ಬಿಐಎಎಲ್: ಕೆಂಪೇಗೌಡರ ೧೦೮ ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ೨೭ ರಂದು ಪೂಜೆ; ಅಶ್ವಥ್ ನಾರಾಯಣ
ಬೆಂಗಳೂರು:ರಾಮನಗರ:ಜೂ/೦೫/೨೦/ಶುಕ್ರವಾರ. ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ, ನಾಡಪ್ರಭು ಕೆಂಪೇಗೌಡರ ೧೦೮ ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಇದೇ ತಿಂಗಳ ೨೭ ರಂದು ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಶುಕ್ರವಾರ ಇಲ್ಲಿ ತಿಳಿಸಿದರು.
ಈ ಕುರಿತು ಇಲ್ಲಿ ನಡೆದ ಅಧಿಕಾರಿಗಳ ಸಭೆ ಬಳಿಕ ಅವರು ಮಾತನಾಡಿದರು.
ಜೂನ್ ೨೭ ರಂದು ಕೆಂಪೇಗೌಡರ ೫೧೧ ನೇ ಜಯಂತಿ ಇದೆ. ಹೀಗಾಗಿ ಅಂದು ಭೂಮಿ ಪೂಜೆ ಇಟ್ಟುಕೊಂಡಿದ್ದು, ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚಿಸಿದ ನಂತರ ಅಂತಿಮಗೊಳಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ವಿಧಾನಸೌಧ ಮತ್ತು ವಿಕಾಸಸೌಧದ ಮಧ್ಯೆ ಇರುವ ಗಾಂಧೀಜಿ ಪ್ರತಿಮೆಯನ್ನು ನಿರ್ಮಾಣ ಮಾಡಿದ ಖ್ಯಾತ ಕಲಾವಿದ ಅನಿಲ್ ರಾಮಸುತಾರ್ ಅವರಿಗೇ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೂ ಗುತ್ತಿಗೆ ನೀಡುತ್ತಿದ್ದು, ಸದ್ಯದಲ್ಲೇ ಅವರೊಟ್ಟಿಗೆ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ ಎಂದರು.
ಪ್ರತಿಮೆ ನಿರ್ಮಾಣಕ್ಕೆ ಅಂದಾಜು ೬೬ ಕೋಟಿ ರೂಪಾಯಿ ಬೇಕಾಗುತ್ತದೆ. ಪ್ರತಿಮೆಯ ಮಾದರಿ ಸಿದ್ಧವಾಗಿದ್ದು, ಅದನ್ನು ಮುಖ್ಯಮಂತ್ರಿಯವರಿಗೆ ತೋರಿಸಿದ ನಂತರ ಅಂತಿಮಗೊಳಿಸಲಾಗುವುದು. ಕಾಮಗಾರಿಯನ್ನು ಒಂದು ವರ್ಷದಲ್ಲಿ ಮುಗಿಸುವ ಉದ್ದೇಶ ಇದೆ ಎಂದು ಅವರು ಹೇಳಿದರು.
ಪ್ರತಿಮೆ ಸ್ಥಳಕ್ಕಾಗಿಯೇ ವಿಮಾನ ನಿಲ್ದಾಣದ ಮುಂದಿನ ೨೩ ಎಕರೆ ಜಾಗವನ್ನು ಗುರುತಿಸಿದ್ದು, ಅಲ್ಲಿ ಕಾಮಗಾರಿ ಆರಂಭಿಸುವುದಕ್ಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ಒಪ್ಪಿಗೆಯೂ ನೀಡಿದೆ. ಪ್ರತಿಮೆ ಸುತ್ತ ವಿಶೇಷ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಒಟ್ಟಾರೆ ೮೦ ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದು, ಪ್ರಮುಖ ಆಕರ್ಷಣೆಗಳಲ್ಲಿ ಇದು ಕೂಡ ಒಂದಾಗಲಿದೆ ಎಂದರು.
*ಸಮಾಧಿ ಅಭಿವೃದ್ಧಿ:*
ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿ ಕೆಂಪೇಗೌಡರ ಸಮಾಧಿ ಇದ್ದು, ಅದರ ಅಭಿವೃದ್ಧಿಗೆ ೪೧ ಕೋಟಿ ರೂಪಾಯಿ ವೆಚ್ಚದ ಯೋಜನೆ ಸಿದ್ಧಪಡಿಸಲಾಗಿದೆ. ಸಮಾಧಿ ಜತೆಗೆ ಅದರ ಸುತ್ತಲಿನ ಪ್ರದೇಶ ಮತ್ತು ಊರಿನ ಕೆರೆಯನ್ನು ಕೂಡ ಅಭಿವೃದ್ಧಿಪಡಿಸಲಾಗುವುದು. ಈ ಸಲುವಾಗಿ ಭೂಸ್ವಾಧೀನ ಮಾಡುತ್ತಿದ್ದು, ಇದಕ್ಕೆ ಅಂದಾಜು ೧೭ ಕೋಟಿ ಬೇಕಾಗುತ್ತದೆ ಎಂದರು.
ಈ ಎರಡೂ ಯೋಜನೆಗಳಿಗೆ ಐಡೆಕ್ ಸಂಸ್ಥೆ, ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಿದೆ.
ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮೂಲಸೌಲಭ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ಪಿ.ಪ್ರದೀಪ್, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿ.ಶ್ರಿನಿವಾಸಗೌಡ ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು