ತಾಲ್ಲೂಕು ಸಾಮಾನ್ಯ ಸಭೆಯಲ್ಲಿ ಎಲ್ಲಾ ಇಲಾಖೆಯೂ ಗೌಣ. ರಿಂಗಣಿಸಿದ ಕೋವಿಡ್, ಮಾಹಿತಿ ನೀಡಿದ ಡಾ ರಾಜು
ಚನ್ನಪಟ್ಟಣ:ಜೂ/೧೬/೨೦/ಮಂಗಳವಾರ. ತಾಲ್ಲೂಕಿನಲ್ಲಿ ಒಂಭತ್ತು ಸೋಂಕಿತರು ಇದ್ದು, ಸ್ಥಳೀಯರಿಗೆ ನೇರವಾಗಿ ಸೋಂಕು ಹರಡಿಲ್ಲ. ಸ್ಥಳಿಯರಿಗೆ ಸೋಂಕು ಬಂದಿರುವುದು ಬೆಂಗಳೂರು ಹಾಗೂ ಪಾದರಾಯನಪುರ ಜೈಲು ವಾಸಿಗಳಿಂದ ಹರಡಿದೆ. ಅದಕ್ಕೆ ಸೂಕ್ತ ಕ್ರಮಗಳನ್ನು ಕೈಗೊಂಡು ನಿಯಂತ್ರಣ ದಲ್ಲಿ ಇರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ ರಾಜು ಸಭೆಗೆ ಮಾಹಿತಿ ನೀಡಿದರು.
ಇಂದು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.
ಸರ್ಕಾರದ ಮಾನದಂಡ ದ ಮೂಲಕವೇ ಕ್ರಮ ಕೈಗೊಳ್ಳುತ್ತಿದ್ದೇವೆ. ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತರ ಜೊತೆಗೂಡಿ, ಪೋಲಿಸರ ಮಾಹಿತಿ ಪ್ರಕಾರ ಇನ್ಸ್ಟಿಟ್ಯೂಷನಲ್ ಮತ್ತು ಹೌಸ್ ಕ್ವಾರಂಟೈನ್ ಮಾಡುತ್ತಿದ್ದೇವೆ.
ಯಾವುದೇ ವ್ಯಕ್ತಿಯನ್ನು ಕ್ವಾರಂಟೈನ್ ಮಾಡಿ ಅಥವಾ ಬೇಡ ಎಂದು ಹೇಳುವ ಕೆಲ ಪ್ರಭಾವಿ ಕರೆಗಳು ಬರುತ್ತಿದ್ದು, ಯಾರ ಕರೆ ಗೂ ಸೊಪ್ಪು ಹಾಕದೆ, ಸೋಂಕಿತನ ಮಾಹಿತಿ ಮೇರೆಗೆ ಕ್ವಾರಂಟೈನ್ ಮಾಡುತ್ತಿದ್ದೇವೆ ಎಂದರು.
ಇವರಲ್ಲಿ ದ್ವಿತೀಯ ಸಂಪರ್ಕಕ್ಕೆ ಬರುವ ವಯಸ್ಸಾದವರಿಗೆ, ಮಕ್ಕಳಿಗೆ, ಖಾಯಿಲೆ ಇರುವವರಿಗೆ, ಗರ್ಭಿಣಿ ಸ್ತ್ರೀಯರಿಗೆ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಬದಲು ಕಡ್ಡಾಯವಾಗಿ ಹೌಸ್ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಶ್ರೀಗಂಧ, ಬೀಟೆ, ಮಹಾಗನಿ, ತುರುಬೇವು, ರಕ್ತಚಂದನ ಮತ್ತಿತರ ಗಿಡಗಳು, ೧ ಲಕ್ಷ, ರೇಷ್ಮೆ ಕಡ್ಡಿ ಒಂದೂವರೆ ಲಕ್ಷ, ನುಗ್ಗೆ ಮತ್ತು ಅಗಸೆ ೨೦ ಸಾವಿರ ಗಿಡಗಳನ್ನು ಬೆಳೆಸಿದ್ದು, ಈಗಾಗಲೇ ಕೆಲವು ರೈತರಿಗೆ ವಿತರಿಸಿದ್ದೇವೆ. ಪರಿಸರ ದಿನದ ಪ್ರಯುಕ್ತವಾಗಿ ಹದಿನೈದು ಸಾವಿರ ಗಿಡಗಳನ್ನು ನಾವು ನಾಟಿ ಮಾಡಿದ್ದಲ್ಲದೆ ವಿತರಿಸಲಾಗಿದೆ ಎಂದು ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ನಿರ್ದೇಶಕಿ ಚೈತ್ರಾ ವಿವರಿಸಿದರು.
ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಬೊಮ್ಮೇಶ್ ಕೃಷಿ ಬೀಜ, ರಸಗೊಬ್ಬರ ವನ್ನು ಮುಂಗಾರು ಮಳೆಗೆ ಅನುಕೂಲ ಆಗುವಂತೆ ಶೇಖರಿಸಲಾಗುತ್ತದೆ ಎಂಬ ಮಾಹಿತಿ ನೀಡಿದರು.
ತೋಟಗಾರಿಕೆ ಇಲಾಖೆಯ ವಿವೇಕ್ ಈ ಬಾರಿ ಮಳೆ ಮತ್ತು ಬಿರುಗಾಳಿಗೆ ಬಾಳೆ ಮತ್ತು ತೆಂಗು ನಾಶವಾಗಿದ್ದು, ಕಂದಾಯ ಇಲಾಖೆ ಜೊತೆಗೂಡಿ ವರದಿ ಸಲ್ಲಿಸಲಾಗಿದೆ ಎಂದರು.
ರೇಷ್ಮೆ ಇಲಾಖೆ ಅಧಿಕಾರಿ ಮಂಜುನಾಥ ರವರು ರೇಷ್ಮೆ ಹುಳು ಸಾಕಾಣಿಕೆ ಮತ್ತು ರೇಷ್ಮೆ ಬೆಳೆಯ ಬಗ್ಗೆ ಮಾಹಿತಿ ಒದಗಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಾಹಿತಿಗೆ ಗರಂ ಆದ ಅಧ್ಯಕ್ಷ ರಾಜಣ್ಣ ಅಂತರ್ಜಾತಿ ವಿವಾಹಕ್ಕೆ ನೀಡಿರುವ ಪ್ರೋತ್ಸಾಹ ಹಣ ನೀಡಲು ತಾಲ್ಲೂಕು ಪಂಚಾಯತಿಯಿಂದ ಅನುಮತಿ ಪಡೆದಿಲ್ಲ. ಅವರನ್ನು ಸಭೆಯಲ್ಲಿ ಖುದ್ದು ಹಾಜರುಪಡಿಸಿ, ಹಾಗೂ ನಿಮ್ಮ ಇಲಾಖೆಯಲ್ಲಿ ಬಡ ಮಕ್ಕಳಿಗಾಗಿ ಹಾಸ್ಟೆಲ್ ಇದ್ದು ಅವರು ಈಗ ಮನೆಯಲ್ಲಿಯೇ ಇರುವುದರಿಂದ ಅವರಿಗೆ ಊಟದ ವ್ಯವಸ್ಥೆ ಗೆ ಆದ್ಯತೆ ನೀಡಿ ಎಂದರು.
ಹತ್ತನೇ ತರಗತಿ ಪರೀಕ್ಷೆಗೆ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದೇವೆ. ನಗರದಲ್ಲಿ ಐದು ಸೇರಿದಂತೆ ತಾಲ್ಲೂಕಿನಲ್ಲಿ ಹದಿನಾಲ್ಕು ಪರೀಕ್ಷಾ ಕೇಂದ್ರಗಳಿವೆ. ಕೋವಿಡ್-೧೯ ನಿಂದ ಮುಂದೆ ತೊಂದರೆ ಆಗದಿರಲಿ ಎಂದು ಎರಡು ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಪೋಷಕರು ಆತಂಕದಲ್ಲಿದ್ದು ಶಾಲೆ ಪ್ರಾರಂಭವು ಸರ್ಕಾರದ ಆದೇಶದ ಮೇಲೆ ನಿಂತಿದೆ. ಹತ್ತನೇ ತರಗತಿ ಪರೀಕ್ಷೆ ಬರೆಯಲು ಈ ಬಾರಿ ಬೇರೆ ತಾಲ್ಲೂಕಿನ ಇಪ್ಪತ್ತೊಂದು ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯುತ್ತಿದ್ದು ಒಟ್ಟು ೩,೦೦೪ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. ಸೀಲ್ಡೌನ್ ಆಗಿರುವ ಗ್ರಾಮಗಳ ವಿದ್ಯಾರ್ಥಿಗಳಿಗೆ ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆಯ ಕುಸುಮಲತಾ ಮಾಹಿತಿ ನೀಡಿದರು.
ಚಿರತೆ, ಕರಡಿ ಮತ್ತು ಆನೆಗಳ ಹಾವಳಿ ಹೆಚ್ಚಾಗಿರುವುದು ನಿಜ. ಏಪ್ರಿಲ್ ನಂತರ ಮೂರು ಚಿರತೆಗಳನ್ನು ಸೆರೆ ಹಿಡಿಯಲಾಗಿದೆ. ಆನೆಗಳನ್ನು ಎಷ್ಟೇ ಬಾರಿ ಅರಣ್ಯಕ್ಕೆ ಅಟ್ಟಿದರೂ ವಾಪಸ್ಸಾಗುತ್ತಿವೆ ಎಂದು ಅರಣ್ಯಾಧಿಕಾರಿ ಮಹಮ್ಮದ್ ಮನ್ಸೂರ್ ಮಾಹಿತಿ ನೀಡಿದರು. ದನಿಗೂಡಿಸಿದ ಅಧ್ಯಕ್ಷ ರಾಜಣ್ಣ ರೈತರ ಬೆಳೆ ಹಾನಿ ಮತ್ತು ಮನುಷ್ಯರಿಗೆ ಆಗಿರುವ ಹಾನಿಗೆ ತಕ್ಕ ಪರಿಹಾರ ನೀಡುವಂತೆ ಹಾಗೂ ಶಾಶ್ವತ ಪರಿಹಾರ ಹುಡುಕುವಂತೆ ಸಲಹೆ ನೀಡಿದರು. ಇನ್ನಿತರ ಇಲಾಖೆಯ ಅಧಿಕಾರಿಗಳು ತಂತಮ್ಮ ವರದಿ ಒಪ್ಪಿಸಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ, ಉಪಾಧ್ಯಕ್ಷೆ ಸಾಕಮಾದಮ್ಮ, ಕಾರ್ಯನಿರ್ವಹಣಾಧಿಕಾರಿ ಚಂದ್ರು, ಎಇಓ ಲೋಕೇಶ್, ತಾಲ್ಲೂಕು ಪಂಚಾಯತಿ ಸದಸ್ಯರು ಮತ್ತು ಅಧಿಕಾರಿಗಳು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು