ಬಗಲಲ್ಲೇ ಜಾಗ ಹುಡುಕುವ ನಾಯಕರು ಕುಮಾರಣ್ಣ ಬಂದಾಗ ತಪ್ಪಿಸಿಕೊಂಡಿದ್ದೇಕೆ. ಬಿಜೆಪಿ ಸೇರುವ ಗುಟ್ಟನ್ನು ಅವರೇ ಬಯಲು ಮಾಡಿದರೇ!?
ಚನ್ನಪಟ್ಟಣ:ಜೂ/೦೪/೨೦/ಗುರುವಾರ. ಕಳೆದವಾರ ತಾಲ್ಲೂಕಿನ ಈರ್ವ ದಳದ ಮುಖಂಡರು ಬಿಜೆಪಿ ಪಕ್ಷದ ಕದ ತಟ್ಟುತ್ತಿದ್ದು, ಆ ಪಕ್ಷ ಸೇರಿ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ದಳದ ಕೆಲ ಮುಖಂಡರು ಹಾಗೂ ನಿಷ್ಠಾವಂತ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿ ಮೇರೆಗೆ ಸುದ್ದಿ ಪ್ರಕಟಿಸಿದ್ದೆವು. ಆಂತರಿಕ ವಿಷಯವನ್ನರಿತಿದ್ದ ದಳದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಇದನ್ನು ಸಂಪೂರ್ಣವಾಗಿ ಒಪ್ಪಿಕೊಂಡಿದ್ದರು.
ಮೊನ್ನೆ ತಾಲ್ಲೂಕಿನಲ್ಲಿ ಮಳೆಗಾಳಿಗೆ ಬೆಳೆ ಕಳೆದುಕೊಂಡ ಕೃಷಿಕರಿಗೆ ಪರಿಹಾರ ಚೆಕ್ ವಿತರಣೆ ಹಾಗೂ ಕೃಷಿ ಇಲಾಖೆಯ ಯಂತ್ರಧಾರೆ ಯೋಜನೆಗೆ ಚಾಲನೆ ನೀಡಲು ಬಂದಿದ್ದ ಕುಮಾರಸ್ವಾಮಿ ಯವರ ಬಳಿ ತಾಲ್ಲೂಕಿನ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಎಂದಿನಂತೆ ಮುಗಿಬಿದ್ದಿದ್ದರೂ ಸಹ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಲಿಂಗೇಶ್ ಕುಮಾರ್ ಮತ್ತು ಸಿಂಗರಾಜಪುರ ದ ರಾಜಣ್ಣ (ಲಿಂಗರಾಜು) ಮಾತ್ರ ಕಾಣಿಸಿಕೊಳ್ಳಸಿರುವುದು, ಬಿಜೆಪಿ ಪಕ್ಷದ ಕದ ತಟ್ಟುತ್ತಿರುವುದು ಸತ್ಯ ಎಂಬುದನ್ನು ಸಾಬೀತು ಪಡಿಸಿವೆ ಎಂದು ಹಲವು ನಾಯಕರು ಮತ್ತು ಕಾರ್ಯಕರ್ತರ ಮಾತಿಗೆ ಪುಷ್ಟಿ ನೀಡಿದ್ದವು.
ಹೆಚ್ ಡಿ ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಹಾಗೂ ಅನಿತಾ ಕುಮಾರಸ್ವಾಮಿ ಅಷ್ಟೇ ಯಾಕೆ ಇತ್ತೀಚಿಗೆ ರಾಜಕೀಯದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಯತ್ನಿಸುತ್ತಿರುವ ನಿಖಿಲ್ ತಾಲ್ಲೂಕಿಗೆ ಬಂದರೆ ಸಾಕು ಲಿಂಗೇಶಕುಮಾರ್ ಬಗಲಲ್ಲಿ ನಿಂತು ಪೋಸ್ ಕೊಡುತ್ತಿದ್ದುದು ಸರ್ವೇಸಾಮಾನ್ಯ. ಸರ್ಕಾರದ ಪ್ರತಿನಿಧಿಯಾಗಿ, ಖಾಸಗಿಯಾಗಿ ಅಥವಾ ಯಾವುದೋ ಸಂಘಸಂಸ್ಥೆಗಳ ಕಾರ್ಯಕ್ರಮಕ್ಕೆ ಬಂದರೂ ಸಹ ಅವರು ಹಾಜರಿರುತ್ತಿದ್ದರು. ಆದರೆ ಮೊನ್ನೆ ಮಾತ್ರ ಕಾಣಿಸದೇ ಇರುವುದು ಯಾಕೆ ಎಂಬುದು ಕುತೂಹಲ ಹುಟ್ಟಿಸಿದೆ.
ನಗರದಲ್ಲಿರಲಿ ಸಿಂಗರಾಜಪುರಕ್ಕೆ ಹೋದಾಗಲು ಸಹ ರಾಜಣ್ಣ ನವರು ಕಾಣಿಸಲಿಲ್ಲ. ಪಕ್ಕದ ಗ್ರಾಮದವರೇ ಆದ ಲಿಂಗೇಶ್ ಕುಮಾರ್ ಸಹ ಅಲ್ಲಿಯೂ ಹಾಜರಾಗಲಿಲ್ಲ. ಇವೆಲ್ಲವನ್ನೂ ಗಮನಿಸಿದರೆ ಈ ಈರ್ವರೂ ಬಿಜೆಪಿ ಪಕ್ಷಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎಂಬ ಊಹಾಪೋಹಗಳು ಸುಳ್ಳಲ್ಲ ಎಂಬುದು ಗುಟ್ಟಾಗಿ ಉಳಿದಿಲ್ಲ.
ಲಿಂಗೇಶ್ ಕುಮಾರ್ ಮತ್ತು ರಾಜಣ್ಣ ನವರು ಕಾರ್ಯಕರ್ತರ ಊಹಾಪೋಹಗಳಿಗೆ ಯಾವ ರೀತಿ ಸಮರ್ಥನೆ ನೀಡುತ್ತಾರೆ ಎಂದು ಕಾದು ನೋಡಬೇಕಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು