ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಜಯರಾಮಯ್ಯ, ಕೆ.ಎಂ. ಶಿವಕುಮಾರ್, ರಘು ಅವರಿಗೆ ಸನ್ಮಾನ
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಜಯರಾಮಯ್ಯ, ಕೆ.ಎಂ. ಶಿವಕುಮಾರ್, ರಘು ಅವರನ್ನು ಸನ್ಮಾನಿಸಲಾಯಿತು.
ರಾಮನಗರ : ಪರಂಪರಾಗತವಾಗಿ ಬಂದ ಸಂಪತ್ತಾದ ಪರಿಸರವನ್ನು ಉಳಿಸಿ ಮುಂದಿನ ತಲೆಮಾರಿ ಉಡುಗೊರೆಯಾಗಿ ಕೊಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಶಿವುಗೌಡ ತಿಳಿಸಿದರು.
ನಗರದ ಶ್ರೀ ಶಾರದಾಂಬೆ ದೇವಾಲಯದಲ್ಲಿ ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಗಿಡ ನೆಡುವ ಪ್ರವೃತ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಮನೆಗೊಂದು ಮರ, ಊರಿಗೊಂದು ವನದಂತೆ ಮರಗಿಡಗಳನ್ನು ಬೆಳೆಸಬೇಕು ಎಂದು ತಿಳಿಸಿದರು.
ಮುಂದಿನ ಪೀಳಿಗೆ ಆರೋಗ್ಯವಂತರಾಗಿ ಬಾಳಬೇಕಾದರೆ ಪರಿಸರ ಸಂರಕ್ಷಣೆ ಅಗತ್ಯವಿದೆ. ನಮಗೆ ಶೇ 33 ರಷ್ಟು ಅರಣ್ಯ ಇರಬೇಕು. ಆದರೆ ಶೇ 21 ರಷ್ಟು ಅರಣ್ಯ ಇದೆ. ಆದ್ದರಿಂದಲೇ ಬರಗಾಲ, ಪ್ರವಾಹ, ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ ಎಂದು ತಿಳಿಸಿದರು.
ಇದನ್ನು ತಡೆಗಟ್ಟಬೇಕಾದರೆ ಮರಗಳನ್ನು ಪೆÇೀಷಿಸುವುದು ಎಲ್ಲರ ಜೀವನದ ಭಾಗವಾಗಬೇಕು. ಪರಿಸರವನ್ನು ಉಳಿಸಿ ಬೆಳೆಸುವ ಮೂಲಕ ಮುಂದಿನ ಭವಿಷ್ಯದಲ್ಲಿ ಎದುರಾಗುವ ಅನೇಕ ಅಪಾಯಗಳನ್ನು ತಪ್ಪಿಸಬಹುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಜಯರಾಮಯ್ಯ, ಒಂದು ಲೀಟರ್ ಪ್ಲಾಸ್ಟಿಕ್ ಬಾಟಲ್ ಮೇಲೆ ‘ಡೋಂಟ್ ಯೂಸ್ ಪ್ಲಾಸ್ಟಿಕ್' ಮತ್ತು ‘ಇಂಡಿಯಾ’ ಎಂಬ ಪದವನ್ನು 30,041 ಬಾರಿ ಬರೆದು ಪರಿಸರ ಜಾಗೃತಿ ಮೂಡಿಸುತ್ತಿರುವ ಕೆ.ಎಂ. ಶಿವಕುಮಾರ್, ಚನ್ನಪಟ್ಟಣ ತಾಲ್ಲೂಕಿನ ರಾಂಪುರ ಗ್ರಾಮದ ಸರ್ಕಾರಿ ಗುಂಡು ತೋಪಿನಲ್ಲಿ ಸಸಿ ನೆಟ್ಟು ಬೆಳೆಸಿ ಇತರರಿಗೆ ಮಾದರಿ ಆಗಿರುವ ರಘು ಅವರನ್ನು ಸನ್ಮಾನಿಸಲಾಯಿತು.
ಹಿರಿಯ ಸಮಾಜ ಸೇವಕ ಕೆ.ಎಲ್. ಶೇಷಗಿರಿರಾವ್, ಜಿಲ್ಲಾ ಲೇಖಕರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಸ್. ರುದ್ರೇಶ್ವರ, ಅಮೃತ ವಿಕಲಚೇತನ ಚಾರಿಟಬಲ್ ಟ್ರಸ್ಟಿನ ಕಾರ್ಯದರ್ಶಿ ಟಿ. ರಮೇಶ್, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಆರ್. ವಿನುತ, ಯಲ್ಲೊ ಅಂಡ್ ರೆಡ್ ಸಂಸ್ಥೆಯ ಅಮಿತ್ ರಾಜ್ ಶಿವ, ಕೃಷ್ಣಜೋಶಿ, ಅರ್ಚಕ ಶ್ರೀನಿವಾಸಬಾಬು, ನೃತ್ಯ ನಿರ್ದೇಶಕ ಎಸ್. ರೇಣುಕಾಪ್ರಸಾದ್, ಪತ್ರಕರ್ತ ಯೋಗೇಶ್, ಲೇಖಕ ಲಕ್ಷ್ಮಿಕಿಶೋರ್ ಅರಸ್ ಇತರರು ಉಪಸ್ಥಿತರಿದ್ದರು.
ವಿದ್ಯಾರ್ಥಿ ಎಂ.ವೈ. ತನ್ಮಯ್ ಪ್ರಾರ್ಥಿಸಿದರು. ಲೇಖಕ ವಿಜಯ್ ರಾಂಪುರ ಸ್ವಾಗತಿಸಿದರು. ಉಪನ್ಯಾಸಕ ಅಕ್ಕೂರು ಬಸವರಾಜ್ ನಿರೂಪಿಸಿದರು. ಕವಿ ದರ್ಶನ್ ವಂದಿಸಿದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು